ಬಹುತ್ವದ ಭಾರತಕ್ಕೆ ಆಕ್ರಮಕಾರಿ ಸಂಸ್ಕೃತಿ ಆವರಿಸಿಕೊಂಡಿದೆ


Team Udayavani, Dec 15, 2019, 3:00 AM IST

bahutvada

ಮೈಸೂರು: ಬಹುತ್ವದ ಭಾರತಕ್ಕೆ ಆಕ್ರಮಕಾರಿ ಸಂಸ್ಕೃತಿ ಆವರಿಸಿಕೊಂಡು ಜಾನಪದ ಸೊಗಡನ್ನು ನಾಶದತ್ತ ಕೊಂಡೊಯ್ಯುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ಭೂಮಿ ಬಳಗ ಹಾಗೂ ಎಸ್‌ಬಿಆರ್‌ಆರ್‌ ಮಹಾಜನ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಡಾ.ಹಿ.ಶಿ.ರಾಮಚಂದ್ರಗೌಡ ಅವರ ಭೂಮಿ ಮತ್ತು ಬೀಜ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಭೂಮಿ ಪ್ರಕೃತಿ-ಬೀಜ ಸಂಸ್ಕೃತಿ ಇದ್ದಂತೆ. ನಾವು ಬಿತ್ತಿದಂತೆ ಬೀಜ ಬೆಳೆಯುತ್ತದೆ. ನಿಸರ್ಗಕ್ಕೆ ಪೂರಕವಾಗುವ ರೀತಿಯಲ್ಲಿ ಕಲ್ಪಿಸಿಕೊಡುವ ಬಿತ್ತನೆಯ ಬೀಜವೇ ಸಂಸ್ಕೃತಿ ಎಂದರು.

ಲೇಖನಗಳು ನಿರ್ದಿಷ್ಟವಾದ ಕಾಲಕ್ಕೆ ಸೀಮಿತವಾಗಿಲ್ಲ: ಡಾ.ಹಿ.ಶಿ.ರಾಮಚಂದ್ರಗೌಡ ಅವರು ಜಾಗತಿಕ ವಿದ್ಯಮಾನಗಳ ನೆಲೆಯಲ್ಲಿ ತಮ್ಮ ಕೃತಿಯಲ್ಲಿ ಇಂದಿನ ಯುವ ಪೀಳಿಗೆಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಟ್ಟು 26 ಲೇಖನಗಳನ್ನು ಒಳಗೊಂಡಿರುವ ಈ ಕೃತಿಯ ಎಲ್ಲಾ ಲೇಖನಗಳು ಜಾನಪದ ಬದುಕನ್ನು ಪರಿಭಾವಿಸಿ, ನಿಸರ್ಗಕ್ಕೆ ಹತ್ತಿರವಾಗುವಂತೆ ಇದೆ. ಇಂದು ಯುವ ಪೀಳಿಕೆಯ ಮನದಲ್ಲಿ ಆವರಿಸುತ್ತಿರುವ ಅಕ್ರಮ ಸಂಸ್ಕೃತಿಯ ಬಗ್ಗೆ ಈ ಕೃತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಇಲ್ಲಿನ ಲೇಖನಗಳು ಯಾವುದೇ ನಿರ್ದಿಷ್ಟವಾದ ಕಾಲಕ್ಕೆ ಸೀಮಿತವಾಗಿಲ್ಲ. ಬದಲಿಗೆ ಎಲ್ಲ ಕಾಲಕ್ಕೂ ಅನ್ವಯವಾಗುತ್ತವೆ ಎಂದು ಹೇಳಿದರು.

ಇದೊಂದು ಮಹತ್ವದ ಕೃತಿ: ಜನಪದ ಒಂದು ಜೀವಂತ ಬದುಕು. ಜೀವ ಪರ ಸಂಸ್ಕೃತಿಯು ಈ ಪುಸ್ತಕದ ಧಾತುದ್ರವ್ಯವಾಗಿದೆ. ಜಾನಪದ ಚಿಂತನೆಗೆ ಕಾಲದ ಮಿತಿಇಲ್ಲ. ಜನಪದಕ್ಕೆ ಸಿದ್ಧ ಹಾಗೂ ಪಠ್ಯವಸ್ತುಗಳಿಲ್ಲ. ಇಲ್ಲಿ ಯಾವುದೇ ಹೇಳಿಕೆಗಳಿಲ್ಲ. ಹೇಳಿಕೆ ಎಂಬುದು ಗರ್ವದಿಂದ ಬಂದ ಅಭಿಪ್ರಾಯಗಳಾಗುತ್ತವೆ. ಆದರೆ ತಿಳುವಳಿಕೆ ಮತ್ತು ವಿಶ್ಲೇಷಣೆಗಳು ಅನ್ವೇಷಣೆಗೆ ನಾಂದಿಯಾಗುತ್ತವೆ.

