ರೈತರು ಸಮಗ್ರ ಕೃಷಿಯತ್ತ ಹೆಜ್ಜೆ ಹಾಕಿ


Team Udayavani, Jul 8, 2018, 3:34 PM IST

m2-raitaru.jpg

ಹುಣಸೂರು: ಕೃಷಿ ಪ್ರಗತಿಗಾಗಿ ಸರ್ಕಾರಿ ಕಾರ್ಯಕ್ರಮಗಳನ್ನು ಸದ್ಬಳಸಿಕೊಂಡು ಸಮಗ್ರ ಕೃಷಿ ಕಡೆಗೆ ರೈತರು ಹೆಚ್ಚು ಒಲವು ತೋರಬೇಕೆಂದು ಧರ್ಮಾಪುರ ಜಿಪಂ ಸದಸ್ಯ ಸುರೇಂದ್ರ ಮನವಿ ಮಾಡಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಕೃಷಿ ಇಲಾಖೆಯು ಕಸಬಾ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ, ರೇಷ್ಮೆ, ಹೈನುಗಾರಿಕೆ ರೈತರ ಆಶಾದಾಯಕವಾಗಿದೆ. ಬಹುತೇಕ ರೈತರು ಸೌಲಭ್ಯಗಳನ್ನು ಬಳಸಿಕೊಳ್ಳದೆ ಕೃಷಿಯಲ್ಲಿ ನಷ್ಟ ಅನುಭವಿಸಿ, ಆತ್ಮಹತ್ಯೆ ಹಾದಿ ಹಿಡಿಯುತ್ತಿರುವುದು ಸರಿಯಲ್ಲ ಎಂದು ವಿಷಾದಿಸಿದರು.

ಮಾದರಿ ಕೃಷಿ: ಕೃಷಿಯನ್ನು ಕಾಲಮಾನಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಬೇಕು. ಸರ್ಕಾಕ ಕೃಷಿ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಸಮಗ್ರ ಕೃಷಿ ಪದ್ಧತಿಯನ್ನು ರೈತರು ಅಳವಡಿಸಿಕೊಳ್ಳಬೇಕು. ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಬಳಸಬೇಕು. ಅದಕ್ಕೆ ಕೊಯಮುತ್ತೂರು ಕಾಲೋನಿಯ ರೈತರು ಮಾದರಿಯಾಗಿದ್ದಾರೆ ಎಂದು ಹೇಳಿದರು.

ವೈಯಕ್ತಿಕ ಆಸಕ್ತಿ ಮುಖ್ಯ: ತಾಪಂ ಇಒ ಕೃಷ್ಣಕುಮಾರ್‌ ಮಾತನಾಡಿ, ರೈತರಿಗೆ ಸಾಕಷ್ಟು ಸೌಲಭ್ಯಗಳಿದ್ದು, ರೈತರು ಇದನ್ನು ಬಳಸಿಕೊಂಡು ಉತ್ತಮ ಕೃಷಿ ಜೊತೆಗೆ ಸರಕಾರದ ಬೆಂಬಲ ಬೆಲೆ ಸಿಕ್ಕರೆ ಉತ್ತಮ ಲಾಭ ಪಡೆಯಬಹುದು. ರೈತರ ಅಭ್ಯುದಯಕ್ಕೆ ಹಲವಾರು ಕೊಡುಗೆಗಳನ್ನು ಸರಕಾರ ನೀಡುತ್ತಿದೆ. ಎಲ್ಲದಕ್ಕೂ ಸರಕಾರವನ್ನು ಅವಲಂಬಿಸದೆ ವೈಯಕ್ತಿಕ ಆಸಕ್ತಿ ರೈತರಲ್ಲಿ ಇರಬೇಕೆಂದರು. 

ಮಣ್ಣು ಸಂರಕ್ಷಿಸಿ: ಕೃಷಿ ಇಲಾಖೆಯ ಉಪ ನಿರ್ದೇಶಕ ಧನಂಜಯ್‌ ಮಾತನಾಡಿ, ರೈತರು ಭೂಮಿಗೆ ಅತಿಯಾದ ರಸಗೊಬ್ಬರ ಕ್ರಿಮಿನಾಶಕ ಬಳಸುತ್ತಿರುವುದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ.  ನೆಲ-ಜಲ ಸಂರಕ್ಷಿಸದಿದ್ದಲ್ಲಿ ಮುಂದೆ ಆಹಾರ ಭದ್ರತೆಗೆ ಧಕ್ಕೆ ಉಂಟಾಗಲಿದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ವಿಜ್ಞಾನಿ ಮಹದೇವಪ್ಪ, ನಿವೃತ್ತ ಕೃಷಿ ಅಧಿಕಾರಿ ಹೊಂಬಯ್ಯ ಮುಸುಕಿನ ಜೋಳದ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ್‌ ಮೋಹನ್‌, ತಾಪಂ ಸದಸ್ಯರಾದ ಪ್ರೇಮೇಗೌಡ, ರಾಜೇಂದ್ರಬಾಯಿ, ಉಮ್ಮತ್ತೂರು ಗ್ರಾಪಂ ಅಧ್ಯಕ್ಷೆ ನೀಲಮ್ಮ, ತಾಲೂಕು ರೈತ ಸಂಘದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಪ್ರಗತಿಪರ ರೈತರಾದ ರಾಜು, ರಾಮೇಗೌಡ, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ನಾಗರಾಜ್‌, ಕೃಷಿ ಅಧಿಕಾರಿ ಜಯಕುಮಾರ್‌, ಸಹಾಯಕ ಕೃಷಿ ಅಧಿಕಾರಿ ಅರೇಪಾಷಾ ಮಾತನಾಡಿದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.