ಜನಾಶೀರ್ವಾದದಿಂದ ಸಿಎಂ ಆಗುವ ಅರ್ಹತೆ
Team Udayavani, Apr 29, 2018, 12:38 PM IST
ಬನ್ನೂರು: ಸೋಸಲೆ ಜನರ ಆಶೀರ್ವಾದದಿಂದ ನಾನಿಂದು ರಾಜ್ಯಮಟ್ಟದ ನಾಯಕರಾಗಿ ಹೊರಹೊಮ್ಮಿದ್ದು, ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಪಡೆದಿದ್ದೇನೆಂದು ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಮಹದೇವಪ್ಪ ತಿಳಿಸಿದರು. ಪಟ್ಟಣದ ಸೋಸಲೆ ಹೋಬಳಿಯಲ್ಲಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ಮುಕ್ತವಾದ, ಎಲ್ಲ ಜನರಿಗೂ ಅನುಕೂಲವಾದ, ಬಡತನ ಮುಕ್ತ ಸಮಾಜದ ನಿರ್ಮಾಣ ಮಾಡುವಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಕೆಲಸವನ್ನು ಮಾಡುತ್ತಿದೆ. ಇದನ್ನು ಸಹಿಸಲಾಗದ ಅನ್ಯಪಕ್ಷಗಳು ಬೊಗಳೆ ಮಾತುಗಳನ್ನು ಆಡುತ್ತಿವೆ ಎಂದರು.
20 ಅಂಶಗಳ ಕಾರ್ಯಕ್ರಮ: ಬಿಜೆಪಿಗೆ ಅಧಿಕಾರ ಸಿಕ್ಕರೆ ಇಂದಿರಾ ಗಾಂಧಿಯವರು ತಂದ 20 ಅಂಶಗಳ ಕಾರ್ಯಕ್ರಮ ನಾಶವಾದಂತೆ. ಸಿದ್ದರಾಮಯ್ಯನವರು ಮಾಡಿರುವ ಅನ್ನಭಾಗ್ಯ ಇತರೆ ಭಾಗ್ಯಗಳ ನಾಶವಾದಂತೆ. ಯಾವುದೇ ಕಾರಣಕ್ಕೂ ಬಿಜೆಪಿಗೆ ಅಧಿಕಾರ ನೀಡಬಾರದು. ಎಲ್ಲ ಜನರಿಗೂ, ವರ್ಗದವರಿಗೂ ಅನುಕೂಲವಾದ ಸಂವಿಧಾನವನ್ನು ಬಿ.ಆರ್.ಅಂಬೇಡ್ಕರ್ ರಚನೆ ಮಾಡಿದ್ದು, ಬಿಜೆಪಿಗೆ ಅಧಿಕಾರ ದೊರೆತರೆ ಸಂವಿಧಾನವನ್ನು ಬದಲಾಯಿಸುತ್ತಾರೆಂದು ಆರೋಪಿಸಿದರು.
ಸೋಸಲೆ ಗ್ರಾಮದ ಜನರು ಕಳೆದ ಚುನಾವಣೆಯಲ್ಲಿ ಉತ್ತಮವಾದ ಮತವನ್ನು ಹಾಕಿದ್ದು, ಅದಕ್ಕೆ ಅನುಗುಣವಾಗಿ ಗ್ರಾಮವನ್ನು ಮಾದರಿ ಮಾಡಲು ಕೋಟಿ ರೂ.ಗಳ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಚುನಾವಣೆಯ ನಂತರ ಅಧಿಕಾರ ದೊರೆತರೆ ಅವೆಲ್ಲವನ್ನೂ ಪೂರ್ಣಗೊಳಿಸುತ್ತೇನೆ. ಮೇ 12ರಂದು ಕಡ್ಡಾಯವಾಗಿ ಮತವನ್ನು ಹಾಕಬೇಕು. ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತವನ್ನು ನೀಡಿ ರಾಜ್ಯದಲ್ಲಿ ಮತ್ತೂಮ್ಮೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಆರ್. ಚೆಲುವರಾಜು, ಜಿಪಂ ಸದಸ್ಯ ಮಂಜುನಾಥನ್, ಪಿಎಲ್ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ವಜ್ರೆàಗೌಡ, ಯಾಚೇನಹಳ್ಳಿ ಪಿಎಸಿಸಿ ಸಂಘದ ಅಧ್ಯಕ್ಷ ವೈ.ಎನ್. ಶಂಕರೇಗೌಡ, ಆರ್. ಶಂಕರೇಗೌಡ, ಲಕ್ಷ್ಮೀನಾರಾಯಣ್, ಬಸವರಾಜು ಇದ್ದರು. ಬನ್ನೂರಿನ ಸುಭಾಷ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಮನೆ ಮನೆಗೆ ತೆರಳಿ ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಮಾಡಿದರು. ಮಾಜಿ ಶಾಸಕಿ ಜೆ. ಸುನೀತಾ ವೀರಪ್ಪಗೌಡ, ಶಿವಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.