ಸಿದ್ದರಾಮಯ್ಯ ಮೇಲೆ ಒಲವಿದ್ದರೂ ಕಾಂಗ್ರೆಸ್ಸಿಗೆ ಮತ ಕೇಳಲ್ಲ


Team Udayavani, Apr 22, 2018, 12:50 PM IST

m5-siddaramaiah.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ನನಗೆ ವೈಯಕ್ತಿಕವಾಗಿ ಒಲವಿದೆ. ಹಾಗೆಂದು ನಾನು ಕಾಂಗ್ರೆಸ್ಸಿಗೆ ಮತ ನೀಡಿ ಎಂದು ಹೇಳಲ್ಲ. ಎಲ್ಲ ಪಕ್ಷಗಳಲ್ಲಿಯೂ ನನಗೆ ಸ್ನೇಹಿತರಿದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್‌ ರೈ ಹೇಳಿದರು.

ನಗರದಲ್ಲಿ ಶನಿವಾರ ಜಸ್ಟ್‌ ಆಸ್ಕಿಂಗ್‌ ಅಭಿಯಾನದ ಭಾಗವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಎಡ-ಬಲ ಪಂಥಗಳಲ್ಲಿ ನಂಬಿಕೆ ಇಲ್ಲ. ನಾನೊಬ್ಬ ಕಲಾವಿದ, ಈ ದೇಶದ ಪ್ರಜೆ, ಜನಸಾಮಾನ್ಯನಾಗಿ ಯಾರ ಪರ-ವಿರುದ್ಧವು ಇಲ್ಲದೆ, ಜಸ್ಟ್‌ ಆಸ್ಕಿಂಗ್‌ ಅಭಿಯಾನದ ಮೂಲಕ ಅಭಿಪ್ರಾಯ ಮಂಡಿಸುತ್ತಿರುವೆ. ಇದರಿಂದ ಕೆಲವರಾದರೂ ಬದಲಾಗಬಹುದು ಎಂಬ ವಿಶ್ವಾಸ ನನ್ನದು ಎಂದರು.

ಜಸ್ಟ್‌ ಆಸ್ಕಿಂಗ್‌ ರಾಜಕೀಯ ವೇದಿಕೆಯಲ್ಲ ಎಂದ ಅವರು, ಇದರಿಂದ ಪ್ರೇರಿತರಾಗಿ ಕೆಲವರಾದರೂ ನಾಯಕರಾಗಿ ರೂಪುಗೊಳ್ಳಬಹುದು. ಆದರೆ, ಅವರು ವಿರೋಧಪಕ್ಷದವರೇ ಆಗಿರುತ್ತಾರೆ ಎಂದ ಅವರು, ವಿಧಾನಸಭೆ ಚುನಾವಣೆ ಮುಗಿದ ಬಳಿಕ ಜೂನ್‌ ತಿಂಗಳಿಂದ ರಾಜಾದ್ಯಂತ ಕಮ್ಮಟ, ವಿವಿಧ ಸ್ಪ$ರ್ಧೆಗಳ ಮೂಲಕ ಜನಸಾಮಾನ್ಯರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವಲ್ಲಿ ಜಸ್ಟ್‌ ಆಸ್ಕಿಂಗ್‌ ವೇದಿಕೆ ಕೆಲಸ ಮಾಡಲಿದೆ ಎಂದು ಹೇಳಿದರು.

ನಾನೊಬ್ಬ ಭಾರತದ ಜವಾಬ್ದಾರಿಯುತ ಪ್ರಜೆಯಾಗಿ ಸದ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ನನ್ನ ಅನಿಸಿಕೆ, ಅಭಿಪ್ರಾಯಗಳನ್ನು ಜನಸಾಮಾನ್ಯರೊಂದಿಗೆ ಮುಕ್ತವಾಗಿ ಹಂಚಿಕೊಳ್ಳುವ ಸಲುವಾಗಿ ರಾಜ್ಯಾದ್ಯಂತ ಜಸ್ಟ್‌ ಆಸ್ಕಿಂಗ್‌ ಅಭಿಯಾನ ಕೈಗೊಂಡಿರುವೆ, ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವೂ ಇಲ್ಲ. ನಾನು ಯಾವ ಪಕ್ಷಕ್ಕೂ ಮತ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಆದರೆ, ರಾಜ್ಯದಲ್ಲಿ ಕೋಮುವಾದಿಗಳ ರಾಜಕಾರಣ ಬೇಡ, ಜಾತಿ-ಧರ್ಮದ ಹೆಸರಲ್ಲಿ ರಾಜಕೀಯ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸುವೆ, ಜಾಗೃತರಾಗಿ ಮತ ಚಲಾಯಿಸುವ ಮೂಲಕ ಸಾಮರಸ್ಯದಿಂದ ಕೂಡಿ ಬಾಳುವಂತಹ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಎಂದು ಮನವಿ ಮಾಡುವೆ ಎಂದರು.

