Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
ಶುಕ್ರವಾರ ರಾತ್ರಿ ಮೈಸೂರಲ್ಲಿ ಆನೆಗಳಿಂದ ಹೈಡ್ರಾಮಾ
Team Udayavani, Sep 21, 2024, 8:01 AM IST
ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಬಂದಿರುವ ಗಜಪಡೆಯ ಆನೆಗಳಲ್ಲಿ ಒಂದಾದ ಧನಂಜಯ ಆನೆ ಮದವೇರಿ ಕಂಜನ್ ಆನೆಯೊಂದಿಗೆ ಕಾದಾಟಕ್ಕಿಳಿದಿದ್ದಾನೆ. ಪರಿಣಾಮ ಕಂಜನ್ ಅರಮನೆಯಿಂದೀಚೆಗೆ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 8ರ ಸಮಯದಲ್ಲಿ ಧನಂಜಯ, ತನ್ನ ಪಕ್ಕದಲ್ಲಿದ್ದ ಕಂಜನ್ ನೊಂದಿಗೆ ಕಾದಾಟ ಶುರು ಮಾಡಿದ್ದಾನೆ. ಈ ವೇಳೆ ಕಂಜನ್ ಕಟ್ಟಿದ್ದ ಸರಪಳಿ ಕಿತ್ತುಕೊಂಡು ಅರಮನೆ ಅಂಗಳದಲ್ಲಿ ಓಡಾಡಿದೆ. ಹಿಂದೆಯಿಂದ ಧನಂಜಯ ಕಂಜನ್ನನ್ನು ಬೆದರಿಸುತ್ತ ಓಡಿದ್ದಾನೆ. ಇದರಿಂದ ಮತ್ತಷ್ಟು ಹೆದರಿದ ಕಂಜನ್ ಜಯಮಾರ್ತಾಂಡ ದ್ವಾರದ ಮೂಲಕ ದೊಡ್ಡಕೆರೆ ಮೈದಾನದ ಬಳಿಯ ರಸ್ತೆಯತ್ತ ಓಡಿದೆ.
ಈ ವೇಳೆ ರಸ್ತೆಯಲ್ಲಿದ್ದ ಜನರು ಆನೆಗಳ ಈ ವರ್ತನೆಗೆ ಹೆದರಿ ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಬಳಿಕ ರಸ್ತೆಯಲ್ಲಿನ ವಾಹನ ಕಂಡು ಕಂಜನ್ ಗಕ್ಕನೆ ನಿಂತಿದ್ದಾನೆ. ಮಾವುತ- ಕಾವಾಡಿಗಳ ಚಾಣಾಕ್ಷತದಿಂದ ಅದನ್ನು ಸಮಾಧಾನ ಪಡಿಸಿ ಒಳಗೆ ಕರೆದುಕೊಂಡು ಹೋಗಿದ್ದಾರೆ.
ಗಜಪಯಣ ಮೂಲಕ ಮೈಸೂರಿಗೆ ಕರೆತಂದಾಗ ಲಾರಿಯಿಂದ ಕೆಳಗಿಳಿಯಬೇಕಾದರೆ ಕಂಜನ್ ಕಾಲಿಗೆ ಪೆಟ್ಟಾಗಿದ್ದರಿಂದ ಗಜಪಡೆಯ ಎಲ್ಲಾ ತಾಲೀಮಿನಿಂದ ವಿನಾಯಿತಿ ನೀಡಿ ಚಿಕಿತ್ಸೆ ಕೊಡಲಾಗಿತ್ತು. ವಾರದ ಹಿಂದೆಯಷ್ಟೇ ಚೇತರಿಸಿಕೊಂಡಿದ್ದ ಕಂಜನ್ ವ್ಯತಿರಿಕ್ತವಾಗಿ ವರ್ತಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Hagga movie review: ರೋಚಕ ರಹಸ್ಯದ ಕಥಾನಕ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.