ವಸ್ತು ಪ್ರದರ್ಶನ: ಆನ್ಲೈನ್‌ ವಂಚನೆ ಕುರಿತು ಜಾಗೃತಿ


Team Udayavani, Oct 11, 2022, 5:19 PM IST

ವಸ್ತು ಪ್ರದರ್ಶನ: ಆನ್ಲೈನ್‌ ವಂಚನೆ ಕುರಿತು ಜಾಗೃತಿ

ಮೈಸೂರು: ಆನ್ಲೈನ್‌ ಮೂಲಕ ಹ್ಯಾಕಿಂಗ್‌, ನೆಟ್‌ ಬ್ಯಾಕಿಂಗ್‌ ವಂಚನೆಗಳಿಂದ ಎಚ್ಚರಿಕೆ ವಹಿಸುವುದು ಹೇಗೆ, ಅಪರಿಚಿತರ ವಿಡಿಯೋ ಕಾಲ್‌ ಸ್ವೀಕರಿಸುವ ಮುನ್ನ ಅನುಸರಿಸಬೇಕಾದ ಕ್ರಮಗಳೇನು, ಆನ್ಲೈನ್‌ ವೇದಿಕೆಯಲ್ಲಿ ಹಣ ಹೂಡಿಕೆಗೂ ಮುನ್ನ ಕೈಗೊಳ್ಳಬೇಕಾದ ಎಚ್ಚರಿಕೆಗಳು ಮತ್ತು ಸಾರ್ವಜನಿಕರು ಅಪರಾಧ ದಾಖಲೆಗಳನ್ನು ಪಡೆಯುವ ಸುಲಭ ಮಾದರಿ ಹಾಗೂ ಪೊಲೀಸ್‌ ಇಲಾಖೆಯ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಒಂದೇ ಸೂರಿನಡಿ ಲಭ್ಯವಾಗುತ್ತಿದೆ.

ಹೌದು… ನಗರದ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಹಾಗೂ ಸಿಐಡಿ, ನಗರ ಪೊಲೀಸ್‌ ಸಹಯೋಗದಲ್ಲಿ ತೆರೆದಿರುವ ಮಳಿಗೆಯಲ್ಲಿ ಸೈಬರ್‌ ಅಪರಾಧಗಳ ಕುರಿತು ಸಮಗ್ರ ಮಾಹಿತಿ, ವಂಚನೆಯಿಂದ ಪಾರಾಗುವ ಬಗೆಯ ಬಗ್ಗೆ ಮಾಹಿತಿ ಒದಗಿಸಲಾಗುತ್ತಿದೆ.

ಸೈಬರ್‌ ಅಪರಾಧ ತಡೆ ಸುರಕ್ಷಾ ಸಲಹೆ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಸ್ತುಪ್ರದರ್ಶನ ಆವರಣದಲ್ಲಿ ಪೊಲೀಸರು ಮಳಿಗೆ ತೆರೆದಿದ್ದು, ಸೈಬರ್‌ ಅಪರಾಧ ತಡೆ ಸುರಕ್ಷಾ ಸಲಹೆಗಳನ್ನು ನೀಡಲಾಗಿದೆ. ಬ್ಯಾಂಕಿಂಗ್‌ ಮಾಹಿತಿಗಳಾದ ಕಾರ್ಡ್‌ ನಂಬರ್‌, ಮುಕ್ತಾಯದ ಅವಧಿ, ಸಿವಿವಿ, ಒಟಿಪಿ, ಪಿನ್‌, ಯುಪಿಐ ಎಂಪಿಎನ್‌ ಮಾಹಿತಿಗಳನ್ನು ಯಾರೊಬ್ಬರಿಗೂ ನೀಡಬಾರದು. ಹಾಗೆಯೇ ಅಪರಿಚಿತ ಮೂಲದ ಸಂದೇಶ, ಇಮೇಲ್‌ಗ‌ಳಲ್ಲಿನ ಲಿಂಕ್‌ಗಳನ್ನು ಕ್ಲಿಕ್‌ ಮಾಡಬಾರದು. ಸರ್ಚ್‌ ಎಂಜಿನ್‌ನಲ್ಲಿ ಕಂಡು ಬರುವ ಸಂಪರ್ಕ ಸಂಖ್ಯೆ, ಇಮೇಲ್‌ ವಿಳಾಸ ಇತ್ಯಾದಿಗಳನ್ನು ಬಳಸುವ ಮೊದಲು ನೈಜತೆ ತಿಳಿಯಬೇಕು ಎಂಬ ಮಾಹಿತಿಯನ್ನು ಪ್ಲೇ ಕಾರ್ಡ್‌ನೊಂದಿಗೆ ಪೊಲೀಸರು ಅರಿವು ಮೂಡಿಸಿದರು. ಅನಧಿಕೃತ ಆ್ಯಪ್‌ ಬಳಸಬೇಡಿ: ಆನ್‌ ಲೈನ್‌ ಮೂಲಕ ಸಾಲ ನೀಡುವ ಅನ ಧಿಕೃತ ಆ್ಯಪ್‌ ಬಳಸ ಬಾರದು. ಉದ್ಯೋಗ ಕೊಡಿ ಸುವ ಹಣದ ಬೇಡಿಕೆ ಇಟ್ಟಲ್ಲಿ ಯಾವುದೇ ಕಾರಣಕ್ಕೂ ಹಣ ನೀಡಬಾರ ದು. ಮಕ್ಕಳ ಅಶ್ಲೀಲ ಚಿತ್ರ, ದೃಶ್ಯಾವಳಿ ಇತ್ಯಾದಿ ಆನ್‌ಲೈನ್‌ ನಲ್ಲಿ ಹುಡುಕುವುದು ಅಪ ರಾಧ ಎಂಬ ಮಾಹಿತಿ ಒದಗಿಸಲಾಗಿದೆ.

