Hunasuru: ಸ್ನೇಹಿತರ ಜೊತೆಗೂಡಿ ದೊಡ್ಡಪ್ಪನ ಮನೆಗೆ ಕನ್ನ… ಇಬ್ಬರ ಬಂಧನ
Team Udayavani, Jun 10, 2024, 8:34 AM IST
ಹುಣಸೂರು: ದೊಡ್ಡಪ್ಪನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ನೇಹಿತರೊಡಗೂಡಿ 3 ಲಕ್ಷ ನಗದು, 35 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದವನ ಹೆಡೆ ಮುರಿ ಕಟ್ಟಿ, 1.27 ಲಕ್ಷ ನಗದು ಹಾಗೂ 1.40ಲಕ್ಷರೂ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಬಿಳಿಕೆರೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಉದ್ದೂರು ಗ್ರಾಮದ ಶಿವಣ್ಣೇಗೌಡರ ಪುತ್ರ ಮಂಜುನಾಥ, ಈತನ ಸ್ನೇಹಿತರಾದ ಸೂರ್ಯ ಅಲಿಯಾಸ್ ಸೂರಿ ಬಂಧಿತರು. ಇದೇ ಗ್ರಾಮದ ಅಜಯ್ ತಲೆ ಮರೆಸಿಕೊಂಡಿದ್ದಾನೆ.
ತಾಲೂಕಿನ ಧರ್ಮಾಪುರ ಗ್ರಾಮದ ರಾಮೇಗೌಡರ ಮನೆಯಲ್ಲಿ ಜೂ.೭ರಂದು ಹಾಡು ಹಗಲೇ ನಡೆದಿದ್ದ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿತ್ತು. ಶಿವಣ್ಣೇಗೌಡರ ಪುತ್ರ ಮಂಜುನಾಥ್ ಧರ್ಮಪುರದ ಅಜ್ಜಿ ಮನೆಗೆ ಬಂದಿದ್ದ, ದೊಡ್ಡಪ್ಪ ರಾಮೇಗೌಡರ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಮಂಜುನಾಥ ಸ್ನೇಹಿತರಾದ ಸೂರಿ, ಅಜಯ್ನನ್ನು ಕರೆಸಿಕೊಂಡು ಅಜ್ಜಿಯ ಮನೆಗೆ ಹೊಂದಿಕೊಂಡಿದ್ದ ಗೋಡೆ ಹತ್ತಿ, ದೊಡ್ಡಪ್ಪನ ಮನೆಯ ಬೀರುವಿನಲ್ಲಿಟ್ಟಿದ್ದ ೩ಲಕ್ಷ ನಗದು ಹಾಗೂ ಸುಮಾರು 35 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ, ಈ ಸಂಬಂಧ ಬಿಳಿಕೆರೆ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ. ಸೀಮಾ ಲಾಟ್ಕರ್ ಸೂಚನೆಯಂತೆ ಅಡಿಷನಲ್ ಎಸ್.ಪಿ.ಗಳಾದ ನಂದಿನಿ ಹಾಗೂ ನಾಗೇಶ್, ಡಿ.ವೈ.ಎಸ್.ಪಿ ಗೋಪಾಲಕೃಷ್ಣರ ಮಾರ್ಗದರ್ಶನದಲ್ಲಿ ಬಿಳಿಕೆರೆ ಠಾಣೆ ಇನ್ಸ್ಪೆಕ್ಟರ್ ಟಿ.ಎಸ್.ಲೋಲಾಕ್ಷಿ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿತ್ತು.
ಮಂಜುನಾಥ ಉದ್ದೂರಿನ ಮನೆಯಲ್ಲಿರುವುದನ್ನು ಖಚಿತಪಡಿಸಿಕೊಂಡು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ಸ್ನೇಹಿತರಾದ ಸೂರಿ ಮತ್ತು ಅಜಯ್ ರೊಡಗೂಡಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ, ಕೃತ್ಯಕ್ಕೆ ಬಳಸಿದ್ದ ಮಹಿಂದ್ರಾ ಜೀಪ್, 1.27ಲಕ್ಷ ನಗದು, 1.40 ಲಕ್ಷ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಜಯ್ ತಲೆ ಮರೆಸಿಕೊಂಡಿದ್ದು ಪತ್ತೆಗೆ ಕ್ರಮವಹಿಸಲಾಗಿದೆ. ಎಂದು ಬಿಳಿಕೆರೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ .ಎಸ್.ಲೋಲಾಕ್ಷಿ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಸ್.ಐ.ನಾಗೇಶ್.ಎನ್, ಸಿಬ್ಬಂದಿಗಳಾದ ಪ್ರಸಾದ್ಧರ್ಮಾಪುರ, ಪ್ರತಾಪ್, ಶಿವಕುಮಾರ ಹಾಗೂ ಚಾಲಕ ಗೋವಿಂದರಾಜು ಬಾಗವಹಿಸಿದ್ದರು.
ಇದನ್ನೂ ಓದಿ: Ullal ವಿಜಯೋತ್ಸವ ಸಂದರ್ಭ ಚಕಮಕಿ: ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಇರಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.