![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jun 22, 2022, 4:04 PM IST
ಮೈಸೂರು: ನಗರ ವೇಗವಾಗಿ ಬೆಳೆಯುತ್ತಿರುವುದರಿಂದ ಸಂಚಾರ ದಟ್ಟಣೆ ಬಗೆಹರಿಸಲು ಮೆಟ್ರೋ ರೈಲಿನ ಅಗತ್ಯವಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ ಇಲ್ಲಿಗೆ ಆಗಮಿಸಿದಾಗ ದೇವೇಗೌಡ ಅವರು ಈ ಕುರಿತು ಮನವಿ ಸಲ್ಲಿಸಿದರು.
ಮೈಸೂರು ನಗರಕ್ಕೆ ವಿಶೇಷ ಅನುದಾನವನ್ನು ಮಂಜೂರು ಮಾಡಬೇಕು. ಮೈಸೂರಿನ ಮೂಲಸೌಕರ್ಯ ಹೆಚ್ಚಿಸಿ ಸೌಲಭ್ಯ ಒದಗಿಸಬೇಕು. ಇದು ಮೈಸೂರಿನ ಅಭಿವೃದ್ಧಿಗೆ ಕಾರಣ ವಾಗುತ್ತದೆ. ಇದರಿಂದ ಬೆಂಗಳೂರು ನಗರದ ಮೇಲೆ ಒತ್ತಡ ಕಡಿಮೆಯಾಗುತ್ತದೆ ಎಂದು ದೇವೇಗೌಡ ಪ್ರಧಾನಿಗೆ ವಿವರಿಸಿದರು.
ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಮೈಸೂರು ನಗರದೊಂದಿಗೆ ಸಂಪರ್ಕಿಸಬೇಕು. ಇದಕ್ಕಾಗಿ ರೈಲು ಕಾರಿಡಾರ್ ಅಭಿವೃದ್ಧಿಪಡಿಸಬೇಕು. ಕರ್ನಾಟಕ, ಕೇರಳ, ತಮಿಳುನಾಡಿನ ಸರಕು ಮತ್ತು ಉತ್ಪನ್ನಗಳ ತ್ವರಿತ ರವಾನೆಗೆ ಇದು ಸಹಾಯ ಮಾಡುತ್ತದೆ. ದೇಶದ ಆಹಾರ ಸಮಸ್ಯೆಯನ್ನು ನೀಗಿಸುವ ಶಕ್ತಿ ಕರ್ನಾಟಕ ರಾಜ್ಯಕ್ಕಿದೆ. ರಾಜ್ಯದ ಕೃಷಿ ಅಭಿವೃದ್ಧಿ ಕಾರ್ಯಗಳನ್ನು ಪ್ರೋತ್ಸಾಹಿಸಬೇಕು. ಕರ್ನಾಟಕದ ಎಲ್ಲಾ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ನೀಡಬೇಕು ಎಂದು ದೇವೇಗೌಡ ಮನವಿ ಮಾಡಿದರು.
ನಿಮ್ಮ ಸಮರ್ಥ ಮತ್ತು ಪರೋಪಕಾರಿ ನಾಯಕತ್ವದಲ್ಲಿ ದೇಶವು ಮುನ್ನಡೆಯುತ್ತಿದೆ. ನಿಮ್ಮ ನಾಯಕತ್ವ ಚಿರಾಯುವಾಗಲಿ ಎಂದು ನರೇಂದ್ರ ಮೋದಿ ಅವರಿಗೆ ಜಿ.ಟಿ.ದೇವೇಗೌಡ ಈ ಮನವಿ ಪತ್ರದಲ್ಲಿ ಹೇಳಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.