ಟ್ರ್ಯಾಕ್ಟರ್‌ ಪರೇಡ್‌ಗೆ ಹೊರಟ ರೈತರು


Team Udayavani, Jan 21, 2021, 8:09 PM IST

Farmers out for the Tractor Parade

ಮೈಸೂರು: ದೆಹಲಿಯಲ್ಲಿ ಜ.26ರಂದು ನಡೆಯುವ ಪ್ರತಿಭಟನಾಕಾರರ ಟ್ರ್ಯಾಕ್ಟರ್‌ ಪರೇಡ್‌ನ‌ಲ್ಲಿ ಭಾಗವಹಿಸಲು ಮೈಸೂರಿನಿಂದ ಹೊರಟ ರೈತರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಐಕ್ಯ ಹೋರಾಟ ಸಮಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ನಗರದ ಗನ್‌ಹೌಸ್‌ ಬಳಿ ಇರುವ ಕುವೆಂಪು ವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹಾಸನದ ರೈತ ಮುಖಂಡ ಅರಳಾಪುರ ಮಂಜೇಗೌಡ ನೇತೃತ್ವದಲ್ಲಿ ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಭಾಗದಿಂದ ಹೊರಟ ರೈತರಿಗೆ ಬೀಳ್ಕೊಡುಗೆ ನೀಡಲಾಯಿತು. ಮೈಸೂರಿನಿಂದ ಹೊರಟ ರೈತರು ಚಾಮರಾಜನಗರದ ಅಮೃತಭೂಮಿಯಲ್ಲಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸಮಾಧಿಗೆ ನಮಸ್ಕರಿಸಿ ದೆಹಲಿ ಕಡೆಗೆ ತೆರಳಿದರು. ರೈತರಿಗೆ ಊಟೋಪಚಾರದ ವ್ಯವಸ್ಥೆ ಮಾಡಿ, ಆತ್ಮಸ್ಥೆçರ್ಯ ತುಂಬಿ, ದಿನಸಿ, ಅವಶ್ಯಕ ವಸ್ತುಗಳನ್ನು ನೀಡಿ ಕಳುಹಿಸಿಕೊಡಲಾಯಿತು.

ಈ ವೇಳೆ ರೈತ ಮುಖಂಡ ಅರಳಾಪುರ ಮಂಜೇಗೌಡ ಮಾತನಾಡಿ, ಕೊರೆಯುವ ಚಳಿಯಲ್ಲೂ ಎರಡು ತಿಂಗಳಿಂದ ಪಂಜಾಬ್‌ ಮತ್ತು ಹರಿಯಾಣ ರೈತರು ಧರಣಿ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಸೂಕ್ತ ಸ್ಪಂದನೆ ದೊರೆಯದ ಕಾರಣ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಕರ್ನಾಟಕದಿಂದ ನೂರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುತ್ತಿದ್ದಾರೆ. ಬುಧವಾರ ಚನ್ನರಾಯಪಟ್ಟಣಕ್ಕೆ ತೆರಳಿ, ಅಲ್ಲಿರುವ ರೈತರ ಜೊತೆಗೂಡಿ ಗುರುವಾರ ದೆಹಲಿಗೆ ಪ್ರಯಾಣ ಆರಂಭಿಸಲಾಗುವುದು ಎಂದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಜನವರಿ ಬಳಿಕ ಚಳಿ ಕಡಿಮೆಯಾಗಲಿದ್ದು, ಆಗ ರಾಜ್ಯದಿಂದಲೂ ಇನ್ನಷ್ಟು ರೈತರು ದೆಹಲಿಗೆ ತೆರಳಿದ್ದಾರೆ. ಈಗಾಗಲೇ ತಮಿಳುನಾಡು ಮತ್ತು ಕೇರಳದಿಂದ ರೈತರು ಹೊರಡುತ್ತಿದ್ದಾರೆ. ಅದೇ ರೀತಿ ಫೆಬ್ರವರಿಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರೈತ ಮುಖಂಡ ಪ್ರಸನ್ನ ಗೌಡ, ಅತ್ತಹಳ್ಳಿ ದೇವರಾಜು, ಪಿ.ಮರಂಕಯ್ಯ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ:ಆಲೂಗಡ್ಡೆ ಅಂಗಾಂಶ ಕೃಷಿ ಕ್ಷೇತ್ರೋತ್ಸವ

ನಾಲ್ಕು ಟೆಂಪೋದಲ್ಲಿ 100 ಮಂದಿ ಪಯಣ

100 ಮಂದಿ ರೈತರು ನಾಲ್ಕು ಟೆಂಪೋಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದೇವೆ. ಟೆಂಪೋದಲ್ಲಿ ಮಲಗಲು ಹಾಸಿಗೆ, ಸೇರಿದಂತೆ ಅವಶ್ಯ ವಸ್ತುಗಳನ್ನು

ಶೇಖರಿಸಿಕೊಂಡಿದ್ದೇವೆ. ಐದು ದಿನಗಳ ಕಾಲ ಪ್ರಯಾಣಿಸಿ ಜ.25ಕ್ಕೆ ದೆಹಲಿ ತಲುಪಲಿದ್ದೇವೆ. ಇವೆರಡು ಟೆಂಪೋದೊಂದಿಗೆ ಮೂರು ಕಾರು ಸಹ ದೆಹಲಿಗೆ ತೆರಳಲಿದೆ. 2ನೇ ಹಂತದಲ್ಲಿ ರಾಜ್ಯದ ವಿವಿಧ ಭಾಗದ 300 ರೈತರು ಜ.23ಕ್ಕೆ ಹೊರಟು ರೈಲಿನ ಮೂಲಕ ದೆಹಲಿಗೆ ಆಗಮಿಸಲಿದ್ದಾರೆ. ಗಣರಾಜ್ಯೋತ್ಸವ ಪರೇಡ್‌ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರ್ಯಾಲಿ ಪ್ರಯುಕ್ತ ಐಕ್ಯ ಹೋರಾಟದಿಂದ ಬೈಕ್‌ ರ್ಯಾಲಿ ಪರೇಡ್‌ ನಡೆಸಲಾಗುವುದು ಎಂದು ರೈತ ಮುಖಂಡ ಅರಳಾಪುರ ಮಂಜೇಗೌಡ ತಿಳಿಸಿದರು.

ಅಗತ್ಯ ವಸ್ತುಗಳ ವಿತರಣೆ

ಬೀಳ್ಕೊಡುಗೆ ವೇಳೆ ರೈತರಿಗೆ 50 ಲೀಟರ್‌ ಡೀಸೆಲ್‌, 50 ಕೆ.ಜಿ. ಅಕ್ಕಿ, ತೆಂಗಿನಕಾಯಿ ಮತ್ತು ತರಕಾರಿ 25 ಕೆ.ಜಿ.ಗೂ ಅಧಿಕ, 5 ಸಾವಿರ ರೂ. ನಗದು ಹಾಗೂ ಅಕ್ಷರ ದಾಸೋಹ ಸಂಸ್ಥೆಯ ರಾಜೇಂದ್ರ ಅವರಿಂದ ನೂರು ಮಂದಿಗೆ ಆಗುವಷ್ಟು ಸೋಪು, ಬ್ರಶ್‌ ಇತ್ಯಾದಿ ವಸ್ತುಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.