ಇಲ್ಲಿನ ಲೇಖನಗಳು ಕಾಲೋಚಿತ ಪ್ರಜ್ಞೆಯನ್ನು ಬಿಂಬಿಸುತ್ತವೆ. ಇಂದಿನ ಜಾಗತಿಕರಣದ ವೇಗ ಮತ್ತು ಒತ್ತಡವನ್ನು ಮನಗಂಡು ನಿಖರವಾಗಿ ಯುವಜನತೆಗೆ ಹೇಳಬೇಕಾದ ಗುಣಗಳಾದ ಭಯ, ಆತಂಕ, ಸಂಕಟ,ನೋವು, ರೈತ ಚಳವಳಿ ಮಾರ್ಗ, ಸಂಬಂಧಾತ್ಮಕ ಮೌಲ್ಯಗಳನ್ನು ಈ ಪುಸ್ತಕದಲ್ಲಿ ನಾವು ಕಾಣಬಹುದಾಗಿದ್ದು, ಇದೊಂದು ಮಹತ್ವದ ಕೃತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಅವಕಾಶಗಳು ಹೆಚ್ಚಿದೆ: ಕೃತಿಯ ಲೇಖಕ ಡಾ.ಹಿ.ಶಿ.ರಾಮಚಂದ್ರಗೌಡ ಮಾತನಾಡಿ, ಇಂದಿನ ಜಾಗತೀಕರಣ ಯುಗದಲ್ಲಿ ಸೌಲಭ್ಯಗಳು ಹಾಗೂ ಅವಕಾಶಗಳು ಹೆಚ್ಚಿದೆ. ಬಡತನ ಕಡಿಮೆಯಾಗುತ್ತಿದೆ. ಸಿಗುವ ಅನುಕೂಲಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ನೈಪುಣ್ಯತೆಯ ಜ್ಞಾನಕ್ಕೆ ಪ್ರಾಮುಖ್ಯತೆ: ಭೂಮಿ, ಸ್ತ್ರೀ ಮತ್ತು ನಮ್ಮತನವನ್ನು ಬಿಟ್ಟುಕೊಡಬೇಡಿ. ವಿದ್ಯಾರ್ಥಿಗಳು ಪಠ್ಯವನ್ನಷ್ಟೇ ಓದದೆ, ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಕೌಶಲ್ಯ ಮತ್ತು ನೈಪುಣ್ಯತೆಯ ಜ್ಞಾನಕ್ಕೆ ಪ್ರಾಮುಖ್ಯತೆ ನೀಡಿ, ಇದು ನಿಮ್ಮ ಮುಂದಿನ ಬೆಳವಣಿಗೆಗೆ ನಾಂದಿಯಾಗುತ್ತದೆ ಎಂದರು.

ಚಿಂತಕಿ ಡಾ.ಧರಣಿದೇವಿ ಮಾಲಗತ್ತಿ ಮಾತನಾಡಿ, ನಮ್ಮ ಇಂದಿನ ಯುವ ಪೀಳಿಗೆಗೆ ಐಕ್ಯತೆ ಬೇಕು. ಏಕಾಧಿಪತ್ಯ ಬೇಡ. ಬಹುತ್ವ ಬೇಕು. ಬೇದ ಬೇಡ, ಜಾತಿವಾದ ಸಲ್ಲದು ಎಂದರು. ವಾದಿ, ವಿಚಾರವಾದಿ, ಸಂಪ್ರದಾಯವಾದಿ, ಸ್ತ್ರೀವಾದಿ ಯಾರಿಗೂ ಇಷ್ಟವಾಗುವುದಿಲ್ಲ.

ಈ ನಿಟ್ಟಿನಲ್ಲಿ ಈ ಕೃತಿಯ ಲೇಖನಗಳು ಎಲ್ಲರ ಮನಸ್ಸನ್ನೂ ಗೆಲ್ಲುತ್ತವೆ ಹಾಗೂ ಸಂಶೋಧನಾ ಪ್ರಬಂಧಕ್ಕೆ ಅನುಕೂಲವಾಗಿದೆ ಎಂದು ಹೇಳಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಬಿ.ಆರ್‌.ಜಯಕುಮಾರಿ ಮಾತನಾಡಿದರು. ಮಹಾಜನ ಕಾಲೇಜಿನ ಸಿಇಒ ಡಾ.ಎಸ್‌.ಆರ್‌.ರಮೇಶ್‌, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್‌.ಆರ್‌.ತಿಮ್ಮೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.