![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 1, 2020, 3:00 AM IST
ಮೈಸೂರು: ತಾಯಿ ನುಡಿ, ಮಾತೃಭಾಷೆಯನ್ನು ಮರೆಯುವವನು ಮನುಷ್ಯನಾಗಲಾರ. ಆದರೆ ಇಂದು ಮಾತೃಭಾಷೆಯನ್ನು ಮರೆಯುತ್ತಿರುವುದು ನೋವಿನ ಸಂಗತಿ ಎಂದು ಸಮ್ಮೇಳನಾಧ್ಯಕ್ಷ ಟಿ.ಎಸ್. ರಾಜಪ್ಪ ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿರುವ 17ನೇ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಅತ್ಯಂತ ವೈಜ್ಞಾನಿಕವಾದ ಉಚ್ಛಾರಣೆಗೆ ಅನುಗುಣವಾದ ಲಿಪಿ-ಭಾಷೆ ನಮ್ಮದು. ನಾವು ಬರೆದಂತೆಯೇ ಓದುತ್ತೇವೆ. ಕನ್ನಡ ಭಾಷೆಯಲ್ಲಿ ಪ್ರಾದೇಶಿಕ ವೈಶಿಷ್ಟéಗಳು ಉಳಿದು ಬಂದಿರುವುದು ಸಂತಸದ ಸಂಗತಿ. ಆದರೆ ಬದಲಾವಣೆ ಹೆಸರಿನಲ್ಲಿ ಕನ್ನಡ ಮರೆಯುವುದು ತರವಲ್ಲ. ಬದಲಾವಣೆ ಬೇಕು. ಆದರೆ ಅಲ್ಲೊಂದು ಔಚಿತ್ಯ ಪ್ರಶ್ನೆ ಇರಬೇಕು ಎಂದು ಅಭಿಪ್ರಾಯಪಟ್ಟರು.
ತಾಯಿ ಮತ್ತು ತಾಯಿನಾಡು ಸ್ವರ್ಗಕ್ಕಿಂತ ಮಿಗಿಲು ಎನ್ನುವುದು ಋಷಿವಾಣಿ ಮತ್ತು ಕವಿದರ್ಶನ. ಆದರೆ ಇಂದು ತಾಯಿ ನುಡಿ ಹಾಗೂ ಮಾತೃಭಾಷೆಯನ್ನು ನಾವು ಮರೆಯುತ್ತಿದ್ದೇವೆ. ಈ ಬಗ್ಗೆ ನಾವೆಲ್ಲ ಗಂಭೀರವಾಗಿ ಯೋಚಿಸಬೇಕಿದೆ ಎಂದರು. ಭಾರತೀಯ ಭಾಷೆಗಳಲ್ಲಿ ಕನ್ನಡವೂ ಪ್ರಾಚೀನ ಪ್ರಾಚೀನವಾಗಿದ್ದು, ತಮಿಳಿಗೆ ಶಾಸ್ತ್ರೀಯ ಸ್ಥಾನಮಾನ ಬಂದಾಗ ನಾವು ದುಃಖಪಡಲಿಲ್ಲ. ನಮಗೂ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆವು.
ಶಾಸ್ತ್ರೀಯ ಸ್ಥಾನಮಾನವನ್ನು ತಮಿಳುನಾಡು ಪಡೆದುಕೊಳ್ಳಲು ಇದ್ದ ಅಷ್ಟೋ ಅರ್ಹತೆಗಳು ಕನ್ನಡಕ್ಕೂ ಇದ್ದವು. ಕನ್ನಡಕ್ಕೆ ಅಂತಹ ಸ್ಥಾನಮಾನ ದೊರೆಯುವ ಹಂತದಲ್ಲಿ ತಮಿಳುನಾಡಿನ ವ್ಯಕ್ತಿ ಅಲ್ಲಿನ ಹೈಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿದ. ತಮಗೆ ದಕ್ಕಿದ್ದು ಮತ್ತು ದಕ್ಕಿಸಿಕೊಂಡಿದ್ದು ಇನ್ನೊಬ್ಬರಿಗೆ ದಕ್ಕಬಾರದು ಎಂಬ ವಿಕೃತ ಪ್ರವೃತ್ತಿ ಅವರಲ್ಲಿತ್ತು. ಇದಕ್ಕೆ ನಾವು ಏನು ಹೇಳುವುದು?, ನ್ಯಾಯಾಲಯ ಕೂಡ ವಜಾಗೊಳಿಸಬೇಕಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದು ವಿಪರ್ಯಾಸ ಎಂದರು.
