Hunsur; 480ರೂ.ಗೆ ನಡೆಯಿತಾ ಡಬ್ಬಲ್ ಮರ್ಡರ್?: ಅರೋಪಿ ಬಂಧನ, ಮತ್ತೋರ್ವ ಪರಾರಿ
Team Udayavani, Jun 24, 2023, 11:10 PM IST
ಹುಣಸೂರು: ಜೂ.21 ರಂದು ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅರೋಪಿಯೊರ್ವ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಣಸೂರು ನಗರದ ಸರಸ್ವತಿಪುರಂನ ಅಭಿಷೇಕ್ ಅಯಾಸ್ ಅಭಿ ಬಂಧಿತ ಪ್ರಮುಖ ಆರೋಪಿ, ಮತ್ತೊರ್ವ ಬಾಲಾಪರಾಧಿಯಾಗಿದ್ದು, ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಹಚರ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪರಸಯ್ಯನ ಛತ್ರದ ಪಕ್ಕದ ಎಸ್.ಎಸ್.ಸಾಮಿಲ್ನಲ್ಲಿ ಜೂ. 21ರ ಮದ್ಯ ರಾತ್ರಿ ಕಾವಲುಗಾರರಾದ ವೆಂಕಟೇಶ್ ಹಾಗೂ ಷಣ್ಮಖರಾವ್ರನ್ನು ಕಬ್ಬಿಣದ ಆಯುಧದಿಂದ ಬಲವಾಗಿ ಹೊಡೆದು ಭೀಕರವಾಗಿ ಕೊಲೆ ಮಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದರು.
ಡಬ್ಬಲ್ ಮರ್ಡರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸರು ಎಸ್.ಪಿ.ಸೀಮಾಲಾಟ್ಕರ್, ಎ.ಎಸ್.ಪಿ.ಡಾ.ನಂದಿನಿ, ಡಿವೈಎಸ್ಪಿ ಎಂ.ಕೆ.ಮಹೇಶ್ರವರ ಮಾರ್ಗದರ್ಶನದಲ್ಲಿ ಸಿ.ಸಿ.ಟಿವಿ. ಪುಟೇಜ್ ಪರಿಶೀಲಿಸಿದ ವೇಳೆ ಯುವಕರ ಕೃತ್ಯ ಬಯಲಿಗೆ ಬಂದಿದೆ.
ನಗರ ಠಾಣೆ ಇನ್ಸ್ಪೆಕ್ಟರ್ ಎಸ್.ಎಂ.ದೇವೇಂದ್ರ ನೇತೃತ್ವದಲ್ಲಿ ಸಿಬಂದಿ ಕಾರ್ಯಾಚರಣೆ ನಡೆಸಿ ಅಭಿಷೇಕ್ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿ ಹಣಕ್ಕಾಗಿ ಕೃತ್ಯ ನಡೆಸಿರುವುದಾಗಿ, ಇಬ್ಬರಿಂದ 480ರೂ ಮಾತ್ರ ಸಿಕ್ಕಿದೆ. ಕೊಲೆಗೆ ಮತ್ತಿಬ್ಬರು ಸಹಕರಿಸಿರುವುದಾಗಿ ಬಾಯಿಬಿಟ್ಟಿದ್ದ.
ಆರೋಪಿಯನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಾಲಾಪರಾಧಿಯನ್ನು ಶನಿವಾರ ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ. ಅಭಿಷೇಕನಿಂದ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಪ್ರಕರಣಗಳ ಆರೋಪಿ
ಆರೋಪಿ ಅಭಿಷೇಕ್ ಹಲವಾರು ಸುಲಿಗೆ, ಕಳ್ಳತನ, ಸರಗಳ್ಳತನ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಈತನ ವಿರುದ್ದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ. ಈತ ಹಣಕ್ಕಾಗಿ ಮದ್ಯರಾತ್ರಿ ತನ್ನಿಬ್ಬರು ಸ್ನೇಹಿತರೊಂದಿಗೆ ಸಾಮಿಲ್ ಪ್ರವೇಶಿಸಿ ಮಲಗಿದ್ದ ವೇಳೆ ಇಬ್ಬರ ಜೇಬಿಗೂ ಕೈ ಹಾಕಿ ಹಣ ಕದಿಯುವ ವೇಳೆ ಎಚ್ಚರಗೊಂಡು ಪ್ರತಿರೋಧ ತೋರಿದ ಇಬ್ಬರ ಮೇಲೂ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ. ಅವರ ಬಳಿಸಿಕ್ಕ ೪೮೦ರೂಗಳೊಂದಿಗೆ ಪರಾರಿಯಾಗಿದ್ದೇವೆಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ
Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಖಡಕ್ ಬ್ರಿಟೀಷ್ ನಟ ಎಂಟ್ರಿ
Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ
Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.