ಗ್ಯಾಂಗ್ರೇಪ್: ವೈಫಲ್ಯ ಖಂಡಿಸಿ ಅಧಿವೇಶನದಲ್ಲಿ ಹೋರಾಟ
Team Udayavani, Sep 11, 2021, 2:24 PM IST
ಮೈಸೂರು: ನಗರದಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅತ್ಯಾಚಾರ ಪ್ರಕರಣ ಸಂಬಂಧ ಮಾಹಿತಿ ತಿಳಿಯಲು ಕಾಂಗ್ರೆಸ್ನಿಂದ ನೇಮಕವಾಗಿದ್ದ ಸತ್ಯಶೋಧನ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪ್ರಕರಣ ಬೆಳಕಿಗೆ ಬಂದ ನಂತರ ಪೊಲೀಸರು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿರುವುದು ಒಂದೆಡೆಯಾದರೆ, ಘಟನೆ ಬಳಿಕ
ಮೈಸೂರಿಗೆ ಆಗಮಿಸಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಕರಣ ಗಂಭೀರತೆ ಅರಿತುಕೊಳ್ಳದೇ ಪೊಲೀಸ್ ಅಕಾಡೆಮಿಯಲ್ಲಿ ಫೈರಿಂಗ್, ಸಂವಾದದಲ್ಲಿ ಪಾಲ್ಗೊಂಡು ಕಾಲಾಹರಣ ಮಾಡುವ ಮೂಲಕ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಜೊತೆಗೆ ಆಕೆ ಅಷ್ಟು ಹೊತ್ತಿನಲ್ಲಿ ಅಲ್ಲಿಗೇಕೆ ಹೋದಳು ಎಂದು ನೀಡಿರುವ ಹೇಳಿಕೆ ಅಂತದ್ದೇ ಕೃತ್ಯಗಳು ನಡೆಯಲು ಪುಷ್ಟಿ ನೀಡಿದಂತಾಗಿದೆ. ಈ ಪ್ರಕರಣ ಸಂಬಂಧ ಅವರು ನೀಡಿರುವ ಹೇಳಿಕೆ ತಲೆತಗ್ಗಿಸುವಂತಾದ್ದಾಗಿದೆ. ಈ ನಿಟ್ಟಿನಲ್ಲಿ ಗೃಹ ಸಚಿವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಭ್ರಷ್ಟಾಚಾರ ಆರೋಪದ ತನಿಖೆಗೆ ಸಿದ್ಧ : ಸಚಿವ ಬಿ.ಸಿ.ಪಾಟೀಲ್
ಅತ್ಯಾಚಾರ ಪ್ರಕರಣ ಸಂಬಂಧ ಸತ್ಯಶೋಧನ ಸಮಿತಿ ಸಂಪೂರ್ಣ ಮಾಹಿತಿ ಕಲೆ ಹಾಕಿ ವರದಿ ಸಿದ್ಧಪಡಿಸಿ, ಹಲವು ಶಿಫಾರಸುಗಳನ್ನು ಮಾಡಿ ಪಕ್ಷದ ನಾಯಕರಿಗೆ ನೀಡಿದ್ದೇವೆ. ಈ ಸಂಬಂಧ ಅಧಿವೇಶನಲ್ಲಿ ಹೋರಾಟವನ್ನು ನಡೆಸುತ್ತೇವೆ ಎಂದು ಹೇಳಿದರು. ಜಸ್ಟಿಸ್ ವರ್ಮಾ ಆಯೋಗದ ವರದಿಯಂತೆ ಪೊಲೀಸರು ಸಂತ್ರಸ್ತೆಗೆ ನೆರವು, ಚಿಕಿತ್ಸೆ ಮತ್ತು ಭದ್ರತೆ ನೀಡಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಈ ಮೂರು ಅಂಶಗಳು ಪಾಲನೆ ಯಾಗಿಲ್ಲ. ಜೊತೆಗೆ ಅತ್ಯಾಚಾರ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಲು 15 ಗಂಟೆಏಕೆ ತಡ ಮಾಡಿದರು, ಯುವತಿ ಆ ಸಂದರ್ಭದಲ್ಲಿ ಯಾಕೆ ಅಲ್ಲಿ ಹೋಗಿದ್ದಳು, ಪ್ರಕರಣದಲ್ಲಿ ಪೊಲೀಸರ ಕಾರ್ಯ ವೈಖರಿ ಹೇಗಿತ್ತು, ಇದರಲ್ಲಿ ಹಸ್ತಕ್ಷೇಪ ಇತ್ತ ಅಥವಾ ಇಲ್ಲವಾ, ಸಂತ್ರಸ್ತೆಗೆ ಪೊಲೀಸರು ರಕ್ಷಣೆ ಕೊಡುವ ಜವಾಬ್ದಾರಿ ಸರಿಯಾಗಿ ನಿರ್ವಹಣೆ ಮಾಡಿದ್ದಾರ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖೀಸಲಾಗಿದೆ ಎಂದು ತಿಳಿಸಿದರು.
ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಸರ್ಕಾರ ಪೊಲೀಸರ ತನಿಖೆಯಲ್ಲಿ ಹಸ್ತಕ್ಷೇಪ ನಡೆಸುತ್ತಿರುವುದು ಗೋಚರಿಸುತ್ತಿದ್ದು ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.
ಘಟನೆ ನಡೆದ ಸ್ಥಳ 545 ಎಕರೆ ಪ್ರದೇಶವಿದ್ದು ಅದು ಯಾರ ಸುಪರ್ದಿಯಲ್ಲಿದೆ ಎಂಬ ಮಾಹಿತಿ ಫೊಲೀಸರಲ್ಲಿ ಇಲ್ಲ.ಸಂತ್ರಸ್ತೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದೆ,ಆಕೆಯಿಂದ ಹೇಳಿಕೆ ಪಡೆಯದೆ ಸಂತ್ರಸ್ತೆಯನ್ನು ಏರ್ಲಿಫ್ಟ್ ಮಾಡಿರುವುದು ಏಕೆ ಎಂದು ಪ್ರಶ್ನಿಸಿದರು.
ಕೆಪಿಸಿಸಿ ವಕ್ತಾರ ಎಂ.ಲಕ್ಷ ¾ಣ್ ಮಾತನಾಡಿ, ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಸಂತ್ರಸ್ತೆಯ ಜೊತೆಗಿದ್ದ ಯುವಕನ ತಂದೆ ಬಿಜೆಪಿಯ ಬೆಂಬಲಿಗರು. ಇದು ಕಾಂಗ್ರೆಸ್ ನೇರವಾಗಿ ಮಾಡುತ್ತಿರುವ ಆರೋಪ. ಬಿಜೆಪಿ ಮುಖಂಡರು ಇದರಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ಮಾಹಿತಿ ಇದ್ದು, ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ವಾಸು, ಎಂ.ಕೆ. ಸೋಮಶೇಖರ್,ಕಾಂಗ್ರೆಸ್ಜಿಲ್ಲಾಧ್ಯಕ್ಷಬಿ.ಜೆ.ವಿಜಯ್ ಕುಮಾರ್, ಮುಖಂಡ ಎಂ. ಶಿವಣ್ಣ ಇತರರಿದ್ದರು.
ತುಟಿಬಿಚ್ಚ
ದಬಿಜೆಪಿ ನಾಯಕರು
ಕೆಪಿಸಿಸಿಮಹಿಳಾಘಟಕದಮಾಜಿಅಧ್ಯಕ್ಷೆಮಂಜುಳಾಮಾನಸಮಾತನಾಡಿ,ಬಿಜೆಪಿಯಲ್ಲಿಕ್ರಿಯಾಶೀಲರಾಗಿರುವ ತಾರಾ ಅನುರಾಧ, ಶ್ರುತಿ, ಶಿಲ್ಪಾ ಗಣೇಶ್, ಮಾಳವಿಕಾ ಇವರ್ಯಾರೂ ಈ ಕೃತ್ಯದ ಬಗ್ಗೆ ಮಾತೇ ಆಡಿಲ್ಲ. ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬಂದಾಗ ಹೋರಾಟ ಎಂದು ಕೂಗಾಡುತ್ತಿದ್ದಕೇಂದ್ರ ಸಚಿವೆ ಶೋಭಾಕರಂದ್ಲಾಜೆ ತುಟ್ಟಿ ಬಿಚ್ಚಿಲ್ಲ. ಹಿಂದಿನ ಸರ್ಕಾರಗಳು ಇದ್ದ ವೇಳೆಯಲ್ಲಿ ಪದೇ-ಪದೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದ ಬಿಜೆಪಿಯ ಮಹಿಳಾ ಪದಾಧಿಕಾರಿಗಳು ಈ ಪ್ರಕರಣದಲ್ಲಿ ಮೌನವಾಗಿದ್ದಾರೆ. ಸ್ಥಳೀಯ ಶಾಸಕರಾದ ರಾಮದಾಸ್
ಗೆಹೆಣ್ಣುಮಕ್ಕಳೆಂದರೆ ಏನೋಭಯ? ನಾಗೇಂದ್ರಅವರು ಮಾತನ್ನೇಆಡಲ್ಲ.ಮಹೇಶ್ಅವರಿಗೆ ಪುರುಷೊತ್ತಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.