ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರ ಸ್ಥಾಪಿಸಿ


Team Udayavani, Feb 21, 2022, 2:25 PM IST

ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರ ಸ್ಥಾಪಿಸಿ

ಮೈಸೂರು: ಪಂಜಾಬ್‌, ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಖರೀದಿ ಕೇಂದ್ರತೆರೆಯಬೇಕು. ಕೇಂದ್ರದಿಂದ ಹೆಚ್ಚಿನ ಅನುದಾನಪಡೆಯಲು ರಾಜ್ಯದ ಸಂಸದರ ಪ್ರಧಾನಿ ಭೇಟಿಮಾಡಿ ಮಾಡಿ ಮನವಿ ಮಾಡುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕನಿಷ್ಠ ಬೆಂಬಲ ಬೆಲೆ ಅಡಿ ಕೃಷಿ ಉತ್ಪನ್ನಗಳ ಖರೀದಿ ಅನುದಾನ ಬೇರೆ ಬೇರೆ ರಾಜ್ಯಗಳಿಗೆ ಹೆಚ್ಚುಅನುದಾನ ನೀಡಲಾಗುತ್ತಿದೆ. ಆದರೆ, ಕರ್ನಾಟಕಕ್ಕೆಕಡಿಮೆ ನೀಡುತ್ತಿದ್ದು, ಅದನ್ನು ಹೆಚ್ಚಿಸುವಂತೆ ರಾಜ್ಯಸರ್ಕಾರವನ್ನು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದರು.

ಕೊರೊನಾ ಸಂಕಷ್ಟದಲ್ಲಿ ರೈತರು ತೀವ್ರ ಸಂಕಷ್ಟ ಅನುಭವಿಸಿರುವ ಕಾರಣ ಕೃಷಿ ಜಮೀನು ಉಳ್ಳ ಎಲ್ಲಾ ರೈತರಿಗೂ ಬರಿ ಪಹಣಿ ಪತ್ರ ಆಧರಿಸಿ ಕನಿಷ್ಠಮೂರು ಲಕ್ಷ ಆಧಾರ ರಹಿತ ಬಡ್ಡಿ ಇಲ್ಲದ ಕೃಷಿ ಸಾಲ ನೀಡುವ ಎಲ್ಲ ಬ್ಯಾಂಕುಗಳಲ್ಲಿಜಾರಿಯಾಗಬೇಕು. ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿತೋರಿಸುವ ಮಾನದಂಡ ಬದಲಾಗಬೇಕು. ಕಬ್ಬಿನ ಎಥನಾಲ್‌ ಉತ್ಪಾದನಾಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು ಎಂದರು.

ರೈತರಿಗೆ ಪೂರ್ಣ ಹಣ ಪಾವತಿಸಿ: ಕಬ್ಬಿಗೆ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌, ಬೆಂಕಿಅನಾಹುತವಾದಾಗ ಸುಟ್ಟು ಹೋದ ಕಬ್ಬಿಗೆಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳುಕಬ್ಬಿನ ಹಣದಲ್ಲಿ ಶೇ.25ರಷ್ಟು ಕಟಾವುಮಾಡುವುದನ್ನು ತಪ್ಪಿಸಬೇಕು. ಎಫ್ಆರ್‌ಪಿಪೂರ್ಣ ಹಣ ರೈತರಿಗೆ ಪಾವತಿ ಆಗಬೇಕು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಈಡೇರಿಸಿ,ಈ ಬಾರಿಯ ರಾಜ್ಯ ಸರ್ಕಾರದ ರೈತರ ಅಭಿವೃದ್ಧಿಗೆಪೂರಕವಾದ ಬಜೆಟ್‌ ಮಂಡಿಸಬೇಕು ಎಂದು ಆಗ್ರಹಿಸಿದರು.

ನಾಳೆ ಕಬ್ಬು ಬೆಳೆಗಾರರ ಕಾರ್ಯಾಗಾರ: ಒಂದು ಎಕರೆಗೆ 168 ಟನ್‌ ಕಬ್ಬು ಬೆಳೆದು ವಿಶಿಷ್ಟ ಸಾಧನೆಮಾಡಿರುವ ಮಹಾರಾಷ್ಟ್ರದ ಕೃಷಿ ರತ್ನ ಡಾ.ಸಂಜೀವ್‌ ಮಾನೆ ಅವರ ಅನುಭವ ತಿಳಿಸಲುಫೆ.22ರಂದು ಕಬ್ಬು ಬೆಳೆಗಾರರ ರೈತರಕಾರ್ಯಾಗಾರ ಮೈಸೂರಿನ ಚೇತನ್‌ ಗಾರ್ಡನ್‌ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಗಾರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ವೀರನಗೌಡ ಪಾಟೀಲ್‌ ಉದ್ಘಾಟಿಸುವರು. ಎಸ್‌. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕ ಡಾ.ಖಂಡಗಾವಿ ಕಬ್ಬು ಬೇಸಾಯ ಕುರಿತು ಮಾತನಾಡುವರು. ಕಬ್ಬು ಬೆಳೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಆಯಾ ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿ ತಿಂಗಳುಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯಲ್ಲಿ ತಿಂಗಳಿಗೊಮ್ಮೆ ರೈತರ ಸಭೆ ನಡೆಸಲು ಸರ್ಕಾರ ಕಠಿಣ ಸೂಚನೆ ನೀಡಬೇಕು ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರ್‌ ಶಂಕರ್‌ ಬನ್ನಳ್ಳಿಹುಂಡಿ ರಾಜೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ದೇಶವೇ ಕಟುಕರ ಕೈಗೆ ಸಿಲುಕಿದೆ. ಅಧಿಕಾರದ ಮೋಹಕ್ಕಾಗಿರಾಜಕೀಯ ಪಕ್ಷಗಳು ಧರ್ಮದ ವಿಷಬೀಜ ಬಿತ್ತುತ್ತಿವೆ. ವಿದ್ಯಾರ್ಥಿಗಳುಯಾರ ಪ್ರಚೋದನೆಗೂ ಒಳಗಾಗದೆಶಾಲೆಗಳಿಗೆ ಹೋಗಬೇಕು. ಜನರಸಮಸ್ಯೆಗಳಿಗೆ ಚಿಂತನೆ ಮಾಡಬೇಕಾದರಾಜಕೀಯ ಪಕ್ಷಗಳು ಜನರಕೋಟ್ಯಂತರ ಹಣ ಖರ್ಚಿನ ಸದನದ ಸಮಯವನ್ನು ಹಾಳು ಮಾಡುತ್ತಿರುವುದ ಖಂಡನೀಯ. ಕುರಬೂರು ಶಾಂತಕುಮಾರ್‌, ರಾಜ್ಯಾಧ್ಯಕ್ಷ, ಕಬ್ಬು ಬೆಳೆಗಾರರ ಸಂಘ

ಟಾಪ್ ನ್ಯೂಸ್

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

1-jagga

Laddus row; ತಿರುಮಲ ದೇವಸ್ಥಾನ ದರ್ಶನ ರದ್ದು ಮಾಡಿದ ಜಗನ್ ರೆಡ್ಡಿ

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

1-mang-1

Mangaluru; ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

POlice

Belthangady: ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ

fraudd

Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.