![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 28, 2021, 6:19 PM IST
ಮೈಸೂರು: ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲುಆತ್ಮನಿರ್ಭರ ಭಾರತ ಯೋಜನೆಯಡಿ ಒತ್ತು ನೀಡಿದ್ದು, ರಕ್ಷಣಾಇಲಾಖೆಗೆ ಬೇಕಾದ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸಾಮಗ್ರಿಗಳನ್ನುಒದಗಿಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿಯುವ ಮೋರ್ಚಾದ ನಗರ ಹಾಗೂ ಗ್ರಾಮಾಂತರ ಘಟಕದಿಂದಆಯೋಜಿಸಿದ್ದ ಯೋಧ ನಮನ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ, ಎಂತಹ ಸನ್ನಿವೇಶ ಎದುರಾದರೂ ತಕ್ಷಣವೇ ನಿರ್ಧಾರತೆಗೆದುಕೊಳ್ಳುವಂತಹ ಸ್ವಾತಂತ್ರ್ಯವನ್ನು ಪ್ರಧಾನಿ ನೀಡಿರುವ ಕಾರಣ,ಭಾರತವನ್ನು ಈಗ ಯಾವ ದೇಶವೂ ಕೆಣಕುವುದು ಅಷ್ಟು ಸುಲಭವಲ್ಲಎಂಬಂತಹ ಪರಿಸ್ಥಿತಿ ಇದೆ ಎಂದು ಹೇಳಿದರು.
1962ರಲ್ಲಿ ಭಾರತ-ಚೀನಾ ಯುದ್ಧ ನಡೆದಾಗ ಅಂದಿನ ಪ್ರಧಾನಿನೆಹರು ಅವರು ಹಿಂದು, ಚೀನಾ ಭಾಯೀ, ಭಾಯೀ ಎಂಬಭ್ರಮಾಲೋಕದಲ್ಲಿ ತೇಲುತ್ತಿದ್ದರು. ಸೈನಿಕರಿಗೆ ಯಾವುದೇ ನಿರ್ಧಾರಕೈಗೊಳ್ಳಲು ಸ್ವತಂತ್ರ್ಯವಿರಲಿಲ್ಲ. ಇದರಿಂದಾಗಿ ನಮ್ಮ ದೇಶದ ನೂರಾರುಎಕರೆ ಪ್ರದೇಶ ಚೀನಾದವರು ಅಕ್ರಮಿಸಿಕೊಂಡರು. ನೂರಾರು ಮಂದಿದೇಶದ ಸೈನಿಕರು ಯುದ್ಧದಲ್ಲಿ ಬಲಿಯಾದರು ಎಂದು ವಿವರಿಸಿದರು.ನೆಹರೂ ಅವರು ವಾಸ್ತವಿಕತೆ ಅರಿಯದೆ ಹೋಗಿದ್ದರಿಂದ ಅನೇಕಗಡಿ ಪ್ರದೇಶವನ್ನು ಚೀನಾ ಆಕ್ರಮಣ ಮಾಡಿಕೊಂಡಿತ್ತು.
ಒಂದು ವೇಳೆಚೀನಾದ ವಿರುದ್ಧ ಹೋರಾಟ ಮಾಡಿದ್ದರೆ ಭಾರತದ ಒಂದಿಂಚೂಭೂಮಿ ಅವರ ಬಳಿ ಇರುತ್ತಿಲ್ಲ. ದಶಕಗಳಿಂದ ಸೋಲು ಕಂಡುಆಘಾತವಾಗುತ್ತಿರಲಿಲ್ಲ. ಆರ್ಥಿಕ ಪರಿಸ್ಥಿತಿಯೂ ಕುಸಿಯುತ್ತಿರಲಿಲ್ಲಎಂದು ಲೇವಡಿ ಮಾಡಿದ ಅವರು, ಆದರೆ, ಈಗ ಭಾರತಸಂಪೂರ್ಣವಾಗಿ ಬದಲಾಗಿದೆ ಎಂದು ಹೇಳಿದರು.
ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ ಡಾ.ಸಂದೀಪ್ಕುಮಾರ್ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನಾ ನಗರದ ರಾಮಸ್ವಾಮಿಸರ್ಕಲ್ನಿಂದ ಪಕ್ಷದ ಕಚೇರಿ ತನಕ ಬೈಕ್ ರ್ಯಾಲಿ ನಡೆಸುವ ಮೂಲಕತೇಜಸ್ವಿ ಸೂರ್ಯ ಅವರನ್ನು ಮೆರವಣಿಗೆ ಮೂಲಕ ಕರೆತರಲಾಯಿತು.ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ,ಜಿಲ್ಲಾಧ್ಯಕ್ಷ ಕಿರಣ್ ಗೌಡ, ಶಾಸಕ ಎಲ್.ನಾಗೇಂದ್ರ, ಮೈಸೂರುವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್, ಗ್ರಾಮಾಂತರ ಅಧ್ಯಕ್ಷೆಮಂಗಳ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.