Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್ ಪಿಳ್ಳೆ
Team Udayavani, Sep 28, 2023, 11:11 PM IST
ಮೈಸೂರು: ರಾಜಕಾರಣದಿಂದ ಧರ್ಮವನ್ನು ಬೇರ್ಪಡಿಸುವುದರಿಂದ ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ ಎಂದು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ಹೇಳಿ ದರು.
ನಗರದ ಕೃಷ್ಣಧಾಮದಲ್ಲಿ ಗುರುವಾರ ಆಯೋಜಿಸಿದ್ದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ 36ನೇ ಚಾತುರ್ಮಾಸ್ಯ ವ್ರತದ ಸಮಾರಂಭ ಸಮಾರೋಪ ಮತ್ತು ಅಭಿವಂದನೆ ಉದ್ಘಾಟಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರೂ ತಮ್ಮ ಹೋರಾಟದುದ್ದಕ್ಕೂ ಧರ್ಮದ ಸಾರ ಒತ್ತಿ ಹೇಳಿದ್ದಾರೆ. ಅವರು ಎಂದೂ ಧರ್ಮವನ್ನು ಅಪಮಾನ ಮಾಡುವ ಕೆಲಸ ಮಾಡಲಿಲ್ಲ ಎಂದು ಹೇಳಿದರು.
ಭಾರತ ಇಡೀ ಜಗತ್ತಿಗೆ ಅಧ್ಯಾತ್ಮವನ್ನು ಉಡುಗೊರೆಯಾಗಿ ನೀಡಿದ ರಾಷ್ಟ್ರ. ಇದರಿಂದ ಅನೇಕ ರಾಷ್ಟ್ರಗಳು ಪ್ರಯೋಜನ ಪಡೆದುಕೊಂಡಿವೆ. ದ್ವೈತ, ಅದ್ವೈತ ಹಾಗೂ ವಿಶಿಷ್ಟ ಅದ್ವೈತಗಳು ಮನುಕುಲದ ಆಸ್ತಿಯಾಗಿದ್ದು, ಇದು ನಮ್ಮ ಖುಷಿಗಳ ಕೊಡುಗೆ ಎಂದರು.
ಸಮಾಜದಲ್ಲಿ ಹಿಂದಿನ ಆಚ ರಣೆ ಮತ್ತು ಪದ್ಧ ತಿಗಳು ಕಾಲ ಕಾಲಕ್ಕೆ ಸುಧಾರಣೆ ಆಗಬೇಕಾಗಿದೆ. ಕೇರಳದಲ್ಲಿ ನಾರಾಯಣ ಗುರು ಹಾಗೂ ಕರ್ನಾಟಕದಲ್ಲಿ ಬಸವಣ್ಣ ಅವರು ಆಧ್ಯಾತ್ಮದ ಮೂಲಕ ಸಮಾಜ ಸುಧಾರಣೆಗೆ ಪ್ರಯತ್ನಿಸಿದರು. ನಾರಾಯಣ ಗುರು ಅವರು ರಚಿಸಿದ 64 ಕೃತಿ ವೇದಾಂತ ಆಧಾರಿತ ಎಂಬುದು ಬಹಳ ಮುಖ್ಯ. ನಾರಾಯಣ ಗುರು, ಬಸವಣ್ಣ ಮುಂತಾದ ಅನೇಕರ ಮಹನೀಯರ ಪರಿಶ್ರಮದ ಫಲವಾಗಿ ಪ್ರಸ್ತುತ ಅಸ್ಪೃಶ್ಯತೆಯ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು.
ಪೇಜಾವರ ಮಠದ ಶ್ರೀ ವಿಶ್ವ ಪ್ರ ಸನ್ನ ತೀರ್ಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಪೂರ್ಣಪ್ರಜ್ಞ ಸಂಶೋಧನ ಮಂದಿರದ ನಿರ್ದೇಶಕ ಡಾ| ಆನಂದತೀರ್ಥಾಚಾರ್ಯ ನಾಗಸಂಪಿಗೆ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karkala: ಎಲ್ಲಿ ಹೋಯಿತು ಬಂಗ್ಲೆಗುಡ್ಡೆ ವೃತ್ತದ ಸಿಸಿ ಕೆಮರಾ?
Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ
World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ
Karkala: ಬಸ್ ನಿಲ್ದಾಣದಲ್ಲಿ ಲಘು ವಾಹನ!ಬಸ್ ನಿಲ್ದಾಣದ ಬಗ್ಗೆ ಪುರಸಭೆ ದಿವ್ಯ ನಿರ್ಲಕ್ಷ್ಯ
Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.