ಸರ್ಕಾರಗಳ ಧೋರಣೆಯಿಂದ ರೈತ ಆತ್ಮಹತ್ಯೆ


Team Udayavani, Sep 27, 2017, 1:01 PM IST

myss5.jpg

ಬೇರ್ಯ: ತನ್ನ ನೌಕರರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸುವ ಸರಕಾರ ರೈತರ ಹಿತವನ್ನು ಕಡೆಗಣಿಸುತ್ತಿದ್ದು, ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ನಿತ್ಯ ಅನ್ನದಾತ ಆತ್ಮಹತ್ಯೆಗೆ ಶರಣಾಗುವ ದುಸ್ಥಿತಿ ಎದುರಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಬೇಸರ ವ್ಯಕ್ತಪಡಿಸಿದರು. ಅವರು ಸಮೀಪದ ಮುಂಡೂರು ಗ್ರಾಮದಲ್ಲಿ ಮಂಗಳವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಸ್ಥಿತಿ: ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ವೇತನ ಆಯೋಗ ರಚಿಸಿ ಅದರ ಶಿಪಾರಸ್ಸುಗಳನ್ನು ಜಾರಿಗೊಳಿಸುವ ಸರ್ಕಾರ ಚಿಂತಾಜನಕ ಸ್ಥಿತಿಯಲ್ಲಿರುವ ರೈತರ ಬೇಡಿಕೆಗಳನ್ನು ಈಡೇರಿಸಲು ಮೀನಮೇಷ ಎಣಿಸುತ್ತಿದೆ. ಕೃಷಿ ಬೆಲೆ ಆಯೋಗದ ವರದಿಯನ್ನು ಜಾರಿಗೊಳಿಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ಬೆಳೆಗೆ ವೈಜಾnನಿಕ ಬೆಲೆ ನಿಗದಿಗಾಗಿ ಡಾ.ಎಂ.ಎಸ್‌.ಸ್ವಾಮಿನಾಥನ್‌ ರವರ ವರದಿಯನ್ನು ಜಾರಿಗೊಳಿಸಲು ಹಲವು ಬಾರಿ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿಯಾಗದ ಹೊರತು ಅನ್ನದಾತನ ಜೀವನಮಟ್ಟ ಸುಧಾರಿಸದು. ಈ ನಿಟ್ಟಿನಲ್ಲಿ ಕೇಂದ್ರ ಹಾಗು ರಾಜ್ಯಸರಕಾರಗಳು ಗಮನ ಹರಿಸಿ ಸ್ವಾಮಿನಾಥನ್‌ ವರದಿ ಜಾರಿ ಅಗತ್ಯ ಎಂದರು.

ಕಾಳಜಿಯಿಲ್ಲ: ಪ್ರಧಾನಿ ನರೇಂದ್ರ ಮೋದಿಯವರಿಗಾಗಲೀ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಲೀ ರೈತರ ಮೇಲೆ ಕಿಂಚಿತ್ತೂ ಕಾಳಜಿಯಿಲ್ಲ. ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಮೂರೂವರೆ ಸಾವಿರ ಹಾಗೂ ದೇಶಾದ್ಯಂತ ಒಂದೂವರೆ ಲಕ್ಷಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡರೂ ರೈತರ ಕಲ್ಯಾಣಕ್ಕಾಗಿ ಸೂಕ್ತ ಯೋಜನೆ ರೂಪಿಸಲು ಸರಕಾರಗಳು ವಿಫ‌ಲವಾಗಿವೆ. ಕೃಷಿ ಮಂತ್ರಿ ಅನುಷ್ಠಾನದಲ್ಲೂ ವಿಫ‌ಲರಾಗಿದ್ದಾರೆ ಎಂದರು.

ಪಾಂಡವಪುರ ಸಕ್ಕರೆ ಕಾರ್ಖಾನೆ ಹಾಗು ಮೈಷುಗರ್‌ ಕಾರ್ಖಾನೆಗೆ ಅಭಿವೃದ್ದಿಗೆ ನೂರಾರು ಕೋಟಿ ರೂ.ಆರ್ಥಿಕ ನೆರವು ನೀಡುವ ಸರಕಾರ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂ¸‌ಕ್ಕೆ ಅಗತ್ಯವಿರುವ ಕೇವಲ 20 ಕೋಟಿ ರೂ.ನೀಡಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ಹೋರಾಟ: ಶಾಸಕರು, ಮಂತ್ರಿಗಳು ಯಾವುದೆ ವಿರೋಧವಿಲ್ಲದೆ ತಮ್ಮ ಸಂಬಳ ಹೆಚ್ಚು ಮಾಡಿಕೊಳ್ಳುತ್ತಾರೆ.ಆದರೆ ದೇಶದ ಬೆನ್ನೆಲುಬಾದ ರೈತ ದಿನೆದಿನೇ ಸೊರಗುತ್ತಿದ್ದಾನೆ. ಈ ನಿಟ್ಟಿನಲ್ಲಿ ಜಾಗೃತರಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು. ಸಾರ್ವತ್ರಿಕ ಸಮಸ್ಯೆಗಳ ಬಗೆಹರಿಸಲು ಹೋರಾಟಕ್ಕೆ ಮುಂದಾಗಿ ಎಂದು ಸಲಹೆ ನೀಡಿದರು.

ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರವೀಂದ್ರ ಮಾತನಾಡಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಮುಂಡೂರು ರಾಮೇಗೌಡ, ಸಂಚಾಲಕ ಎಂ.ಆರ್‌.ಗಿರೀಶ್‌, ಗೌರವ ಅಧ್ಯಕ್ಷ ಕಾಳೇಗೌಡ, ಮುಂಡೂರು ಘಟಕದ ಅಧ್ಯಕ್ಷ ಕುಮಾರ್‌, ಉಪಾಧ್ಯಕ್ಷ ಸ್ವಾಮಿ,ಕಾರ್ಯದರ್ಶಿ ಅಶ್ವತ್ಥ್, ಖಜಾಂಚಿ ರಂಗಪ್ಪ, ಗ್ರಾಪಂ ಸದಸ್ಯ ತಮ್ಮಣ್ಣೇಗೌಡ, ಮುಂಡೂರು ರಮೇಶ್‌,ರಂಗಪ್ಪ ಇತರರಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.