ಚಿತ್ರಕಲಾ ಶಿಬಿರದಲ್ಲಿ ಆಕರ್ಷಕ ಕಲಾಕೃತಿಗಳು


Team Udayavani, Apr 18, 2019, 3:00 AM IST

chitrkala

ಮೈಸೂರು: ಹಸಿರಿನಿಂದ ಕಂಗೊಳಿಸುವ ಕಾನನ, ಪ್ರಶಾಂತ ಸಾಗರದಲ್ಲಿ ಮುಳುಗುವ ಸೂರ್ಯ, ಗರಿಬಿಚ್ಚದ ನವಿಲು ಸೇರಿದಂತೆ ಗಿಡ-ಮರ, ಬಳ್ಳಿ ನೋಡುಗರನ್ನು ಸೆಳೆಯುವಂತಿತ್ತು.

ಇಂತಹದೊಂದು ವೇದಿಕೆ ಸೃಷ್ಟಿಯಾಗಿದ್ದು, ಜೆಎಸ್‌ಎಸ್‌ ಆಸ್ಪತ್ರೆ ಆವರಣದ ಶ್ರೀರಾಜೇಂದ್ರ ಭವನದಲ್ಲಿ. ಕಳೆದ 17 ದಿನಗಳ ಕಾಲ ನಡೆದ ಚಿತ್ರಕಲಾ ತರಬೇತಿ ಶಿಬಿರದಲ್ಲಿ ಕಲಿತ ಮಕ್ಕಳು ಕ್ಯಾನ್ವಾಸ್‌ ಮತ್ತು ಬಿಳೆಯ ಹಾಳೆಯ ಮೇಲೆ ಪ್ರಕೃತಿಯ ಸೊಬಗು, ಕಾಡು ಮೃಗಗಳು ಜೀವ ಪಡೆದಿದ್ದವು.

ಬುಧವಾರ ಜೆಎಸ್‌ಎಸ್‌ ಆಸ್ಪತ್ರೆ ಆವರಣದ ಶ್ರೀರಾಜೇಂದ್ರ ಭವನದಲ್ಲಿ ಆಯೋಜಿಸಿದ್ದ ಶಿಬಿರದ ಸಮಾರೋಪದ ಅಂಗವಾಗಿ ಮಕ್ಕಳು ರಚಿಸಿದ್ದ ಸೊಗಸಾದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ತಮ್ಮ ಮಕ್ಕಳ ಕಲಾ ಪ್ರತಿಭೆಯನ್ನು ನೋಡಿದ ಪೋಷಕರು ಖುಷಿಯಿಂದ ಬೀಗಿದರು.

ಶಿಬಿರದಲ್ಲಿ ಪಾಲ್ಗೊಂಡಿದ್ದ 57 ವಿದ್ಯಾರ್ಥಿಗಳನ್ನು 1ರಿಂದ 3ನೇ ತರಗತಿವರೆಗೆ, 4 ರಿಂದ 6ನೇ ತರಗತಿವರೆಗೆ, 7 ರಿಂದ ಮೇಲ್ಪಟ್ಟ ತರಗತಿ ಮಕ್ಕಳನ್ನು ಪ್ರತ್ಯೇಕವಾಗಿ ಮೂರು ವಿಭಾಗಗಳಲ್ಲಿ ವಿಂಗಡಿಸಿ, ಕಲಾವಿದರು ಚಿತ್ರಕಲೆ ತರಬೇತಿ ನೀಡಿದ್ದರು. ಶಿಬಿರದ ವೇಳೆ ಮಕ್ಕಳು ರಚಿಸಿದ್ದ ಅತ್ಯತ್ತಮ ಚಿತ್ರಗಳನ್ನು ಪ್ರದರ್ಶನಕ್ಕಿರಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಿಮಿಸಿದ್ದ ಕಲಾನಿಕೇತನ ಸ್ಕೂಲ್‌ ಆಫ್ ಆರ್ಟ್‌ ಪ್ರಾಂಶುಪಾಲ ಕೆ.ಸಿ.ಮಹದೇವಶೆಟ್ಟಿ ಮಾತನಾಡಿ, ಪ್ರಪಂಚದಲ್ಲಿ ಭಾಷೆ ಹುಟ್ಟುವ ಮುಂಚೆಯೇ ಚಿತ್ರಕಲೆ ಹುಟ್ಟಿತ್ತು. ಚಿತ್ರಗಳನ್ನು ಜಗತ್ತಿನ ಯಾವುದೇ ಭಾಷೆಯ ವ್ಯಕ್ತಿಗೆ ತೋರಿಸಿದರೂ, ಚಿತ್ರಕಲೆಯ ಭಾಷೆ ಅರ್ಥವಾಗುತ್ತದೆ. ಚಿತ್ರಕಲೆ ಎಲ್ಲ ಪ್ರದೇಶದ, ಎಲ್ಲ ವ್ಯಕ್ತಿಗಳಿಗೆ ಅರ್ಥವಾಗುವ ಸರಳ ಭಾಷೆಯಾಗಿದೆ ಎಂದು ಹೇಳಿದರು.