ಹಣ ಹೂಡಿಕೆಗೂ ಮುನ್ನಾ ಇರಲಿ ಎಚ್ಚರಿಕೆ: ಆನ್ಲೈನ್‌ ವೇದಿಕೆಯಲ್ಲಿ ಖಚಿತವಲ್ಲದ ಸಂಸ್ಥೆಗೆ ಹಣ ಹೂಡಿಕೆ ಮಾಡಬಾರದು. ವೆಬ್‌ಸೈಟ್‌, ಕಂಪನಿ, ವ್ಯಕ್ತಿಯನ್ನು ನಿರ್ಣಯಿಸಿ ಹೂಡಿಕೆ ಮಾಡುವುದು ಅಪಾಯಕಾರಿ. ಹಾಗೆಯೇ ಇ ಲಾಸ್ಟ್‌ ಮೊಬೈಲ್‌ ಅಪ್ಲಿಕೇಷನ್‌ ಮೂಲಕ ಮೊಬೈಲ್‌, ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಸಿಮ್‌ ಕಾರ್ಡ್‌, ಪಾನ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಮುಂತಾದ ವಸ್ತುಗಳು ಕಳೆದು ಹೋದರೆ ದೂರು ನೀಡುವ ಬಗ್ಗೆ ಮಾಹಿತಿ ಪಡೆಯಬಹುದು. ನಾಗರಿಕ ಕೇಂದ್ರಿತ ಪೋರ್ಟಲ್‌ ಸೇವೆಗಳ ಪಟ್ಟಿಯಲ್ಲಿ ಹಿರಿಯ ನಾಗರಿಕರ ನೋಂದಣಿ, ಬೀಗ ಹಾಕಿದ ಮನೆಯ ನೋಂದಣಿ ಮಾಡಿಸುವ ಬಗ್ಗೆ ಜನರಿಗೆ ತಿಳಿಸಿಕೊಡಲಾಯಿತು.

ಮಾಹಿತಿ ಮಳಿಗೆ ಉದ್ಘಾಟಿಸಿದ ಆಯುಕ್ತ : ಸೈಬರ್‌ ಅಪರಾಧದ ಬಗ್ಗೆ ಉಚಿತ ದೂ.112, 1930ಗೆ ಕರೆ ಮಾಡಿ ಅಥವಾ www.cybercrime.gov.in  (national cyber crime reporting portal) ನಲ್ಲಿ ನೋಂದಾಯಿಸಬಹುದಾಗಿದೆ. ಇದಕ್ಕೂ ಮುನ್ನಾ ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಸೈಬರ್‌ ಅಪರಾಧ ಸಂಬಂಧ ಮಾಹಿತಿಯ ಮಳಿಗೆಯನ್ನು ಉದ್ಘಾಟಿಸಿದರು. ಸಿಐಡಿ ಸೈಬರ್‌ ಕ್ರೈಂ ಎಸ್‌ಪಿ ಅನುಚೇತ್‌, ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಡಿಸಿಪಿ ಹಾಗೂ ಎಸಿಪಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಆನ್‌ಲೈನ್‌ ವಂಚನೆ ಮತ್ತು ದೈನಂದಿನ ವ್ಯವಹಾರದಲ್ಲಿ ನಡೆಯುವ ಅಪರಾಧ ಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ವಸ್ತುಪ್ರದರ್ಶನಲ್ಲಿ ಮಳಿಗೆ ಆರಂಭಿಸ ಲಾಗಿದೆ. ಜನರಿಗೆ ಜಾಗ್ರತೆವಹಿಸಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಾರ್ವಜನಿಕರು ಮಳಿಗೆಗೆ ಬಂದು ಮಾಹಿತಿ ಪಡೆದುಕೊಳ್ಳಿ. – ಡಾ.ಚಂದ್ರಗುಪ್ತ, ನಗರ ಪೊಲೀಸ್‌ ಆಯುಕ್ತ

ಸರ್ವರ್‌ ಹ್ಯಾಕ್‌, ಬ್ಲ್ಯಾಕ್‌ ಮೇಲ್‌, ಉದ್ಯೋಗ ಕೊಡಿಸುವುದಾಗಿ ಹಣ ಪಡೆ ಯುವುದು ಸೇರಿ ಅಂತರ್ಜಾಲ ಬಳಸಿ ಕೊಂಡು ವಂಚನೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದೆ. ಅಂತರ್ಜಾಲದ ಮೂಲಕ ವಂಚನೆ ಮಾಡುವವರಿಗೆ ಕನಿಷ್ಠ 3 ವರ್ಷದಿಂದ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. – ಅನುಚೇತ್‌, ಎಸ್‌ಪಿ, ಸಿಐಡಿ ಸೈಬರ್‌ ಕ್ರೈಂ.

-ಸತೀಶ್‌ ದೇಪುರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.