Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
ಪುತ್ರನ ಸಾವಿಗೆ ಮಂಗಳಮುಖಿಯರೇ ಕಾರಣ ಪೋಷಕರ ದೂರು.
Team Udayavani, Jun 25, 2024, 9:13 AM IST
ಹುಣಸೂರು: ಬಾಲಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಗಡಹೆಜ್ಜೂರಿನಲ್ಲಿ ನಡೆದಿದ್ದು, ಪುತ್ರನ ಸಾವಿಗೆ ಮಂಗಳ ಮುಖಿಯರೇ ಕಾರಣವೆಂದು ಪೋಷಕರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ನಗರಕ್ಕೆ ಸಮೀಪದ ಕಿರಿಜಾಜಿ ಗ್ರಾಮದ ಕುಮಾರ್-ತಾರ ದಂಪತಿ ಪುತ್ರ 17 ವರ್ಷದ ರಾಹುಲ್ಮೌರ್ಯ(ಅಪ್ಪು) ಆತ್ಮಹತ್ಯೆಗೆ ಶರಣಾದಾತ.
ರಾಹುಲ್ಮೌರ್ಯ ನಗರದ ಕಲ್ಕುಣಿಕೆಯ ರಂಗನಾಥ ಬಡಾವಣೆಯ ಕಬ್ಬಾಳಮ್ಮ ಎಂಬ ಮಂಗಳ ಮುಖಿಯೊಂದಿಗೆ ಕಳೆದ ಎರಡು ವರ್ಷಗಳಿಂದ ತಿರುಗಾಡುತ್ತಿದ್ದ, ಮಾ.24ರಿಂದ ಇದ್ದಕಿದ್ದಂತೆ ನಾಪತ್ತೆಯಾಗಿದ್ದ, ಅಂದಿನಿಂದ ತಾಯಿ ಜೊತೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಆದರೆ ತಾನು ಇರುವ ಸ್ಥಳದ ಬಗ್ಗೆ ತಿಳಿಸಿರಲಿಲ್ಲ. ಹಾಗೂ ಮನೆಗೆ ವಾಪಸ್ಸ್ ಆಗಿರಲಿಲ್ಲ.
ಆದರೆ ಜೂ.21 ರಂದು ರಾಹುಲ್ಮೌರ್ಯ ಹುಣಸೂರಿಗೆ ವಾಪಸ್ಸಾಗಿ ದೊಡ್ಡ ಹೆಜ್ಜೂರಿನಲ್ಲಿರುವ ದೊಡ್ಡಮ್ಮನ ಮನೆಗೆ ತೆರಳಿದ್ದ, ಜು.23ರ ಬೆಳಗ್ಗೆ ಕೆಲ ಮಂಗಳ ಮುಖಿಯರು ಕಿರಿಜಾಜಿಯ ರಾಹುಲ್ಮೌರ್ಯನ ಮನೆ ಬಳಿಗೆ ಬಂದು ಯುವತಿಯೊರ್ವಳನ್ನು ಕರೆದೊಯ್ದಿದ್ದಾನೆಂದು ಗಲಾಟೆ ಮಾಡಿದ್ದರೆನ್ನಲಾಗಿದೆ. ಇದರಿಂದ ಹೆದರಿದ ರಾಹುಲ್ಮೌರ್ಯ ಅದೇ ದಿನ ಸಂಜೆ ದೊಡ್ಡಹೆಜ್ಜೂರಿನ ದೊಡ್ಡಮ್ಮನವರ ಜಮೀನಿನಲ್ಲಿರುವ ಬಿದಿರು ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪುತ್ರನ ಸಾವಿಗೆ ಮಂಗಳ ಮುಖಿಯರೇ ಕಾರಣವೆಂದು ತಂದೆ ಕುಮಾರ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮತ್ತೊಂದೆಡೆ ಮಂಗಳಮುಖಿ ಕಬ್ಬಾಳಮ್ಮ ಆಪರೇಷನ್ ಕಾರಣಕ್ಕಾಗಿ 1.5 ಲಕ್ಷರೂ ಪಡೆದು ರಾಹುಲ್ ಮೌರ್ಯನೊಂದಿಗೆ ನಾಪತ್ತೆಯಾಗಿದ್ದಾಳೆ, ಪತ್ತೆಮಾಡಿಕೊಡಿ ಎಂದು ಜೂ.21ರಂದು ನಗರ ಠಾಣೆಗೆ ಕಲ್ಕುಣಿಕೆಯ ಹೇಮಾ ಎಂಬಾಕೆ ದೂರು ನೀಡಿದ್ದರು. ರಾಹುಲ್ಮೌರ್ಯನ ಸಾವಿನ ಸುದ್ದಿ ತಿಳಿದ ಕಬ್ಬಾಳಮ್ಮ ಸಹ ಮೈಸೂರು ತಾಲೂಕಿನ ಮಹದೇವಪುರದ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.