ಯಜಮಾನನೇ ಆಡಳಿತದಲ್ಲಿ ಹಿಡಿತ ಕಳೆದುಕೊಂಡಿದ್ದಾರೆ,: ಸಿಎಂ ವಿರುದ್ದ ವಿಶ್ವನಾಥ್ ಟೀಕೆ


Team Udayavani, Apr 29, 2021, 11:58 AM IST

h vishwanath

ಹುಣಸೂರು : ರಾಜ್ಯದಲ್ಲಿ ಸರಕಾರ ನಡೆಸುವ ಯಜಮಾನ ತನ್ನ ಆಡಳಿತದಲ್ಲಿ ಹಿಡಿತವನ್ನೇ ಕಳೆದುಕೊಂಡಿದ್ದಾರೆ, ಎಲ್ಲಾ ಹಂತದಲ್ಲೂ ವೈಫಲ್ಯತೆ ಎದ್ದು ಕಾಣುತ್ತಿದ್ದು, ಆಡಳಿತದಲ್ಲಿ ಭದ್ರತೆ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮುಖ್ಯಮಂತ್ರಿಗಳ ಹೆಸರು ಹೇಳದೆ ಪರೋಕ್ಷವಾಗಿ ಟೀಕಿಸಿದರು.

ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿರುವ ರೈತರ ಭತ್ತ-ರಾಗಿಯ 700 ಕೋಟಿ ರೂ ಬಾಕಿ ಉಳಿಸಿಕೊಂಡಿದ್ದು, ಈವರೆಗೂ ಪಾವತಿಸಿಲ್ಲ. ಯಾಕೆಂದರೆ ರೈತರು ಕಮಿಷನ್ ಕೊಡಲು ಅಶಕ್ತರು, ಆದರೆ ಗುತ್ತಿಗೆದಾರರ ಬಿಲ್‌ಗಳು ಮಾತ್ರ ವಾರಕ್ಕೊಮ್ಮೆ ಪಾವತಿಯಾಗುತ್ತಿದ್ದು, ಶೇ.20ರಷ್ಟು ಕಮಿಷನ್ ಕಿಕ್ ಬ್ಯಾಕ್ ಪಡೆಯುವ ಸಂಪ್ರದಾಯ ಎಗ್ಗಿಲ್ಲದೆ ನಡೆಯುತ್ತಿದೆ ಎಂದರು.

ಗ್ರಾಮೀಣ ಪ್ರದೇಶದ ಆಸ್ಪತ್ರೆಯನ್ನು ಸಜ್ಜುಗೊಳಿಸುವ ತವಕ ಆರೋಗ್ಯ ಮಂತ್ರಿಗಳಿಗಿದ್ದರೂ ವೈದ್ಯರ ನೇಮಕಾತಿ ನಡೆಯುತ್ತಿಲ್ಲ, ಅನುದಾನವೂ ಬಿಡುಗಡೆಯಾಗುತ್ತಿಲ್ಲ, ಪ್ರತಿಯೊಂದಕ್ಕೂ ಹಣಕಾಸು ಮಂತ್ರಿಯ ಹಸಿರು ನಿಶಾನೆ ತೋರಬೇಕಿದ್ದು, ಹಣಕಾಸು ಇಲಾಖೆಯೇ ಮುಖ್ಯಮಂತ್ರಿ ಹಿಡಿತದಲ್ಲಿದ್ದು, ಹತ್ತು ರೂಪಾಯಿಗೂ ಕೈಚಾಚಬೇಕಿದೆ. ಮುಖ್ಯಮಂತ್ರಿಗಳು ಸಹ ಆರೋಗ್ಯ ಸಚಿವರ ವೇಗಕ್ಕೆ ತಕ್ಕಂತೆ ಸ್ಪಂದಿಸುತ್ತಿಲ್ಲ,  ಕೊರೋನಾದ 480 ಕೋಟಿ ಬಿಲ್‌ನ್ನು ಆಡಿಟ್ ನಡೆಸಿದ ವೇಳೆ ಎಲ್ಲವೂ ಬಹಿರಂಗವಾಗಿದೆ ಎಂದು ತಮ್ಮದೇ ಸರಕಾರವನ್ನು ಟೀಕಿಸಿದರು.

ಇದನ್ನೂ ಓದಿ:ಕೋವಿಡ್ ನಿಯಂತ್ರಣ: ಮಹಾರಾಷ್ಟ್ರದಲ್ಲಿ ಮೇ 15ರವರೆಗೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

ಕೇಂದ್ರ ಸರಕಾರದಿಂದ ಕಳೆದ ಸಾಲಿನ ಬಜೆಟ್‌ನಲ್ಲಿ ಗ್ರಾಮೀಣ ಆಸ್ಪತ್ರೆಗಳಲ್ಲೇ ಎಲ್ಲ ರೀತಿಯ ಚಿಕಿತ್ಸೆಗೆ ಸಜ್ಜುಗೊಳಿಸಲು ಅನುದಾನ ಮೀಸಲಿಟ್ಟಿದ್ದು. ಇನ್ನೂ ಸಹ ಬಳಕೆಯಾಗಬೇಕಿದೆ ಎಂದರು.

ತಾಲೂಕಿನ ನಿಲುವಾಗಿಲು ಏತ ನೀರಾವರಿ ಯೋಜನೆಗೆ 19 ಕೋಟಿ ರೂ ಅನುದಾನ ಮಂಜೂರಾಗಿ, ಟೆಂಡರ್ ಮುಗಿದು ಗುತ್ತಿಗೆದಾರ ನೇಮಕವಾದ ಬಳಿಕವೂ  ಹಣಕಾಸು ಸಚಿವಾಲಯ ಹಿಂಪಡೆದಿದೆ, ಪ್ರಶ್ನಿಸಿದರೆ ಸಿ.ಎಂ.ಕಚೇರಿ ಆದೇಶವೆನ್ನುತ್ತಾರೆ. ಈಬಗ್ಗೆ ಕಟುವಾಗಿಯೂ ಮಾತನಾಡಿದ್ದೇನೆ. ಸಣ್ಣ ನೀರಾವರಿ ಸಚಿವರು ಸಹ ಪ್ರಶ್ನಿಸಿದ್ದು,  ಶೀಘ್ರವೇ ಯೋಜನೆ ಜಾರಿಗೊಳ್ಳುವ ವಿಶ್ವಾಸವಿದೆ ಎಂದರು. ಈ ವೇಳೆ ಹುಡಾ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ಹರವೆ ರವಿ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.