ಕಾರ್ಮಿಕರು ವೃತ್ತಿಯಲ್ಲಿ ಕೌಶಲ್ಯತೆ ಹೆಚ್ಚಿಸಿಕೊಳ್ಳಿ


Team Udayavani, Jun 27, 2019, 3:00 AM IST

karmikaru

ಮೈಸೂರು: ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಎಲ್ಲರೂ ಗುಣಮಟ್ಟ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ಕೆ.ಜ್ಯೋತಿ ಹೇಳಿದರು. ಮೈಸೂರು ವಿಜಯನಗರ 3ನೇ ಹಂತದಲ್ಲಿರುವ ನಿರ್ಮಿತ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ತರಬೇತಿ ಪಡೆದ ಕಾರ್ಮಿಕರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಹಣ ಪೋಲು ಮಾಡದಿರಿ: ಗಾರೆ ಹಾಗೂ ಎಲೆಕ್ಟ್ರಿಕಲ್‌ ಕೆಲಸ ಮಾಡುವ ಕಾರ್ಮಿಕರು ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕಿದೆ. ನಂತರ ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಬೇಕು. ಈ ಮೂಲಕ ತಮ್ಮ ಜೀವನ ಮಟ್ಟ ಹೆಚ್ಚಿಸಿಕೊಳ್ಳಬಹುದಾಗಿದೆ. ದುಡಿಯುವ ಹಣವನ್ನು ದುಶ್ಚಟಗಳಿಗೆ ವಿನಿಯೋಗಿಸದೇ ಸಂಸಾರ ನಡೆಸಲು ಹಣ ನೀಡಿ. ಕ್ಷಣಿಕ ಖುಷಿ ನೀಡುವ ಧೂಮಪಾನ, ಮದ್ಯಪಾನದ ಚಟಕ್ಕೆ ಬಿದ್ದು, ಹಣ ಪೋಲು ಮಾಡದಿರಿ. ಇದು ನಿಮ್ಮ ದೈಹಿಕ ಸಾಮರ್ಥ್ಯ ಕಸಿದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

ವೃತ್ತಿ ಕೌಶಲ್ಯ: ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಎ.ಸಿ.ತಮಣ್ಣ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿಯೂ ಇರುವಂತೆ ಅಸಂಘಟಿತ ವಲಯದಲ್ಲಿಯೂ ಸ್ಪರ್ಧೆ ಇದೆ. ಕಾಲ ಕಾಲಕ್ಕೆ ತಕ್ಕಂತೆ ಆತ್ಯಾಧುನಿಕ ಆವಿಷ್ಕಾರ ಹಾಗೂ ಹೊಸ ತಂತ್ರಜ್ಞಾನವನ್ನು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮನ್ನು ನಾವು ಉನ್ನತಿಕರಿಸಿಕೊಳ್ಳಬೇಕು ಎಂದರು.

ಅಲ್ಟ್ರಾಟೆಕ್‌ ಸಿಮೆಂಟ್‌ನ ತಾಂತ್ರಿಕ ಸೇವಾ ವ್ಯವಸ್ಥಾಪಕ ಸೋಮಶೇಖರ್‌ ಮಾತನಾಡಿ, ತರಬೇತಿ ಪಡೆದರೆ ತಾಂತ್ರಿಕವಾಗಿ ನಿಖರ ಹಾಗೂ ಗುಣಮಟ್ಟ ಕೆಲಸ ಮಾಡಲು ಸಾಧ್ಯವಾಗಲಿದೆ. ಇದರಿಂದ ಹೆಚ್ಚು ಅವಕಾಶಗಳು ಲಭ್ಯವಾಗುತ್ತವೆ ಎಂದು ಹೇಳಿದರು.

ಈ ಸಂದರ್ಭ ತರಬೇತಿ ಪಡೆದಗಾರೆ ಕೆಲಸ ಹಾಗೂ ಎಲೆಕ್ಟ್ರಿಕಲ್‌ ವೈರಿಂಗ್‌ ವಿಭಾಗದ ಕಾರ್ಮಿಕರಿಗೆ ಟೂಲ್‌ ಮತ್ತು ಸೇಫ್ಟಿ ಕಿಟ್‌ ವಿತರಿಸಲಾಯಿತು. ನಿರ್ಮಿತಿ ಕೇಂದ್ರದ ಯೋಜನಾ ಎಂಜಿನಿಯರ್‌ ಎಚ್‌.ಬಿ. ಸತೀಶ್‌, ಯೋಗ ತರಬೇತುದಾರರ ನಾಗಭೂಷಣ್‌ ಇತರರಿದ್ದರು.

ಕಾರ್ಮಿಕರಿಗೆ ತರಬೇತಿ ಕಾರ್ಯಾಗಾರ: ಡಾ.ಬಿ.ಆರ್‌.ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಶ್ರಮ ಸಮಾರ್ಥಯ ಯೋಜನೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ತರಬೇತಿ ಕಾರ್ಯಕ್ರಮದ ಗಾರೆ ಹಾಗೂ ಎಲೆಕ್ಟ್ರಿಕಲ್‌ ಕೆಲಸಗಾರರಿಗೆ 30 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದ್ದು, 120 ಕಟ್ಟಡ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆ.

ಮೊದಲನೇ ತಂಡದ ಗಾರೆ ಕೆಲಸದ 33 ಕಾರ್ಮಿಕರಿಗೆ ತರಬೇತಿ ಯಶಸ್ವಿಗೊಳಿಸಿದ್ದು, ಟೂಲ್‌ ಮತ್ತು ಸೇಫ್ಟಿಕಿಟ್‌ ವಿತರಿಸಲಾಗಿದೆ. ಇನ್ನುಳಿದ 2 ಮತ್ತು 3ನೇ ತಂಡದ 66 ಗಾರೆ ಕೆಲಸದವರು ಹಾಗೂ 21 ಎಲೆಕ್ಟ್ರಿಕಲ್‌ ವೈರಿಂಗ್‌ ವಿಭಾಗದ ಕಾರ್ಮಿಕರಿಗೆ ತರಬೇತಿ ನೀಡಲಾಗಿದ್ದು, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಟೂಲ್‌ ಮತ್ತು ಸೇಫ್ಟಿ ಕಿಟ್‌ ವಿತರಿಸಲಾಗುತ್ತಿದೆ ಎಂದು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಎಂ.ಟಿ.ಮಂಜುನಾಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.