Hunsur : ರೈತನಿಗೆ ಶೂನಿಂದ ಥಳಿಸಲು ಮುಂದಾಗಿದ್ದ ತಂಬಾಕು ಮಂಡಳಿ ಅಧಿಕಾರಿ

ತಂಬಾಕು ಬ್ಯಾರನ್ ಲೈಸನ್ಸ್ ನವೀಕರಣ ವಿಚಾರದಲ್ಲಿ ಮಾತಿನ ಚಕಮಕಿ

Team Udayavani, Oct 30, 2023, 8:20 PM IST

1-sdsasad

ಹುಣಸೂರು: ತಂಬಾಕು ಮಂಡಳಿ ಅಧಿಕಾರಿಯೊಬ್ಬರು ರೈತನಿಗೆ ಶೂನಲ್ಲಿ ಹೊಡೆಯಲು ಮುಂದಾದ ಘಟನೆ ಶನಿವಾರದಂದು ಹುಣಸೂರು ತಾಲೂಕಿನ ಕೊತ್ತೆಗಾಲದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಹುಣಸೂರು ತಾಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಯ ಹರಾಜು ಅಧೀಕ್ಷಕ ಬ್ರಿಜ್‌ಭೂಷಣ್‌ರವರೇ ಕೊತ್ತೆಗಾಲದ ಮಂಚನಾಯಕನ ಪುತ್ರ ಕೃಷ್ಣಕುಮಾರ ಎಂಬಾತನಿಗೆ ತಂಬಾಕು ಬಾರನ್ ಲೈಸನ್ಸ್ ನವೀಕರಣ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಶೂನಲ್ಲಿ ಹೊಡೆಯಲು ಮುಂದಾದ ಅಧಿಕಾರಿ.

ಕೊತ್ತೆಗಾಲದ ಮಂಚನಾಯಕರು ತಮ್ಮ ತಂಬಾಕು ಬಾರನ್‌ನ ಲೈಸನ್ಸ್ ನವೀಕರಣಗೊಳಿಸುವ ವಿಚಾರದಲ್ಲಿ ತನ್ನ ಪುತ್ರ ಕೃಷ್ಣಕುಮಾರರೊಂದಿಗೆ ವಿವಾದವಿತ್ತು, ನವೀಕರಣಗೊಳಿಸಬಾರದೆಂದು ಕೃಷ್ಣಕುಮಾರ್ ಹರಾಜು ಅಧೀಕ್ಷಕ ಬ್ರಿಜ್‌ಭೂಷಣ್‌ರ ಮೇಲೆ ಒತ್ತಡ ಹಾಕಿದ್ದರು. ಆದರೆ ದಾಖಲಾತಿಗಳು ಕ್ರಮಬದ್ದವಾಗಿದ್ದರಿಂದ ಲೈಸನ್ಸ್ ನವೀಕರಿಸಿದ್ದರು.

ಹಲವು ಬಾರಿ ಮಾತಿನ  ಚಕಮಕಿ
ಈ ಸಂಬಂಧ ಕೃಷ್ಣಕುಮಾರ್ ಹಾಗೂ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್‌ರ ನಡುವೆ ವರ್ಷದಿಂದಲೂ ಹಲವಾರುಬಾರಿ ಮಾತಿನ ಚಕಮಕಿ ನಡೆದಿತ್ತು. ತಂದೆ ಹೆಸರಿಗೆ ನವೀಕರಿಸದಂತೆ ಅರ್ಜಿಯೂ ಸಲ್ಲಿಸಿದ್ದರು. ಶನಿವಾರದಂದು ಕೊತ್ತೆಗಾಲಕ್ಕೆ ಅಧೀಕ್ಷಕ ಬ್ರಿಜ್‌ಭೂಷಣ್ ಕಾರ್ಯ ನಿಮಿತ್ತ ಭೇಟಿ ನೀಡಿದ್ದ ವೇಳೆ ಕೃಷ್ಣಕುಮಾರ್ ಲೈಸನ್ಸ್ ನವೀಕರಣ ವಿಚಾರ ಪ್ರಸ್ತಾಪಿಸಿ ಪ್ರಶ್ನಿಸಿದ್ದಾರೆ. ಮಾತಿಗೆ ಮಾತು ಬೆಳೆದಿದೆ. ತಾಳ್ಮೆ ಕಳೆದುಕೊಂಡ ಅಧೀಕ್ಷಕ ಬ್ರಿಜ್‌ಭೂಷಣ್ ಕಾಲಲಿದ್ದ ಶೂವನ್ನು ಬಿಚ್ಚಿ ಹೊಡೆಯಲು ಮುಂದಾದಾಗ ಅಲ್ಲೇ ಇದ್ದ ಮಾಜಿ ಗ್ರಾ.ಪಂ.ಅಧ್ಯಕ್ಷ ಕರುಣಾಕರ್ ಸೇರಿದಂತೆ ಗ್ರಾಮದ ಮುಖಂಡರು ತಡೆದಿದ್ದಾರೆ. ಹಲವರು ಘಟನೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಅಧಿಕಾರಿಯ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ನಡುವೆ ಘಟನೆ ನಡೆದ ನಂತರ ಅಧೀಕ್ಷಕ ಬ್ರಿಜ್‌ಭೂಷಣ್ ಬಾರನ್ ಲೈಸನ್ಸ್ ನವೀಕರಣ ವಿಚಾರದಲ್ಲಿ ಮಂಚನಾಯಕನ ಪುತ್ರ ಕೃಷ್ಣಕುಮಾರ್ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಂದೆಯಿಂದ ಮಗನ ವಿರುದ್ದ ದೂರು
ಇತ್ತ ಕೃಷ್ಣಕುಮಾರ್ ತಂದೆ ಮಂಚನಾಯಕ ಗ್ರಾಮಾಂತರ ಪೊಲೀಸರಿಗೆ ಪುತ್ರ ಪಾನಮತ್ತನಾಗಿ ಮನೆಯಲ್ಲಿ ಬ್ಯಾರನ್ ಲೈಸನ್ಸ್ ವಿಚಾರಕ್ಕೆ ಆಗಾಗ್ಗೆ ಗಲಾಟೆ ಮಾಡುತ್ತಾನೆ, ಈತನ ಹೆಸರಿಗೆ ವರ್ಗಾವಣೆಗೊಂಡಲ್ಲಿ ನನ್ನ ಪತ್ನಿಯೂ ಅನಾರೋಗ್ಯಪೀಡಿತಳಾಗಿದ್ದು, ಇಡೀ ಕುಟುಂಬ ಬೀದಿಗೆ ಬೀಳಲಿದೆ ತಮಗೆ ರಕ್ಷಣೆ ಕೊಡುವಂತೆ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.