Nanjangud ಶ್ರೀಕಂಠೇಶ್ವರನ ದರ್ಶನ ಪಡೆದ ಎಚ್‌ಡಿಕೆ; ನನಗೆ ದೇವರ ಆಶೀರ್ವಾದ ಸಾಕು

ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ

Team Udayavani, Jul 28, 2024, 10:26 PM IST

Nanjangud ಶ್ರೀಕಂಠೇಶ್ವರನ ದರ್ಶನ ಪಡೆದ ಎಚ್‌ಡಿಕೆ; ನನಗೆ ದೇವರ ಆಶೀರ್ವಾದ ಸಾಕು

ನಂಜನಗೂಡು: ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ದೇವಾಲಯಗಳ ನಗರ ದಕ್ಷಿಣ ಕಾಶಿ ಇತಿಹಾಸ ಪ್ರಸಿದ್ಧ ಶ್ರೀಕಂಠೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಭಾನುವಾರ ಮುಂಜಾನೆ 9 ಗಂಟೆಗೆ ನಂಜನಗೂಡಿಗೆ ಅಗಮಿಸಿದ ಕೇಂದ್ರ ಸಚಿವರಿಗೆ ದೇಗುಲದಿಂದ ಸ್ವಾಗತ ನೀಡಲಾಯಿತು. ಮೊದಲಿಗೆ ವಿಘ್ನೇಶ್ವರನ ದರ್ಶನ ಪಡೆದು ನಂತರದಲ್ಲಿ ಸ್ವಾಮಿ ಸನ್ನಿಧಾನಕ್ಕೆ ಬಂದ ಕುಮಾರಸ್ವಾಮಿ, 40 ನಿಮಿಷ ವಿಶೇಷ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಆಗಮನದ ಹಿನ್ನೆಲೆಯಲ್ಲಿ ಸ್ವಾಮಿಗೆ ಕ್ಷೀರಾಭಿಷೇಕ, ರುದ್ರಾಭಿಷೇಕ ಬಿಲ್ವಪತ್ರಾರ್ಚನೆ ಮಾಡಲಾಯಿತು.

ಅಮ್ಮನವರ ಸನ್ನಿಧಾನಕ್ಕೆ ತೆರಳಿ, ಕುಂಕುಮಾರ್ಚನೆ ನಡೆಸಲಾಯಿತು.ನಂತರದಲ್ಲಿ ಎಷ್ಟೇ ದೇವಾಲಯಗಳು ಸುತ್ತಿದರೂ ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಡಿಸಿಎಂ ಅವರು ಅವರಪ್ಪನಾಣೆ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದಿದ್ದರು. ಆದರೆ, ನಾನು ಗೆದ್ದು ಕೇಂದ್ರ ಸಚಿವನಾಗಿಲ್ಲವೇ? ಹಾಗೆಯೇ ಅವರು ಹೇಳಿದ ಹೇಳಿಕೆಗಳಿಗೆ ತದ್ವಿರುದ್ಧವಾಗಿ ನನಗೆ ಒಳ್ಳೆಯದು ನಡೆಯುತ್ತದೆ ಅವರು ಆ ಪದ ಬಳಕೆ ಮಾಡಿದ್ದರಿಂದಲೇ ದೇವರು ನಿನಗೆ ಬೇಗನೆ ಆಶೀರ್ವಾದ ಮಾಡುತ್ತೇನೆ ಎಂದು ವ್ಯಂಗ್ಯವಾಡಿದರು.

ಕಳೆದ ಬಾರಿ ಶ್ರೀಕಂಠೇಶ್ವರನಲ್ಲಿ ಬಂದು ದರ್ಶನ ಮಾಡಿದ್ದೆ. ಕೇಂದ್ರ ಸಚಿವನಾದೆ, ಈ ಸರಿ ದರ್ಶನ ಮಾಡಿದ್ದೇನೆ. ಮನಸ್ಸಿನಲ್ಲಿ ಬೇಡಿಕೊಂಡಿದ್ದೇನೆ ಅದು ನಡೆಯುತ್ತದೆ. ಅದರಲ್ಲಿ ಯಾವುದೇ ಸಂಶಯ ಬೇಡ, ನನ್ನಗೆ ದೇವರ ಆಶೀರ್ವಾದ ಸಾಕು ಡಿ.ಕೆ.ಶಿವಕುಮಾರ್‌ ಆಶೀರ್ವಾದ ಬೇಡ ಎಂದು ಹೇಳಿದರು.