ನನ್ನ ಈ ಜಸ್ಟ್‌ ಆಸ್ಕಿಂಗ್‌ ಜಾಗೃತಿ ಕಾರ್ಯಕ್ರಮಕ್ಕೆ ಸಮಾಜ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಸಮಾಜದಲ್ಲಿ ಧ್ವನಿ ಇಲ್ಲದ ಹಲವರ ಧ್ವನಿಯಾಗಿ ನಾನು ಕೆಲಸ ಮಾಡುತ್ತಿರುವೆ ಎಂದು ಹೇಳಿಕೊಂಡರು.ಯಾವುದಾದರೂ ರಾಜಕೀಯ ಪಕ್ಷ ಸೇರುವುದಾ? ಇಲ್ಲ ನಾನೇ ಹೊಸ ಪಕ್ಷ ಕಟ್ಟುವುದಾ? ಎಂಬ ಚಿಂತನೆ ಶುರು ಆಯಿತು.

ಆದರೆ, ಸ್ವಾತಂತ್ರ್ಯಾ ನಂತರ ಎಲ್ಲ ರಾಜಕೀಯ ಪಕ್ಷಗಳೂ ನಂಬಿಕೆ ದ್ರೋಹ ಮಾಡುತ್ತಲೇ ಬಂದಿವೆ, ಹೀಗಾಗಿ ಜನರ ಧ್ವನಿಯಾದರೆ ಯಾರೇ ಅಧಿಕಾರಕ್ಕೆ ಬಂದರೂ ಜನರ ಕೆಲಸ ಮಾಡಿಸಬಹುದು ಎಂಬ ಕಾರಣದಿಂದ ಜಸ್ಟ್‌ ಆಸ್ಕಿಂಗ್‌ ಅಭಿಯಾನ ಆರಂಭಿಸಿದೆ ಎಂದು ಹೇಳಿದರು.

ಬೇರೊಂದು ಧರ್ಮದ ಮೇಲಿನ ದ್ವೇಷದಿಂದ ಕೆಲವರು ನನ್ನನ್ನು ಪಾಕಿಸ್ಥಾನಕ್ಕೆ ಹೋಗು ಎನ್ನುತ್ತಾರೆ, ನಾನೇಕೆ ಹೋಗಲಿ. ನನ್ನ ಪ್ರಶ್ನೆಗಳಿಗೆ ಮೊದಲು ಉತ್ತರ ಕೊಡಿ? ಪ್ರಾಣಿಗಳಿಗೆ ಎಲ್ಲವೂ ಪ್ರಾಣಿಗಳಂತೆಯೇ ಕಾಣುತ್ತವೆ, ನಾನು ಕಾಗೆ ಕೂಗುತ್ತಿದ್ದೇನೆ, ಈಗ ವಿಷಯವಿಲ್ಲ ಅದಕ್ಕೇ ಘರ್ಜಿಸುತ್ತಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ತಿರುಗೇಟು ನೀಡಿದರು.

ಕಾವೇರಿಯನ್ನು ರಾಜಕೀಯದಿಂದ ಹೊರಗಿಡಬೇಕು. ರಾಜಕಾರಣಿಗಳಿಗೆ ಸಮಸ್ಯೆ ಜೀವಂತವಾಗಿರಿಸುವುದರಲ್ಲೇ ಆಸಕ್ತಿ, ಕಮಲ್‌ ಹಾಸನ್‌, ರಜನೀಕಾಂತ್‌ ಮಾತನಾಡಿದಾಕ್ಷಣ ನಾನೂ ಕಾವೇರಿ ಬಗ್ಗೆ ಮಾತನಾಡಬೇಕು ಎಂದು ಯಾಕೆ ಬಯಸುತ್ತೀರಿ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.