ಜ.12ರಿಂದ 7ದಿನ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ


Team Udayavani, Jan 6, 2019, 6:01 AM IST

m1-12rinda.jpg

ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯು ರಂಗಾಯಣವು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಹಮ್ಮಿಕೊಂಡಿದೆ. ಜ.12ರಿಂದ 18ರವರೆಗೆ 18ನೇ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ.

ಈ ಬಾರಿ ಲಿಂಗ ಸಮಾನತೆಯ ಆಶಯದೊಂದಿಗೆ ನಾಟಕೋತ್ಸವ ನಡೆಸುತ್ತಿದ್ದು, ಲಿಂಗ ಸಮಾನತೆಗೆ ದನಿಗೂಡಿಸುವ ನಾಟಕಗಳು, ಸಿನಿಮಾ ಪ್ರದರ್ಶನ, ವಿಚಾರ ಸಂಕಿರಣ, ಜನಪದ ನೃತ್ಯ ಮತ್ತು ಚಿತ್ರ ಪ್ರದರ್ಶನ, ಜಾನಪದ ಹಾಡುಗಳು ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಉತ್ಸವದಲ್ಲಿ ನಾನಾ ರಾಜ್ಯದ ವಿವಿಧ 12 ಭಾಷೆಗಳ ನಾಟಕ, ರಾಜ್ಯದ ಬೇರೆ ಜಿಲ್ಲೆಗಳಿಂದ ಆರು ಕನ್ನಡ ನಾಟಕಗಳು, ಸಾಕ್ಷ್ಯಾಚಿತ್ರ ಒಳಗಂಡಂತೆ ಪ್ರತಿದಿನ ಮೂರು ಸಿನಿಮಾಗಳಂತೆ ಒಟ್ಟು 24 ಸಿನಿಮಾಗಳ ಪ್ರದರ್ಶನ, ಬೇರೆ ಪ್ರದೇಶದ ಸಾಧಕರು, ರಂಗಕರ್ಮಿಗಳು ಲಿಂಗ ಸಮಾನತೆಯ ವಿಷಯ ಮಂಡಿಸಲಿದ್ದಾರೆ.

70 ಮಳಿಗೆ: ಏಳು ದಿನಗಳ ನಾಟಕೋತ್ಸವದಲ್ಲಿ 70 ಮಳಿಗೆಗಳಲ್ಲಿ ಪುಸ್ತಕ ಪ್ರದರ್ಶನ-ಮಾರಾಟ, ಕರಕುಶಲ ಹಾಗೂ ಗುಡಿ ಕೈಗಾರಿಕೆಗಳ ವಸ್ತು ಪ್ರದರ್ಶನ, ಮಾರಾಟ ನಡೆಯಲಿದೆ. ಜತೆಗೆ ದೇಶಿ ಉಡುಪು, ದೇಶಿ ಆಹಾರ ಪದ್ಧತಿ ಪ್ರದರ್ಶನ ಮತ್ತು ಆಹಾರ ಮೇಳವು ಇರಲಿದೆ.

ರಂಗಾಯಣದ ಭೂಮಿಗೀತ ಆವರಣದಲ್ಲಿ ಆಯೋಜಿಸಿದ್ದ ಬಹುರೂಪಿ ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ನಾಟಕೋತ್ಸವದ ಬಗ್ಗೆ ಮಾಹಿತಿ ನೀಡಿದ ರಂಗಾಯಣ ನಿರ್ದೇಶಕಿ ಭಾಗಿರಥೀ ಬಾಯಿ ಕದಂ, ಜ.12ರಂದು ಸಂಜೆ 6ಕ್ಕೆ ರಂಗಾಯಣದ ವನರಂಗದಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಎನ್‌ಎಸ್‌ಡಿಯ ಮಾಜಿ ನಿರ್ದೇಶಕಿ ಕೀರ್ತಿ ಜೈನ್‌ ಭಾಗವಹಿಸಲಿದ್ದಾರೆ. ಅದೇ ದಿನ ಬೆಳಗ್ಗೆ 10ಕ್ಕೆ ನಟ, ರಂಗಕರ್ಮಿ ರಮೇಶ್‌ ಭಟ್‌ ಬಹುರೂಪಿ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಪ್ರತಿದಿನ ಕಿರು ರಂಗಮಂದಿರದಲ್ಲಿ ಸಂಜೆ 6ಕ್ಕೆ, ಭೂಮಿಗೀತದಲ್ಲಿ ಸಂಜೆ 6.30ಕ್ಕೆ,

