ಹುಣಸೂರಲ್ಲಿ ವಿಜೃಂಭಿಸಿದ ಹನುಮಂತೋತ್ಸವ


Team Udayavani, Jan 28, 2018, 12:02 PM IST

m1-hunas.jpg

ಹುಣಸೂರು: ನಗರದಲ್ಲಿ ನಿಗದಿಯಂತೆ ನಡೆದ ಹನುಮಂತೋತ್ಸವದ ಮೆರವಣಿಗೆ ಸಾಂಸ್ಕೃತಿಕ ಕಲರವಗಳ ನಡುವೆ ವಿಜೃಂಭಿಸಿತು. ಮೆರವಣಿಗೆಯಲ್ಲಿ ನೂರಾರು ಹನುಮ ಭಕ್ತರು ಕೈಯಲ್ಲಿ ಕೇಸರಿ ಭಗವಧ್ವಜ ಹಿಡಿದು ಜಯಘೋಷಗಳೊಂದಿಗೆ ಸಾಗಿದರು. 

 ಮೆರವಣಿಗೆ: ಚುನಾವಣೆಗೆ ದಿನಗಣನೆ ಆರಂಭಗೊಂಡಿರುವುದರಿಂದ  ಹನುಮಂತೋತ್ಸವ ಮೆರವಣಿಗೆಯನ್ನು ಎಲ್ಲಾ ಪಕ್ಷಗಳು ಪ್ರತಿಷ್ಠೆಯನ್ನಾಗಿಸಿಕೊಂಡಿದ್ದವು. ಇದರಿಂದಾಗಿ ಸುಮಾರು 20 ಸಾವಿರಕ್ಕೂ ಹೆಚ್ಚು ಹನುಮಭಕ್ತರು, ವಿವಿಧ ಪಕ್ಷಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಮೆರವಣಿಗೆಗೆ ಚಾಲನೆ: ಬೆಳಗ್ಗೆ 11ಕ್ಕೆ ರಂಗನಾಥ ಬಡಾವಣೆಯಿಂದ ಹೊರಟ ಮೆರವಣಿಗೆಗೆ ಸಮಿತಿ ಗೌರವಾಧ್ಯಕ್ಷ, ಗಾವಡಗೆರೆ ಮಠದ ನಟರಾಜಸ್ವಾಮೀಜಿ, ಉಪವಿಭಾಗಾಧಿಕಾರಿ ನಿತೀಶ್‌, ಸಂಸದ ಪ್ರತಾಪಸಿಂಹ, ಶಾಸಕ ಮಂಜುನಾಥ್‌, ಮಾಜಿ ಮಂತ್ರಿ ಅಡಗೂರು ಎಚ್‌.ವಿಶ್ವನಾಥ್‌ ಪುಷ್ಪಾರ್ಚನೆ ಸಲ್ಲಿಸಿ ಚಾಲನೆ ನೀಡಿದರು.

ನಗರಸಭೆ ಅಧ್ಯಕ್ಷ ಶಿವಕುಮಾರ್‌, ಜಿಪಂ ಸದಸ್ಯೆ ಡಾ.ಪುಷ್ಪಾ ಅಮರ್‌ನಾಥ್‌, ನಗರಸಭಾ ಸದಸ್ಯರಿದ್ದರು. 4 ಹನುಮನ ವಿಗ್ರಹ: ಮೆರವಣಿಗೆಯಲ್ಲಿ ಮೂಲ ವಿಗ್ರಹ ಹಾಗೂ ವಿವಿಧ ರಾಮಮಂದಿರ ಹಾಗೂ ಗರಡಿ ಮನೆಯಿಂದ ಹನುಮನ ವಿಗ್ರಹವನ್ನು ಆಟೋಗಳಲ್ಲಿ ಮತ್ತು

ಬೆಂಗಳೂರಿನ ದಾನಿ ಗೋವಿಂದರಾಜು ನೀಡಿದ್ದ 6 ಅಡಿ ಎತ್ತರದ ಕಂಚಿನ ಉತ್ಸವ ಮೂರ್ತಿ, 11 ಅಡಿ ಎತ್ತರದ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ದೊಡ್ಡ ವಿಗ್ರಹ  ಮೆರವಣಿಗೆಯಲ್ಲಿ ಕಳೆಕಟ್ಟಿತ್ತು. ಇನ್ನು ಕಲ್ಕುಣಿಕೆಯ ನಾಲ್ಕಾರು ಕಡೆ ಹನುಮನ ಭಾವಚಿತ್ರ ಹಾಗೂ ವಿಗ್ರಹವನ್ನಿಟ್ಟು ಪೂಜಿಸಿದ್ದರು.

2 ಕಿ.ಮೀ ಉದ್ದದ ಮೆರವಣಿಗೆ: ಮೆರವಣಿಗೆ ಆರಂಭದಲ್ಲಿ ಹನುಮ ಭಕ್ತರಿಗಿಂತ ಪೋಲೀಸರೇ ಹೆಚ್ಚಿದ್ದರು. ಸುಮಾರು 2 ಕಿ.ಮೀವರೆಗೆ ಮೆರವಣಿಗೆ ಸಾಗಿತ್ತು. ನಂದಿಕಂಬಕ್ಕೆ ಪೂಜೆ ಸಲ್ಲಿಸಿದ ನಂತರ ವಾದ್ಯಗೋಷ್ಠಿ ನಡೆಯಿತು. ನಂತರ 5 ನಗಾರಿ, 3 ತಮಟೆ ತಂಡಗಳ ಸದ್ದಿಗೆ ಪ್ರೇರೇಪಿತರಾದ ಸಂಸದ, ಜಿಪಂ ಸದಸ್ಯೆ ಸೇರಿ ಅನೇಕ ಜನಪ್ರತಿನಿಧಿಗಳು ಕುಣಿದು ಕುಪ್ಪಳಿಸಿದರು. 

ಆರೂವರೆ ಗಂಟೆಕಾಲ ಮೆರವಣಿಗೆ: ಬೆಳಗ್ಗೆ 11ಕ್ಕೆ ಆರಂಭವಾದ ಮೆರವಣಿಗೆ ನಿಧಾನಗತಿಯಲ್ಲಿ ಸಾಗಿ ಮಂಜುನಾಥಸ್ವಾಮಿ ದೇವಾಲಯಕ್ಕೆ ಸಂಜೆ 5.30ರವೇಳೆಗೆ ಆಗಮಿಸಿತು. ಇಲ್ಲಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧ ಉಲ್ಲಂಘನೆಯಾಗಿರುವುದು ಸಾಬೀತಾಗಿದ್ದು ಮುಂದೇನು ಮಾಡುವರೆಂಬ ಕುತೂಹಕ ಎಲ್ಲರಲ್ಲಿದೆ.

ನಿಂತು ಹೋಗಿದ್ದ ಮೆರವಣಿಗೆ: ಕಳೆದ ಡಿ.3ರಂದು ನಡೆಯಬೇಕಿದ್ದ ಹನುಮಂತೋತ್ಸವ ಮೆರವಣಿಗೆ ಕಾರಣಾಂತರಗಳಿಂದ ನಿಂತು ಹೋಗಿತ್ತು. ಹನುಮ ಭಕ್ತರ, ರಾಜಕೀಯ ಹಿತಾಸಕ್ತರ ಮನವಿ ಮೇರೆಗೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆಯಾಗಿ ನಿಬಂಧನೆಗಳನ್ನು ಹೇರಿ ಮೆರವಣಿಗೆಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.