Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
Team Udayavani, Sep 30, 2024, 12:38 PM IST
ಗದಗ: ಹಳ್ಳದ ನೀರಿನಲ್ಲಿ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋದ ಘಟನೆ ರವಿವಾರ (ಸೆ.29) ರಾತ್ರಿ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಬಳಿ ನಡೆದಿದೆ. ಕೊಚ್ಚಿಹೋದ ಯುವಕರಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದೆ.
25 ವರ್ಷದ ಶಿವಪ್ಪ ಅವರಾದಿ ಎಂಬ ಯುವಕನ ಶವ ಪತ್ತೆಯಾಗಿದೆ. ಇನ್ನು 26 ವರ್ಷದ ಮಣಿಕಂಠ ಮಲ್ಲಾಪೂರ ಎಂಬ ಯುವಕನಿಗೆ ಶೋಧ ಕಾರ್ಯ ಮುಂದುವರೆದಿದೆ.
ಘಟನೆಯ ವಿವರ: ರವಿವಾರ ಸಾಯಂಕಾಲದಿಂದ ನರಗುಂದ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗಿದೆ. ಮಣಿಕಂಠನ ಹೆಂಡತಿ ನರಗುಂದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ನಿರಂತರ ಮಳೆಯಾದ್ದರಿಂದ ಮಣಿಕಂಠನ ಹೆಂಡತಿಗೆ ಹುಣಸಿಕಟ್ಟಿ ಗ್ರಾಮಕ್ಕೆ ಬರಲಾಗಿಲ್ಲ. ಆಗ ರಾತ್ರಿ 9 ಗಂಟೆ ಸುಮಾರಿಗೆ ಮಣಿಕಂಠ ತನ್ನ ಹೆಂಡತಿಯನ್ನು ಕರೆತರಲು ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹುಣಸಿಕಟ್ಟಿ ಗ್ರಾಮದಿಂದ ನರಗುಂದಕ್ಕೆ ಹೋಗಿದ್ದ. ನರಗುಂದ ಹಾಗೂ ಹುಣಸಿಕಟ್ಟಿ ನಡುವೆ ಒಡ್ಡಿನ ಹಳ್ಳ ರಭಸವಾಗಿ ಹರಿಯುತ್ತಿದ್ದು, ಅದನ್ನು ಲೆಕ್ಕಿಸದೆ ಹಳ್ಳದಾಟಲು ದುಸ್ಸಾಹಸಕ್ಕೆ ಮುಂದಾಗಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಇಬ್ಬರು ಯುವಕರು ಕೊಚ್ಚಿಹೋಗಿದ್ದರು.
ಅದರಲ್ಲಿ ಶಿವಪ್ಪ ಅವರಾದಿ ಮೃತದೇಹ ಮುಳ್ಳಿನ ಕಂಟಿಯಲ್ಲಿ ಸಿಲುಕಿಕೊಂಡಿದ್ದು ಹೊರ ತೆಗೆಯಲಾಗಿದೆ. ಮಣಿಕಂಠನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಸ್ಥಳಕ್ಕೆ ನರಗುಂದ ಶಾಸಕ ಸಿ.ಸಿ ಪಾಟೀಲ ಹಾಗೂ ಅಧಿಕಾರಿಗಳು ಭೇಟಿ ನೀಡಿದರು. ಕುರಿತು ಗದಗ ಜಿಲ್ಲೆಯ ನರಗುಂದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.