ವನರಂಗದಲ್ಲಿ ಸಂಜೆ 7ಕ್ಕೆ ಕಲಾಮಂದಿರದಲ್ಲಿ ರಾತ್ರಿ 8ಕ್ಕೆ ವಿವಿಧ ಭಾಷೆಯ ನಾಟಕಗಳು ಪ್ರದರ್ಶನಗೊಳ್ಳಲಿದೆ. ಕಿಂದರಿಜೋಗಿ ಆವರಣದಲ್ಲಿ ಪ್ರತಿದಿನ ಸಂಜೆ 5.30ಕ್ಕೆ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದಿಂದ ವಿವಿಧ ರಾಜ್ಯಗಳ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಲಿಂಗ ಸಮಾನತೆ ಥೀಮ್‌: ಬಹುರೂಪಿಯ ಸಿನಿಮಾ ಸಂಚಾಲಕ ಮ್ಯಾನ್‌ ಮನು ಮಾತನಾಡಿ, ಪ್ರಪಂಚದಲ್ಲಿ ಯಾವ್ಯಾವ ರೀತಿಯಲ್ಲಿ ಲಿಂಗ ಸಮಾನತೆ ಇದೆ. ಅದರ ವಿರುದ್ಧ ನಡೆದ ಹೋರಾಟಗಳು, ಸಲಿಂಗ ಕಾಮ ಇವೆಲ್ಲವನ್ನು ಒಳಗೊಂಡ ಸಿನಿಮಾಗಳನ್ನು ಬಹುರೂಪಿ ಚಲನಚಿತ್ರೋತ್ಸವಕ್ಕೆ ಆಯ್ಕೆ ಮಾಡಿದ್ದೇವೆ. ಇದರಲ್ಲಿ ಸಾಕ್ಷ್ಯಚಿತ್ರವು ಒಳಗೊಂಡಿವೆ ಎಂದರು.

ಹೆಚ್ಚುವರಿ  ಜಿಲ್ಲಾಧಿಕಾರಿ ಎನ್‌.ಯೋಗೀಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಪ್ಪ ಇತರರಿದ್ದರು.

30 ರೂ. ಟಿಕೆಟ್‌ ದರ ಹೆಚ್ಚಳ: ರಂಗಾಯಣದ ಜಂಟಿ ನಿರ್ದೇಶಕ ವಿ.ಎಸ್‌.ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ,  ಈ ಬಾರಿಯ ಬಹುರೂಪಿಯ ಎಲ್ಲಾ ನಾಟಕಗಳಿಗೂ 30 ರೂ. ಏರಿಕೆ ಮಾಡಿದ್ದು, ಟಿಕೆಟ್‌ ದರ 80 ರೂ.ಗಳಿಗೆ ನಿಗದಿ ಪಡಿಸಲಾಗಿದೆ. ಬಹುರೂಪಿ ನಂತರ ರಂಗಾಯಣದ ವಾರಾಂತ್ಯ ನಾಟಕಗಳಿಗೆ ಇದೇ ದರವನ್ನು ನಿಗದಿಪಡಿಸಲು ರಂಗಾಯಣದ ಕಲಾವಿದರೊಂದಿಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

17, 18ಕ್ಕೆ ಲಿಂಗ ಸಮಾನತೆ ವಿಚಾರ ಸಂಕಿರಣ: ರಂಗಾಯಣದಲ್ಲಿ ಹಮ್ಮಿಕೊಂಡಿರುವ ಬಹುರೂಪಿ ನಾಟಕೋತ್ಸವ ಅಂಗವಾಗಿ ಜ.17,18 ರಂದು ಲಿಂಗ ಸಮಾನತೆ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಜ.17 ರಂದು ಬೆಳಗ್ಗೆ 10.30ಕ್ಕೆ ಭೂಮಿಗೀತದಲ್ಲಿ ಕತೆಗಾರ್ತಿ ವೈದೇಹಿ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ.

ವಕೀಲ ಸಿ.ಎಸ್‌.ದ್ವಾರಕಾನಾಥ್‌ ಲಿಂಗ ಸಮಾನತೆ ಮತ್ತು ಸಂವಿಧಾನದ ಕುರಿತು ಆಶಯ ನೂಡಿಗಳನ್ನಾಡಲಿದ್ದಾರೆ. ಸಮಾಜಿಕ ಕಾರ್ಯಕರ್ತೆ ಎ.ರೇವತಿ ಲಿಂಗ (ಎ) ಸಮಾನತೆ ಕುರಿತು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಸಮಾಜವಾದಿ ಪ.ಮಲ್ಲೇಶ್‌ ಅಧ್ಯಕ್ಷತೆವಹಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಅನುವಾದಕಿ ಪ್ರೊ.ಎಂ.ಎಸ್‌.ಆಶಾದೇವಿ ಲಿಂಗ ರಾಜಕಾರಣ, “ಅನುಭಾವ ಪಂಥಗಳಲ್ಲಿ ಲಿಂಗ ಸಮಾಜತೆ ಕುರಿತು ಸಂಶೋಧಕ ಪ್ರೊ.ರಹಮತ್‌ ತರೀಕರೆ ವಿಷಯ ಮಂಡಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಮೈಸೂರು ಗುರುರಾಜ ತಂಡದಿದ ಜಾನಪದ ಗೀತೆ ಗಾಯನ ಇರಲಿದೆ. ಜ.18 ರಂದು ಬೆಳಗ್ಗೆ 10ಕ್ಕೆ 2ನೇ ದಿನದ ಗೋಷ್ಠಿಗಳು ನಡೆಯಲಿವೆ.

ಟಾಪ್ ನ್ಯೂಸ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು

Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.