ಪ್ರವಾಸಿ ಮಂದಿರಕ್ಕೆ ಬೀಗ ಹಾಕಿದ್ದಕ್ಕೆ ಅಸಮಾಧಾನ
ದೇವರ ದರ್ಶನ ಪಡೆದು ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಮಾರ್ಗಮಧ್ಯ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಕೆಲಕಾಲ ವಿಶ್ರಾಂತಿ ಪಡೆದು ಸ್ಥಳೀಯರೊಂದಿಗೆ ಮಾತುಕತೆ ನಡೆಸುವ ಉದ್ದೇಶದಿಂದ ವಿಶ್ರಾಂತಿ ಗೃಹಕ್ಕೆ ತೆರಳಿದರು. ಆದರೆ, ಬೇಗ ತೆರೆದಿರಲಿಲ್ಲ. 15 ನಿಮಿಷ ಕಾರಿನಲ್ಲೇ ಕಾಯಬೇಕಾದ ಪರಿಸ್ಥಿತಿ ಎದುರಾಯಿತು. ಆದರೂ, ಯಾವುದೇ ಅಧಿಕಾರಿಯಾಗಲಿ ಅಥವಾ ಅತಿಥಿ ಗೃಹದ ಸಿಬ್ಬಂದಿಯಾಗಲಿ ಬಾರದ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳಿದ ಕೇಂದ್ರ ಸಚಿವರು, ತಮ್ಮ ಅಸಮಾಧಾನ ಹೊರಹಾಕಿದರು.

ನಾನು ನಂಜನಗೂಡು ಪ್ರವಾಸ ಕೈಗೊಂಡಿರುವುದು ಎಲ್ಲಾ ಅಧಿಕಾರಿಗಳಿಗೂ ಮಾಹಿತಿ ಕೇಂದ್ರ ಸಚಿವಾಲಯದಿಂದ ರವಾನೆಯಾಗಿದೆ. ಕೇಂದ್ರ ಸಚಿವರಿಗೆ ಈ ರೀತಿ ಅವಮಾನವಾದರೆ ಸಾಮಾನ್ಯ ಜನರ ಗತಿ ಏನು ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವುದು ಎದ್ದು ಕಾಣುತ್ತದೆ. ನನ್ನನ್ನು ಜನರಿಂದ ದೂರ ಮಾಡಲು ಸಾಧ್ಯವಿಲ್ಲ ನಾನು ಅವರ ಮಧ್ಯೆ ಬೆಳೆದಿದ್ದೇನೆ ಮತ್ತು ಅವರ ಮಧ್ಯೆ ಇರುತ್ತೇನೆ ಎಂದು ಕಿಡಿಕಾರಿದರು.

ಸಚಿವರು ಬರುವ ಬಗ್ಗೆ ಮಾಹಿತಿ ನೀಡಿರಲಿಲ್ಲ:
ಸಚಿವರು ಬರುವ ಯಾವುದೇ ಮಾಹಿತಿ ನಮಗೆ ಇರಲಿಲ್ಲ. ನಮ್ಮ ಕಚೇರಿಗೆ ಯಾವುದೇ ಮಾಹಿತಿ ಬಂದಿಲ್ಲ. ಅಲ್ಲದೆ, ಮಳೆ ಬಂದು ಅತಿವೃಷ್ಟಿ ಆದ ಹಿನ್ನೆಲೆಯಲ್ಲಿ ಅತಿಥಿ ಗೃಹದ ತಳ ಮಹಡಿ ಎಲ್ಲಾ ಸಾಮಾನುಗಳನ್ನು ಮೊದಲನೇ ಮಹಡಿಗೆ ಸ್ಥಳಾಂತರಿಸಲಾಗಿದೆ. ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ವಿಶ್ರಾಂತಿ ಗೃಹಕ್ಕೆ ನೀರು ನುಗ್ಗುತ್ತದೆ ಎಂದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ 4 ವರ್ಷ ಹಿಂದೆ ಅತಿವೃಷ್ಟಿಯಿಂದ ಸಂಪೂರ್ಣ ಪ್ರವಾಸಿ ಮಂದಿರ ನೀರಿನಲ್ಲಿ ಮುಳುಗಿತ್ತು. ಬೆಲೆಬಾಳುವ ಎಲ್ಲಾ ವಸ್ತುಗಳು ನೀರಿನಿಂದ ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ವಹಿಸುತ್ತೇವೆ ಎಂದು ಪಿಡಬ್ಲೂಡಿ ಇಲಾಖೆ ಎಇಇ ಸತ್ಯನಾರಾಯಣ ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.