ಹನಗೋಡು ಜಿಪಂ: ಶೇ.71 ಮತದಾನ


Team Udayavani, Jun 15, 2018, 1:51 PM IST

m5-henagodu.jpg

ಹುಣಸೂರು: ತಾಲೂಕು ಹನಗೋಡು ಜಿಪಂ ಕ್ಷೇತ್ರದ ಉಪ ಚುನಾವಣೆ ಭಾರೀ ಮಳೆ ನಡುವೆಯೂ ಶಾಂತಿಯುತವಾಗಿ ನಡೆದಿದ್ದು, ಶೇ.71.02ರಷ್ಟು ಮತದಾನವಾಗಿದೆ. ಬೆಳಗ್ಗೆ 7ಕ್ಕೆ ಮತದಾನ ಆರಂಭಗೊಂಡರೂ ಮತಕೇಂದ್ರಕ್ಕೆ ಮತದಾರರು ತಡವಾಗಿ ಆಗಮಿಸಿದರು.

10 ಗಂಟೆ ಬಳಿಕ ಹನಗೋಡಿನ ಮೂರು ಮತಕೇಂದ್ರ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಜನರು ಸಾರದಿಯಲ್ಲಿ ನಿಂತು ಮತದಾನ ಮಾಡಿದರು. ಮಧ್ಯಾಹ್ನ 3ರ ವೇಳೆಗೆ ಶೇ.60ರಷ್ಟು ಮಾತ್ರ ಮತದಾನವಾಗಿತ್ತು. ಬಳಿಕ 2 ಗಂಟೆಯಲ್ಲಿಯೇ ಶೇ.11ರಷ್ಟು ಮತದಾನವಾಗಿ ಒಟ್ಟಾರೆ 71.02 ಮತದಾನವಾಯಿತು.

ಕೈಕೊಟ್ಟ ಇವಿಎಂ ಯಂತ್ರ: ಹನಗೋಡಿಗೆ ಸಮೀಪದ ಬಿ.ಆರ್‌.ಕಾವಲ್‌ ಮತಕೇಂದ್ರದಲ್ಲಿ ಇವಿಎಂ ಯಂತ್ರ ಕೈಕೊಟ್ಟಿತ್ತು, ತಕ್ಷಣವೇ ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ಹಲವು ಮತ ಕೇಂದ್ರಗಳಲ್ಲಿ ಪಕ್ಷಗಳ ಕಾರ್ಯಕರ್ತರು ಛತ್ರಿ ಹಿಡಿದು ಮತಯಾಚಿಸಿದರು. ಅಭ್ಯರ್ಥಿಗಳಾದ ಕಾಂಗ್ರೆಸ್‌ನ ಕಟ್ಟನಾಯ್ಕ, ಜೆಡಿಎಸ್‌ನ ಶಿವಣ್ಣ, ಬಿಜೆಪಿಯ ಗಿರೀಶ್‌ ಕ್ಷೇತ್ರಾದ್ಯಂತ ಸುತ್ತಾಡಿ ಮತಯಾಚಿಸಿದರು. 

ಹಾಡಿಗಳಲ್ಲಿ ಆದಿವಾಸಿಗಳು ಕೆಲಸಕ್ಕೆ ತೆರಳದೆ ಮತದಾನ ಮಾಡಿದ್ದು ವಿಶೇಷವಾಗಿತ್ತು. ಎಲ್ಲಿಯೂ ಗಲಾಟೆ ನಡೆಯದೆ ಶಾಂತಿಯುತವಾಗಿ ಚುನಾವಣೆ ನಡೆಯಿತು. ಸಹಾಯಕ ಚುನಾವಣಾಧಿಕಾರಿಯೂ ಆದ ತಹಶೀಲ್ದಾರ್‌ ಮಹೇಶ್‌, ಚುನಾವಣಾ ಸೆಕ್ಟರಲ್‌ ಮ್ಯಾಜಿಸ್ಟೇಟರ್‌ಗಳು ಕ್ಷೇತ್ರಾದ್ಯಂತ ಸಂಚರಿಸಿದರು. ಎಸ್‌ಐ ಆನಂದ್‌ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕ್ಷೇತ್ರದ 32,093 ಮತದಾರರ ಪೈಕಿ 22,856 ಮಂದಿ ಮತದಾನ ಮಾಡಿದ್ದು, ಈ ಪೈಕಿ 11,485 ಪುರುಷ, 11,371 ಮಹಿಳಾ ಮತದಾರರು ಮತದಾನ ಮಾಡಿದ್ದು, ಶೇ.71.02ರಷ್ಟು ಮತದಾನವಾಗಿದೆ.

ಮತದಾನಕ್ಕೆ ಮಳೆ ಅಡ್ಡಿ: ಬುಧವಾರ ರಾತ್ರಿಯಿಂದಲೇ ಆರಂಭಗೊಂಡ ಮಳೆಯು ಬೆಳಗ್ಗೆ 10 ಗಂಟೆವರೆಗೂ ಸುರಿಯಿತು. ಮುಂಜಾನೆ ಮಳೆಯು ಅಭ್ಯರ್ಥಿಗಳನ್ನು ಚಿಂತೆಗೀಡು ಮಾಡಿತ್ತು. ಆದರೆ 10 ನಂತರ ಬಿಡುವು ಕೊಟ್ಟಿತಾದರೂ ಮದ್ಯೆ-ಮದ್ಯೆ ತುಂತುರು ಮಳೆ ಬೀಳುತ್ತಲೇ ಇತ್ತು. ಇದರಿಂದಾಗಿ ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ ಮಂದಗತಿಯಲ್ಲಿ ಸಾಗಿದ ಮತದಾನ ಮಧ್ಯಾಹ್ನ ಚುರುಕುಗೊಂಡಿತ್ತು. 

ಗೋವಿಂದನಗಳ್ಳಿ ಗ್ರಾಪಂ ಚುನಾವಣೆ: ತಾಲೂಕಿನ ಗೋವಿಂದನಹಳ್ಳಿ ಗ್ರಾಮ ಪಂಚಾಯಿತಿ ಆಜಾದ್‌ ನಗರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ 1339ಕ್ಕೆ 1027 ಮತದಾರರು ಮತ ಚಲಾಯಿಸಿದ್ದಾರೆ, ಶೇ.76ರಷ್ಟು ಮತದಾನವಾಗಿದೆ. 

17ಕ್ಕೆ ಫಲಿತಾಂಶ: ಹನಗೋಡು ಜಿಪಂ ಹಾಗೂ ಆಜಾದ್‌ನಗರದ ಕ್ಷೇತ್ರದ ಉಪ ಚುನಾವಣೆ ಮತಗಳ ಎಣಿಕೆಯು ಜೂ.17ರಂದು ತಾಲೂಕು ಕಚೇರಿಯಲ್ಲಿ ನಡೆಯಲಿದ್ದು, ಬೆಳಗ್ಗೆ 10ರ ವೇಳೆಗೆ ಫಲಿತಾಂಶ ಹೊರಬೀಳಲಿದೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.