ಮಹಿಳಾ ದಸರಾದಲ್ಲಿ ಜಾನಪದಗೀತೆ, ನೃತ್ಯೋತ್ಸವದ ರಂಗು
Team Udayavani, Sep 27, 2017, 1:01 PM IST
ಮೈಸೂರು: ಕಳೆದ ವರ್ಷ ಸಚಿವರ ಪತ್ನಿಯಾಗಿ ಮಹಿಳಾ ದಸರಾದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದೆ, ಈ ವರ್ಷ ಇದೇ ಕಾರ್ಯಕ್ರಮದಲ್ಲಿ ಸಚಿವೆಯಾಗಿ ಭಾಗವಹಿಸಿದ್ದಕ್ಕೆ ತುಂಬ ಸಂತೋಷವಾಗಿದೆ ಎಂದು ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಹರ್ಷ ವ್ಯಕ್ತಪಡಿಸಿದರು.
ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ಜೆ.ಕೆ.ಮೈದಾನದಲ್ಲಿ ಆಯೋಜಿಸಿರುವ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಮಂಗಳವಾರ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಮಹಿಳೆಯರಿಗೆ ಏರ್ಪಡಿಸಿದ್ದ ಜಾನಪದ ಗೀತೆ, ನೃತ್ಯ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರಿ.ಶ.1610 ರಲ್ಲಿ ಯದುವಂಶದ ರಾಜರು ದಸರಾ ಆರಂಭಿಸಿದರು. ಆಮೇಲೆ ಮಹಿಳಾ ದಸರಾ, ಮಕ್ಕಳ ದಸರಾ, ಕ್ರೀಡಾ ದಸರಾ ಹೀಗೆ ಮೈಸೂರಿನಲ್ಲಿ ಅಲ್ಲದೆ ಮಡಿಕೇರಿ, ಚಾಮರಾಜನಗರದಲ್ಲಿಯೂ ದಸರಾ ಆಚರಣೆ ಮಾಡುತ್ತಿದ್ದಾರೆ. ಸರ್ಕಾರ ಈ ದಸರಾಗೆ ಹೆಚ್ಚಿನ ಮಹತ್ವ ನೀಡಿದೆ. ಜಾನಪದ ನಮ್ಮ ನಾಡಿನ ಕಲೆ, ನಾಡಿನ ಹಿರಿಯರು ಕೊಟ್ಟ ಕೊಡುಗೆಯಾಗಿದೆ. ಜನಪದ ನಾಡಿದ ಸಾಂಸ್ಕೃತಿಕ ಕಲೆಯಾಗಿದೆ ಎಂದು ದಸರಾ ಹಬ್ಬದ ಶುಭಾಶಯ ಕೋರಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮಾತನಾಡಿ, ದಸರಾ ಮಹೋತ್ಸವದ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ದಸರಾವನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ ಮಕ್ಕಳಿಗೆ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎಲ್ಲರೂ ಒಗ್ಗೂಡಿ ಈ ಕಾರ್ಯಕ್ರಮವನ್ನು ಸದುಪಯೋಗಿಸಿಕೊಳ್ಳಿ ಎಂದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಕೆಂಪಮ್ಮ ಹಾಡನ್ನು ಹೇಳಿ ರಂಜಿಸಿದರು. ಜಾನಪದ ಗೀತೆ ಹಾಗೂ ನೃತ್ಯಕ್ಕೆ ನಾಲ್ಕು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಮಹಿಳೆಯರು ತಂಡೋಪ ತಂಡವಾಗಿ ವೇದಿಕೆಯನ್ನೇರಿ ನೃತ್ಯ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ಜಾನಪದ ಕಲಾವಿದೆ ಮರಿಸಿದ್ದಮ್ಮ, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಅಧ್ಯಕ್ಷೆ ಲತಾ ಮೋಹನ್, ಕಾರ್ಯಾಧ್ಯಕ್ಷೆ ಕೆ.ರಾಧ, ರಾಣಿ ಪ್ರಭಾ, ಸುಶೀಲಾ ಮರಿಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.