ಹುಣಸೂರು : ತಾವು ಗಳಿಸಿದ್ದರಲ್ಲಿ ಉಳಿಸಿ ಅಮ್ಮನ ಹೆಸರಲ್ಲಿ ಕೊಡುಗೆ ನೀಡುವ ಸತ್ಯಾನಂದರಾವ್


Team Udayavani, Sep 14, 2022, 2:43 PM IST

ತಾವು ಗಳಿಸಿದ್ದರಲ್ಲಿ, ಉಳಿಸಿ ಅಮ್ಮನ ಹೆಸರಲ್ಲಿ ಕೊಡುಗೆ ನೀಡುವ ಸತ್ಯಾನಂದರಾವ್

ಹುಣಸೂರು : 9 ದಶಕಗಳ ಹಿಂದೆ ತಮ್ಮ ತಾಯಿ ವ್ಯಾಸಂಗ ಮಾಡಿದ ಹುಣಸೂರಿನ ಪ್ರಾಥಮಿಕ ಮತ್ತು ಫ್ರೌಢಶಾಲೆಗೆ ಅವರ ಮಕ್ಕಳು ಹಲವಾರು ಕೊಡುಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಹುಣಸೂರಿನ ಬ್ರಾಹ್ಮಣರ ಬಡಾವಣೆಯಲ್ಲಿ ವಾಸವಿದ್ದ ನಾಗಲಕ್ಷ್ಮಮ್ಮನವರು 90 ವರ್ಷಗಳ ಹಿಂದೆ ಇಲ್ಲಿನ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ಅವರ ಮಕ್ಕಳು ಉನ್ನತ ವ್ಯಾಸಂಗ ಪಡೆದು ವಿವಿಧೆಡೆ ಉದ್ಯಮಿಗಳಾಗಿದ್ದು, ಇದೀಗ ಅವರ ಮಕ್ಕಳು ಅಮ್ಮ ನಾಗಲಕ್ಷ್ಮಮ್ಮನವರ ಹೆಸರಿನಲ್ಲಿ ನರಸೀಪುರ ದೊಡ್ಡಮನೆ ಸುಜನ ಚಾರಿಟೇಬಲ್ ಟ್ರಸ್ಟ್ ರಚಿಸಿಕೊಂಡು ಹಲವಾರು ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆ.

ಶಾಲೆಗಳಿಗೆ ಕೊಡುಗೆ:
ದಿ.ನಾಗಲಕ್ಷ್ಮಮ್ಮನವರ ಸ್ಮರಣಾರ್ಥ ಈ ಬಾರಿ ಬಾಲಕಿಯರ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ವಿದ್ಯುತ್ ಚಾಲಿತ ಪ್ಯಾಡ್ ಬರ್ನಿಂಗ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಲ್ಲದೆ, ೮ನೇ ತರಗತಿಯ ೬, ೯ ಮತ್ತು ೧೦ನೇ ತರಗತಿಯ ತಲಾ ಮೂರು ಸೇರಿದಂತೆ ೧೨ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಮಾಹೆಯಾನ ೫೦೦ರೂಗಳ ವಿದ್ಯಾರ್ಥಿವೇತನ ನೀಡುತ್ತಿದ್ದಾರೆ. ಹಿಂದೆ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಗೆ ಕೊಳವೆಬಾವಿ ಹಾಕಿಸಿ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನದ ಉಪಕರಣಗಳನ್ನು ತಂದು ಪ್ರಾತ್ಯಕ್ಷತೆ ಮೂಲಕ ವಿವಿಧ ಪ್ರಯೋಗಗಳನ್ನು ಮಾಡಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಹೆಚ್ಚು ಆಸಕ್ತಿ ಬೆಳೆಸಿ ಉತ್ತಮ ಅಂಕ ಪಡೆಯಲು ಸಹಕಾರಿಯಾಗಿದ್ದಾರೆ.

ಬಿಇಓ ಶ್ಲಾಘನೆ:
ಟ್ರಸ್ಟ್ ಕೊಡುಗೆಯಾಗಿ ನೀಡಿದ ಪ್ಯಾಡ್ ಬರ್ನಿಂಗ್ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಬಿಇಓ ರೇವಣ್ಣರವರು ತಾಯಿ ಓದಿದ ಶಾಲೆಗೆ ನರಸೀಪುರದ ದೊಡ್ಡಮನೆ ಸುಜನ ಚಾರಿಟಬಲ್ ಟ್ರಸ್ಟ್ ಮೂಲಕ ಅವರ ಮಕ್ಕಳು ಸರಕಾರಿ ಶಾಲೆಗೆ ಅನೇಕ ರೀತಿಯಲ್ಲಿ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯ, ಇತರರಿಗೂ ಮಾದರಿಯೂ ಹೌದೆಂದ ಅವರು ಶಾಲೆಯ ಶಿಕ್ಷಕರಿಗಾಗಿ ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ನಾಗಲಕ್ಷ್ಮಮ್ಮರ ಪುತ್ರ, ಟ್ರಸ್ಟಿ ಎಂ.ಸತ್ಯಾನಂದರಾವ್ ನನ್ನ ಅಮ್ಮನಿಂದಾಗಿ ಇಂದು ಉದ್ಯಮಿಯಾಗಿ ಬೆಳೆದಿದ್ದೇನೆ, ಅಮ್ಮ ವಿದ್ಯೆ ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದಾಗಿ ಈ ಕೊಡುಗೆ ನೀಡಿದ್ದೇವೆ. ಮುಂದೆ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.೯೦ಕ್ಕೂ ಹೆಚ್ಚು ಅಂಕ ಪಡೆವ ಈ ಶಾಲೆಯ ವಿದ್ಯಾರ್ಥಿಗಳಿಗೆ ಮೆರಿಟ್ ಸ್ಕಾಲರ್‌ಶಿಪ್ ನೀಡುವ ಹಾಗೂ ಶಾಲೆಯ ಪ್ರಗತಿಗೆ ನೆರವಾಗುತ್ತೇವೆಂದು ಪ್ರಕಟಿಸಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲೆಯ ಎಲ್ಲ ಶಿಕ್ಷಕರಿಗೆ ಟ್ರಸ್ಟ್ವತಿಯಿಂದ ಗೌರವಿಸಲಾಯಿತು. ಈ ವೇಳೆ ಉಪ ಪ್ರಾಚಾರ್ಯರಾದ ಬಿ.ಎನ್.ಗೀತಾ, ಟ್ರಸ್ಟ್ನ ಸುಜಾತಾರಾವ್, ಎನ್.ಎಸ್.ಪ್ರಕಾಶ್, ಎನ್.ಆರ್.ಕುಮಾರ್ ಹಾಗೂ ಮೀನಾಕ್ಷಿಕುಮಾರ್, ಶಿಕ್ಷಕವೃಂದ ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.