Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
Team Udayavani, Sep 21, 2024, 12:14 AM IST
ಮೈಸೂರು: ನನ್ನನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಕ್ಕಿ ಹಾಕಿಸಲು ರಾಜ್ಯ ಸರಕಾರ ಕಳೆದ 3 ತಿಂಗಳಿನಿಂದ ಪ್ರಯತ್ನ ಮಾಡುತ್ತಿದೆ. ಯಾವ ಪ್ರಕರಣಗಳೂ ಸಿಗದ ಹಿನ್ನೆಲೆಯಲ್ಲಿ ಹಳೇ ಪ್ರಕರಣಕ್ಕೆ ಜೀವ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಪತ್ರಕರ್ತರೊಂದಿಗೆ ಅವರು ಮಾತನಾಡಿ, ಗುರುವಾರ ಸಚಿವರು ಪತ್ರಿಕಾಗೋಷ್ಠಿ ಮಾಡಿರುವುದು ಕಾಂಗ್ರೆಸ್ ಟೂಲ್ ಕಿಟ್. ಯಾರೋ ಅವರಿಗೆ ಸ್ಕ್ರಿಪ್ಟ್ ಕೂಡ ಸರಿಯಾಗಿ ಬರೆದು ಕೊಟ್ಟಿಲ್ಲ. ಅದರಲ್ಲಿ ಅವರೇ ಸಿಕ್ಕಿ ಬೀಳುತ್ತಾರೆ ಎಂದು ಲೇವಡಿ ಮಾಡಿದರು.
ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಿನ್ನೆ ಸುದ್ದಿಗೋಷ್ಠಿ ಮಾಡಿದ್ದಾರೆ. ನಾನು ಎಲ್ಲೂ ಕದ್ದು ಹೋಗಲ್ಲ. ಸುಳ್ಳು ಹೇಳಿಕೊಂಡು ಬೇರೆಯವರ ನೆರವನ್ನು ತೆಗೆದುಕೊಳ್ಳುವುದಿಲ್ಲ. ನನಗೂ ಆರೋಪ ಮಾಡಿರುವ ಪ್ರಾಪರ್ಟಿಗೂ ಸಂಬಂಧವಿದೆ. ಇಲ್ಲ ಅಂತ ನಾನು ಹೇಳಲ್ಲ. ನನ್ನ ಹೆಂಡತಿಯ ತಾಯಿಯ ಆಸ್ತಿ ಅದಾಗಿದೆ. ಎಂದು ಹೇಳಿದರು.
ನನ್ನ ಪ್ರಕರಣಕ್ಕೂ ಸಿದ್ದರಾಮಯ್ಯ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ನಾನು ಕೆಟ್ಟ ಕೆಲಸ ಮಾಡಲ್ಲ. ಮಿಸ್ಟರ್ ಕೃಷ್ಣಭೈರೇಗೌಡ ನನ್ನ ಅಲುಗಾಡಿಸಲು ಸಾಧ್ಯವಿಲ್ಲ. ಕಂದಾಯ ಇಲಾಖೆಯಲ್ಲಿ ಏನೇನ್ ಆಗುತ್ತಿದೆ ಎಂಬುದು ಗೊತ್ತು. ಮುಂದಿನ ದಿನಗಳಲ್ಲಿ ಅದು ಹೊರಗಡೆ ಬರುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.