ಅಂಗವಿಕಲ ಕ್ರೀಡಾಪಟುಗೆ ಆರ್ಥಿಕ ನೆರವು
Team Udayavani, Jan 28, 2018, 12:02 PM IST
ಕೆ.ಆರ್.ನಗರ: ಪ್ರತಿಭಾವಂತ ಕ್ರೀಡಾಪಟುಗಳು ಮತ್ತು ಅಂಗವಿಕಲ ಕ್ರೀಡಾಳುಗಳಿಗೆ ಸರ್ಕಾರ ಅಗತ್ಯ ತರಬೇತಿ ಮತ್ತು ಆರ್ಥಿಕ ಸಹಕಾರ ನೀಡಲು ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಪಟ್ಟಣದ ಶಹೀದ್ ಟಿಪ್ಪು ಸುಲ್ತಾನ್ ಟ್ರಸ್ಟ್ ಸಮಿತಿ ಅಧ್ಯಕ್ಷ ಸೈಯದ್ಜಾಬೀರ್ ಹೇಳಿದರು.
ಉತ್ತರ ಮತ್ತು ಪಶ್ಚಿಮ ಏಷ್ಯನ್ ಭಾಗದ ರಾಷ್ಟ್ರಗಳ ಒಕ್ಕೂಟದ ವತಿಯಿಂದ ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ನಡೆಯಲಿರುವ ಅಂಗವಿಕಲರ ಕ್ರೀಡಾ ಚಾಂಪಿಯನ್ ಶಿಪ್ನಲ್ಲಿ ಪಾಲ್ಗೊಳ್ಳುತ್ತಿರುವ ತಾಲೂಕಿನ ಮಾರ್ಚಹಳ್ಳಿ ಗ್ರಾಮದ ಅಂಗವಿಕಲ ಕ್ರೀಡಾಪಟು ಚೌಡಯ್ಯ ಅವರಿಗೆ ಟ್ರಸ್ಟ್ ವತಿಯಿಂದ ಆರ್ಥಿಕ ಸಹಕಾರ ನೀಡಿ ಮಾತನಾಡಿದರು.
ಆರ್ಥಿಕ ಸಂಕಷ್ಟದಲ್ಲಿರುವ ಚೌಡಯ್ಯನವರಂತಹ ಕ್ರೀಡಾ ಪ್ರತಿಭೆಗಳಿಗೆ ಸರ್ಕಾರದ ಜತೆಗೆ ಸಂಘ ಸಂಸ್ಥೆಗಳು ಉದಾರವಾಗಿ ದಾನ ಮಾಡಬೇಕು. ಮುಂದಿನ ದಿನಗಳಲ್ಲಿ ಚೌಡಯ್ಯರ ಸಹಕಾರಕ್ಕೆ ನಾವು ಸದಾ ಸಿದ್ಧರಾಗಿದ್ದು ಸಾಧ್ಯವಾದಷ್ಟು ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. ಕಾರ್ಯದರ್ಶಿ ಸೈಯದ್ವಾಜೀದ್, ಸದಸ್ಯರಾದ ಅಬ್ದುಲ್ಖಾಹರ್, ಅನುಷ್ ಅಹನದ್ಖಾನ್, ರಹಮತ್, ಮಸೀದಿ ಗುರುಗಳಾದ ಅಮೀನ್ ಮೊಹನೀಷಾ ಇದ್ದರು.
ವಾಲ್ಮೀಕಿ ನಾಯಕರ ಸಂಘ ಸಹಕಾರ: ತಾಲೂಕು ವಾಲ್ಮೀಕಿ ನಾಯಕರ ಸಂಘದ ವತಿಯಿಂದ ಅಂಗವಿಕಲ ಕ್ರೀಡಾಪಟು ಡಿ.ಚೌಡಯ್ಯ ಅವರಿಗೆ ಆರ್ಥಿಕ ಸಹಕಾರ ನೀಡಿ ಬೀಳ್ಕೊಡಲಾಯಿತು. ಪಟ್ಟಣದ ವಾಲ್ಮೀಕಿ ನಾಯಕರ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭಗಲ್ಲಿ ಸಂಘದ ಖಜಾಂಚಿ ಮಹದೇವನಾಯಕ, ಡಿ.ಚೌಡಯ್ಯರಿಗೆ ಸಂಘದ ವತಿಯಿಂದ 10 ಸಾವಿರ ರೂ., ಹಣ ನೀಡಿದರು. ಸಂಘದ ನಿರ್ದೇಶಕರಾದ ನಾಗರಾಜು, ಮಹದೇವ, ಸುರೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.