ಗಿನ್ನಿಸ್‌ ದಾಖಲೆ ನಮ್ಮ ಕೈತಪ್ಪಿಲ್ಲ: ಡಿಸಿ ರಂದೀಪ್‌


Team Udayavani, Jun 30, 2017, 12:46 PM IST

mys5.jpg

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆಸಲಾದ ಬೃಹತ್‌ ಯೋಗ ಪ್ರದರ್ಶನದ ಗಿನ್ನಿಸ್‌ ದಾಖಲೆ ನಮ್ಮ ಕೈತಪ್ಪಿಲ್ಲ, ಪೂರಕ ದಾಖಲೆಗಳನ್ನು ಸಲ್ಲಿಸಲಿದ್ದು, ಗಿನ್ನಿಸ್‌ ದಾಖಲೆ ದೊರೆಯುವ ವಿಶ್ವಾಸವಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಗದಲ್ಲಿ ಎರಡು ಗಿನ್ನಿಸ್‌ ದಾಖಲೆಗೆ ಪ್ರಯತ್ನಿಸಲಾಗಿತ್ತು. ಎರಡೂ ಪ್ರದರ್ಶನಕ್ಕೆ ಮೈಸೂರಿಗರ ಪ್ರತಿಕ್ರಿಯೆ ಉತ್ತಮವಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜೂ.19ರಂದು ಅರಮನೆ ಆವರಣದಲ್ಲಿ ನಡೆದ ಅತಿದೊಡ್ಡ ಯೋಗ ಸರಪಳಿ ಪ್ರದರ್ಶನ ಸಂಬಂಧದ ಛಾಯಾಚಿತ್ರ, ವಿಡಿಯೋ ತುಣುಕು, ಪತ್ರಿಕಾ ಮಾಧ್ಯಮಗಳ ವರದಿ, ಡ್ರೋಣ್‌ ಕ್ಯಾಮರಾದಲ್ಲಿ ಸೆರೆಹಿಡಿಯಲಾದ ದೃಶ್ಯಾವಳಿಗಳನ್ನು ಗುರುವಾರ ಗಿನ್ನಿಸ್‌ ಬುಕ್‌ ಆಫ್ ರೆಕಾರ್ಡ್ಸ್‌ ಸಂಸ್ಥೆಗೆ ಸಲ್ಲಿಸಲಾಗಿದೆ. ಸದ್ಯ ಟಿಕೆಟ್‌ ನೀಡಿಕೆ ಆಧಾರದ ಮೇಲೆ ಆಹ್ಮದಾಬಾದ್‌ಗೆ ಗಿನ್ನಿಸ್‌ ದಾಖಲೆ ನೀಡಲಾಗಿದೆ ಎಂದರು.

ಗಮನಕ್ಕೆ ತರಲಾಗುವುದು: ರೇಸ್‌ಕೋರ್ಸ್‌ ಆವರಣದಲ್ಲಿ 72 ಸಾವಿರ ಜನರು ಸಾಮೂಹಿಕವಾಗಿ ಯೋಗ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಂತಿಮವಾಗಿ ನಮ್ಮ ಗುರಿ ಹಿಂದಿನ ದಾಖಲೆ 37 ಸಾವಿರವನ್ನು ಮುರಿಯುವುದಾಗಿತ್ತು. ಆದರೆ, ಮೈಸೂರಿಗರು ನಿರೀಕ್ಷೆಗೆ ಮೀರಿ ಸಹಕಾರ ನೀಡಿದ್ದರಿಂದ 54101 ಜನರು ಯೋಗ ಪ್ರದರ್ಶನದಲ್ಲಿ ಭಾಗಿಯಾದರು. ರಜೆ ದಿನವಾಗಿದ್ದರೆ ಇನ್ನೂ ಹೆಚ್ಚಿನ ಜನ ಭಾಗವಹಿಸುವ ಸಾಧ್ಯತೆ ಇತ್ತು.

ಈ 54101 ಜನರಿಗೆ ಟಿಕೆಟ್‌ ನೀಡಿರುವ ಮಾಹಿತಿಯಷ್ಟೇ ಗಿನ್ನಿಸ್‌ ಸಂಸ್ಥೆಗೆ ಹೋಗಿದೆ. ಆದರೆ, ಸುಮಾರು 1 ಸಾವಿರ ಮಂದಿ ಪ್ರದರ್ಶಕರು ಮುಂಚಿತವಾಗಿಯೇ ಮೈದಾನದೊಳಗಿದ್ದರು, ಅವರಿಗೆ ಯಾವ ಟಿಕೆಟ್‌ ನೀಡಿರಲಿಲ್ಲ. ಈ ಅಂಶವನ್ನೂ ಸಂಸ್ಥೆ ಗಮನಕ್ಕೆ ತರಲಾಗುವುದು. 50 ರಿಂದ 60 ಲಕ್ಷ ರೂ. ವೆಚ್ಚದಲ್ಲಿ ಇಡೀ ಪ್ರದರ್ಶನ ಪೂರ್ಣಗೊಳಿಸಿದ್ದು, 3 ತಿಂಗಳವರೆಗೆ ಗಿನ್ನಿಸ್‌ ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಸಲು ಅವಕಾಶವಿದೆ.

ನಮ್ಮ ಮನವಿಗೆ ಸಂಸ್ಥೆ ಒಪ್ಪಿದರೆ ವಿಶೇಷ ವೀಕ್ಷಕರನ್ನು ಕಳುಹಿಸುವ ಸಾಧ್ಯತೆ ಇದೆ ಎಂದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್‌.ನಟರಾಜ್‌, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ರಾಜು, ಜಿಎಸ್‌ಎಸ್‌ ಸಂಸ್ಥೆಯ ಶ್ರೀಹರಿ, ಪ್ರಶಾಂತ್‌, ನಾರಾಯಣ ಗೌಡ ಇದ್ದರು.

ದಾಖಲಾತಿಗಳನ್ನು ಸಲ್ಲಿಸಲಾಗುವುದು
ಜೂ. 21ರಂದು ರೇಸ್‌ಕೋರ್ಸ್‌ ಆವರಣದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದ ಆಡಿಯೋ, ವಿಡಿಯೋ, ಪತ್ರಿಕಾ ಮಾಧ್ಯಮಗಳ ವರದಿಗಳು, ಡ್ರೋಣ್‌ ಕ್ಯಾಮರಾಗಳ ಛಾಯಾಚಿತ್ರ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಜುಲೈ ಮೊದಲ ವಾರದಲ್ಲಿ ಗಿನ್ನಿಸ್‌ ಬುಕ್‌ ಆಫ್ ರೆಕಾರ್ಡ್ಸ್‌ ಸಂಸ್ಥೆಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.