ದೇಶ ಕಂಡ ಮಹಾನ್ ನಾಯಕ ಗಾಂಧಿ
Team Udayavani, Oct 3, 2018, 11:37 AM IST
ಎಚ್.ಡಿ.ಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಓರ್ವ ಸಂತನಾಗಿ ಬುದ್ಧ, ಬಸವಣ್ಣ ಅವರಂತೆ ಅಹಿಂಸೆ, ಸತ್ಯದ ತತ್ವದಡಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾನ್ ಮಾನವತವಾದಿ ಎಂದು ತಹಶೀಲ್ದಾರ್ ಆರ್.ಮಂಜುನಾಥ್ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾಪುರುಷರ ಆದರ್ಶ ಮೌಲ್ಯಗಳು ಕೇವಲ ಔಪಚಾರಿಕವಾಗಿರದೆ ಅವರ ಅಲೋಚನೆಗಳನ್ನು ಮೈಗೂಡಿಸಿಕೊಂಡು ನೀರೆರೆಯುವಂತಾಗಬೇಕು ಹಾಗೂ ಮಹಾತ್ಮ ಗಾಂಧೀಜಿ ಅವರ ಬದುಕಿನ ಮೌಲ್ಯಗಳು ಉನ್ನತೀಕರಣಗೊಳ್ಳಬೇಕು, ಆನಿಟ್ಟಿನಲ್ಲಿ ಮಹಾಪುರುಷರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಗಾಂಧೀಜಿ ಅವರು ಕಂಡಂತೆ ಆದರ್ಶ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸೋಣ ಎಂದು ನುಡಿದರು.
ದೇಶ ಕಂಡ ಶ್ರೇಷ್ಠ ಮಾಜಿ ಪ್ರಧಾನಿ ದಿವಂಗತ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಶುಭಾಶಯ ಕೋರಿ ಸಿಹಿ ಹಂಚಲಾಯಿತು. ಜಿಪಂ ಸದಸ್ಯ ವೆಂಕಟಸ್ವಾಮಿ, ತಾಲೂಕು ಕಸಾಪ ಅಧ್ಯಕ್ಷ ಪ್ರಮೋದ್, ಉಪತಹಶೀಲ್ದಾರ್ ಆನಂದ್, ಪುಟ್ಟಸ್ವಾಮಿ, ಶಿರಸ್ತೇದಾರ್ ಹೊ.ರಮೇಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಂದ್ರಪ್ಪ, ಕೇತ್ರ ಶಿಕ್ಷಣಾಕಾರಿ ಎಸ್.ಸುಂದರ್, ಸೆಸ್ಕ್ ಎಇಇ ಚಿದಂಬರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.