ಕನ್ನಡ ಭಾಷೆಯ ಪ್ರಾಚೀನತೆಯನ್ನು ಅನೇಕ ವಿದ್ವಾಂಸರು ತೋರಿಸಿಕೊಟ್ಟಿದ್ದಾರೆ. ಛಾಂದೋಗ್ಯ ಉಪನಿಷತ್ತಿನಲ್ಲಿ ಬರುವ ಚಂದ್ರ, ಮಿಡತೆ ಕನ್ನಡದ ಶಬ್ಧಗಳೆಂದು ಕೆಲವು ವಿದ್ವಾಂಸರು ಹೇಳುತ್ತಾರೆ. ಪದ್ಮ ಮತ್ತು ಮಾರ್ಕಂಡೇಯ ಪುರಾಣಗಳಲ್ಲಿ ಕರ್ನಾಟಕ ಪ್ರಸ್ತಾಪವಿದೆ. ಕ್ರಿ.ಶ. ಎರಡನೇ ಶತಮಾನದ್ದು ಎನ್ನಲಾದ ಶಿಲಪ್ಪದಿಗಾರಂ ಎಂಬ ತಮಿಳು ಗ್ರಂಥದಲ್ಲಿ ಕರುನಾಢ್ ಎಂಬ ಪದ ಇರುವುದು ಗಮನಾರ್ಹ.
ಇದೇ ಕಾಲಕ್ಕೆ ಸೇರುವ ಗ್ರೀಕ್ ಪ್ರಹಸನವೊಂದರಲ್ಲಿ ಕನ್ನಡದ ಕೆಲವು ಮಾತುಗಳು ಬಂದಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಕನ್ನಡ ಬಳಕೆ ಇತ್ತೆಂದು ಗೋವಿಂದ ಪೈ ಮತ್ತು ಇತರ ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ ಎಂದು ಕನ್ನಡ ನಾಡು, ಭಾಷೆ ಹಾಗೂ ಸಾಹಿತ್ಯಕ್ಕಿರುವ ಇತಿಹಾಸದ ಕುರಿತು ಮಾತನಾಡಿದರು.
ಜಿಲ್ಲೆ ಜ್ವಲಂತ ಸಮಸ್ಯೆ ನಿವಾರಿಸಿ: ಮೈಸೂರು ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ. ಪ್ರಮುಖವಾಗಿ ರೈತರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಕೊರತೆ, ಶಾಲೆಗೆ ಸರಿಯಾದ ಕಟ್ಟಡ ಇಲ್ಲದಿರುವುದು, ಯುವಕರಿಗೆ ಕೆಲಸ ಸಿಗದಿರುವುದು, ಆಂಗ್ಲ ಮಾಧ್ಯಮ ಶಾಲೆಗಳ ಸಂಖ್ಯೆ ಹೆಚ್ಚುತ್ತಿರುವುದು, ರಾಜ್ಯದಲ್ಲಿರುವ ಪರಭಾಷ ಉದ್ಯೋಗಿಗಳೊಂದಿಗೆ ವ್ಯವಹಾರ ಮಾಡಲಾಗದೇ ತೊಂದರೆ ಅನುಭವಿಸುತ್ತಿರುವ ಜನಸಾಮಾನ್ಯರು ನಮ್ಮಲ್ಲಿ ಇದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಹಂತಹಂತವಾಗಿ ನಿವಾರಿಸಬೇಕಾಗಿದೆ. ಈ ಸಮ್ಮೇಳನ ಅದಕ್ಕೆ ಪ್ರೇರಣೆ ನೀಡಲಿ ಎಂದು ಸಮ್ಮೇಳನಾಧ್ಯಕ್ಷ ಟಿ.ಎಸ್. ರಾಜಪ್ಪ ಆಶಯ ವ್ಯಕ್ತಪಡಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.