ಚಿತ್ರಕಲೆ ಮನುಷ್ಯನ ಮೇಲೆ ಪ್ರಭಾವ ಬೀರುವ ಅಂಶವಾಗಿದ್ದು, ಬಣ್ಣ ಮತ್ತು ರೇಖೆಗಳ ಮೂಲಕ ಸರಳವಾಗಿ ಚಿತ್ರಗಳನ್ನು ಅಥೆìçಸಿಕೊಳ್ಳಬಹುದು. ಮಕ್ಕಳಲ್ಲಿ ಚಿತ್ರಕಲೆ ಗೀಚುವಿಕೆಯಿಂದ ಆರಂಭವಾಗುತ್ತದೆ. ಆದರೆ ಅದು ಪೋಷಕರಿಗೆ ಅರ್ಥವಾಗುವುದಿಲ್ಲ. ಅವರಿಗೆ ಒತ್ತಡ ಹೇರುವ ಮೂಲಕ ಮಕ್ಕಳ ಮನಸ್ಸನ್ನು ಕಲ್ಮಶಗೊಳಿಸುತ್ತಿದ್ದೇವೆ. ಇದರಿಂದ ಅವರ ಕಲೆಯ ಸೂಕ್ಷ್ಮತೆ ಹಾಗೂ ಆಸಕ್ತಿ ನಾಶವಾಗುತ್ತದೆ ಎಂದರು.

ಚಿತ್ರ ರಚಿಸುವಾಗ ಮಕ್ಕಳಲ್ಲಿ ಕ್ರಿಯಾಶೀಲತೆ ಚುರುಕುಗೊಳ್ಳುತ್ತದೆ. ಅವರ ಆಸಕ್ತಿ ಮತ್ತು ಅಭಿರುಚಿಯನ್ನು ಪೋಷಕರು ಗಮನಿಸಿ ಪ್ರೋತ್ಸಾಹಿಸಿದರೆ ಮುಂದೆ ಪ್ರತಿಭಾವಂತರಾಗುತ್ತಾರೆ. ಚಿತ್ರಕಲೆ ಕ್ಷೇತ್ರದಲ್ಲಿಯೂ ಸಾಕಷ್ಟು ಅವಕಾಶಗಳಿದ್ದು, ಒಳ್ಳೆಯ ಸಾಧನೆಯನ್ನು ಮಾಡಬಹುದಾಗಿದೆ ಎಂದು ಹೇಳಿದರು.

ಇದೇ ವೇಳೆ ಶಿಬಿರದಲ್ಲಿ ಉತ್ತಮವಾಗಿ ಚಿತ್ರ ರಚಿಸಿದ್ದ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು. ತಂಡ ಒಂದರಲ್ಲಿ ಅಭಿನಂದನ್‌(ಪ್ರಥಮ), ಕುಸುಮಾಂಜಲಿ(ದ್ವಿತೀಯ), ತಂಡ 2ರಲ್ಲಿ ಕುಶಾಲ್‌(ಪ್ರಥಮ), ಪ್ರೀತಂ(ದ್ವಿತೀಯ) ಹಾಗೂ ತಂಡ 3 ರಲ್ಲಿ ಸಂಜನಾ(ಪ್ರಥಮ), ಆಯುಷ್‌ ಗೌಡ(ದ್ವಿತೀಯ) ಬಹುಮಾನ ನೀಡಲಾಯಿತು.

ಜೆಎಸ್‌ಎಸ್‌ ಮಹಾವಿದ್ಯಾಪೀಠ ಪ್ರಕಟಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಚಿತ್ರಕಲಾ ಶಿಬಿರದ ಸಂಚಾಲಕ ಎಸ್‌.ಎಂ. ಜಂಬುಕೇಶ್ವರ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.