![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 9, 2022, 10:42 PM IST
ಹುಣಸೂರು : ತಾಲೂಕಿನಲ್ಲಿ ಕಳೆದ 15 ದಿನಗಳ ಪ್ರಕೃತಿ ವಿಕೋಪಕ್ಕೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಗೆ ಈವರೆಗೆ 235 ಮನೆಗಳಿಗೆ ಹಾನಿಯಾಗಿದೆ, ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ನಷ್ಟವಾಗಿದ್ದು, ಸರಕಾರ ತ್ವರಿತವಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಾಸಕ ಎಚ್.ಪಿ.ಮಂಜುನಾಥ್ ಒತ್ತಾಯಿಸಿದರು.
ಸೋಮವಾರ ಸಂಜೆ ತಾಲೂಕು ಕಚೇರಿ ಸಭಾಂಗಣದಲ್ಲಿ ಮಳೆ-ಬಿರುಗಾಳಿ ಹಾನಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿ ಎಲ್ಲೆಡೆ ಮಳೆ ಹಾನಿ ಸಾಕಷ್ಟಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲಾ, ಸರಕಾರದ ಬಗ್ಗೆ ಜನರಲ್ಲಿ ಭ್ರಮನಿರಸನವಾಗಿದೆ. ಕಳೆದ ಎರಡು ವರ್ಷಗಳ ಮಳೆ ಹಾನಿಗೆ ಸಂಬಂಧಿಸಿದಂತೆ ಇನ್ನು ಕೆಲವರಿಗೆ ಮನೆಗಳ ಪರಿಹಾರದ ಹಣ ಫಲಾನುಭವಿಗಳಿಗೆ ತಲುಪಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಬಡವರಿಗೆ ಸ್ಪಂದಿಸಿ;
ತಾಲೂಕಲ್ಲಿ ನಿತ್ಯ ಬಿರುಗಾಳಿ ಮಳೆಯ ಉಪಟಳವಿದ್ದದ್ದೇ, ಆದರೆ, ಕೆಲ ಗ್ರಾಮಲೆಕ್ಕಿಗರು, ಪಿಡಿಓಗಳು ಸ್ಪಂದಿಸುತ್ತಿಲ್ಲವೆಂಬ ದೂರುಗಳಿವೆ. ಹಾನಿ ಸಂಭವಿಸಿದ ತಕ್ಷಣವೇ ಸ್ಪಂದಿಸಿ ಮಾನವೀಯತೆ ಮೆರೆಯಿರೆಂದು ಹುರಿದುಂಬಿಸಿದರು. ಹಾನಿ ಅಂದಾಜನ್ನು ಜಿ.ಪಂ.ಇಂಜಿನಿಯರಿಂಗ್ ವಿಭಾಗದವರು ಸಹ ತಕ್ಷಣವೇ ವರದಿ ನೀಡುವುದರಿಂದ ಬೇಗ ಪರಿಹಾರ ದೊರೆಯಲಿದೆ ಎಂದು ಸೂಚಿಸಿದರು.
ತಾಲೂಕಲ್ಲಿ ಚೆಸ್ಕಾಂ, ಕಂದಾಯ, ನಗರಸಭೆ, ಗ್ರಾಮೀಣಾಭಿವೃದ್ದಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಶ್ಲಾಘಿಸಿ, ಹನಗೋಡು ಉಪ-ತಹಶೀಲ್ದಾರ್ ಚೆಲುವರಾಜು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಿರೆಂದು ಸಭೆಯಲ್ಲೇ ತರಾಟೆಗೊಳಪಡಿಸಿ, ಬದ್ದತೆಯಿಂದ ಕೆಲಸ ಮಾಡಿರೆಂದು ಎಚ್ಚರಿಸಿದರು. ಸಭೆಯಲ್ಲಿ ತಹಶೀಲ್ದಾರ್ ಡಾ.ಅಶೋಕ್, ಇಓ ಗಿರೀಶ್ ಹಾಜರಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.