![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2020, 3:00 AM IST
ಮೈಸೂರು: ಅಂತರ್ಜಲ ವೃದ್ಧಿಗೆ ಕ್ರಮಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ನೀರಿಲ್ಲದೇ ಕಷ್ಟಕರ ಜೀವನ ಎದುರಿಸಬೇಕಾಗುತ್ತದೆ ಎಂದು ಜಿಪಂ ಸಿಇಒ ಕೆ.ಜ್ಯೋತಿ ಹೇಳಿದರು.
ರಾಜ್ಯ ನಗರಾಭಿವೃದ್ಧಿ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾ ಅಂತರ್ಜಲ ನಿರ್ದೇಶನಾಲಯ, ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಅಂತರ್ಜಲ ಕಚೇರಿಯ ಸಹಯೋಗದಲ್ಲಿ, ಅಂತರ್ಜಲ ಸದ್ಬಳಕೆ, ಸಂರಕ್ಷಣೆ, ನಿರ್ವಹಣೆ ಹಾಗೂ ಗುಣಮಟ್ಟ ಮತ್ತು ವಿಫಲ ಕೊಳವೆಬಾವಿಗಳನ್ನು ಸುರಕ್ಷಿತವಾಗಿ ಮುಚ್ಚಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಮ್ಮಿಕೊಳ್ಳಲಾದ ಅಂತರ್ಜಲ ಜನ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕುಸಿಯುತ್ತಿರುವ ಅಂತರ್ಜಲ: ಅಂತರ್ಜಲ ಮಟ್ಟ ಇತ್ತೀಚೆಗೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಒಂದು ವೇಳೆ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ನೀರಿಲ್ಲದೇ ಕಷ್ಟಕರ ಜೀವನ ಎದುರಿಸಬೇಕಾಗುತ್ತದೆ. ನೀರಿನ ಬಳಕೆ ಅತಿಯಾಗಿದ್ದು, ಗುಣಮಟ್ಟ ಕಡಿಮೆಯಾಗಿದೆ. ಜೊತೆಗೆ ಅಂತರ್ಜಲ ಕಲುಷಿತ ಗೊಂಡಿದೆ ಎಂಬ ವರದಿ ಬರುತ್ತಿದೆ. ಅಂತರ್ಜಲ ಮಟ್ಟವನ್ನು ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾಯಾಗಿದ್ದು, ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದರು.
ನೀರು ಇಂದು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯವಾಗಿದೆ. ಅಂತರ್ಜಲ ಬರೀದಾದರೆ ಆಗುವ ಗಂಭೀರತೆ ಜನತೆಗೆ ಅರ್ಥವಾಗಿಲ್ಲ. ಅಂತರ್ಜಲ ಹೆಚ್ಚು ಮಾಡುವುದು, ಸಂರಕ್ಷಣೆ ಮಾಡುವುದು ಹೇಗೆ ಎನ್ನುವುದು ತಿಳಿದಿರುವುದಿಲ್ಲ. ಈ ಕುರಿತು ಅವರಿಗೆ ಮಾಹಿತಿ ನೀಡಬೇಕು ಎಂದರು.
ಮಳೆ ಕೊಯ್ಲಿನಿಂದ ಅಂತರ್ಜಲ ಹೆಚ್ಚು: ಮಳೆ ಬಂದಾಗ ಮಳೆ ಕೊಯ್ಲು ಮೂಲಕ ನೀರು ಸಂಗ್ರಹಣೆ ಮಾಡುವುದರಿಂದಲೂ ಅಂತರ್ಜಲ ಮಟ್ಟ ಹೆಚ್ಚಿಸಬಹುದು. ಜನತೆಯಲ್ಲಿ ವಿಷಯದ ಗಂಭೀರತೆಯನ್ನು ಹೆಚ್ಚಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು. ಕೊಳವೆ ಬಾವಿ ಹೆಚ್ಚು ಕೊರೆಯಬಾರದು. ಕಟ್ಟು ನಿಟ್ಟಾಗಿ ಈ ಕ್ರಮವನ್ನು ಪಾಲಿಸಬೇಕು. ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಕೊಳವೆ ಬಾವಿ ಕೊರೆಯಬೇಕು.
ಎನ್ಜಿಒ, ಸಂಘ-ಸಂಸ್ಥೆಗಳು ಕೂಡ ಈ ಕುರಿತು ಜನರಲ್ಲಿ ಅರಿವು ಮೂಡಿಸಲುವ ಕೆಲಸ ಮಾಡಬೇಕು. ನೀರು ಜೀವದಾಯಿನಿಯಾಗಿದ್ದು, ಅದನ್ನು ಕಾಪಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟಪಡಬೇಕಾಗುತ್ತದೆ. ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯೀಕರಣ, ಅಂತರ್ಜಲ ಪುನಶ್ಚೇತನ, ಮಳೆ ನೀರು ಸಂಗ್ರಹ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸುವ ಜಲ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಅವುಗಳನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಅಂತರ್ಜಲಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಹೊಂಡ ನಿರ್ಮಿಸುವ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅಂತರ್ಜಲ ನಿರ್ದೇಶನಾಲಯದ ಬಿ.ಟಿ.ಕಾಂತರಾಜು ಅಂತರ್ಜಲ ಕೈಪಿಡಿ ಬಿಡುಗಡೆ ಮಾಡಿದರು. ಎಸ್ಐಯುಡಿ ನಿರ್ದೇಶಕ ಜಿ.ವೆಂಕಟೇಶ್ ಕಡಗದ ಕೈ, ಗಣಿ ಭೂವಿಜ್ಞಾನ ಇಲಾಖೆಯ ಜಂಟಿ ನಿರ್ದೇಶಕ ಮಹಂತೇಶ್, ಇಸ್ರೋ ನಿವೃತ್ತ ಹಿರಿಯ ವಿಜ್ಞಾನಿ ಪ್ರೊ. ಜಗನ್ನಾತ್ ಮತ್ತಿತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.