ಜಯದೇವ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ


Team Udayavani, Feb 10, 2019, 7:21 AM IST

m4-jayadev.jpg

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಎಲ್ಲಾ ವಿಭಾಗಗಳೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿವೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಜಯದೇವ ಆಸ್ಪತ್ರೆ ಕಳೆದ 10 ವರ್ಷಗಳಲ್ಲಿ ಶೇ 500ರಷ್ಟು ಪ್ರಗತಿ ಸಾಧಿಸಿದ್ದು, ಹೃದ್ರೋಗ ಚಿಕಿತ್ಸಾ ಕ್ಷೇತ್ರದಲ್ಲಿ ಭಾರತದ ಭೂಪಟದಲ್ಲಿ ಮೊದಲನೇ ಸ್ಥಾನದಲ್ಲಿದೆ.

ಜಯದೇವ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಹಾಗೂ ಸಿಬ್ಬಂದಿ ಸೇವಾ ಮನೋಭಾವ ಹಾಗೂ ಆಸ್ಪತ್ರೆ ಮೇಲಿರುವ ವಿಶ್ವಾಸದಿಂದ ಪ್ರತಿದಿನ 500 ಜನ ಹೊರರೋಗಿಗಳು ಬರುತ್ತಿದ್ದಾರೆ. ಪ್ರತಿದಿನ 25 ರಿಂದ 30 ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಮತ್ತು ಆಂಜಿಯೋಗ್ರಾಂ ಮಾಡಲಾಗುತ್ತಿದ್ದು, ಈಗಾಗಲೇ 60 ಜನರಿಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಇಲ್ಲಿ ವಿಶೇಷ ಹೊರ ರೋಗಿಗಳ ವಿಭಾಗವಿದ್ದು, ಮಾಸ್ಟರ್‌ ಹೆಲ್ತ್‌ ಚೆಕ್‌ಅಪ್‌ ಸಹ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಅತ್ಯುನ್ನತ ಶಿಕ್ಷಣ ಹಾಗೂ ತರಬೇತಿ ಪಡೆದ ತಜ್ಞ ವೈದ್ಯರಿದ್ದು, ಸಾಮಾನ್ಯ ರೋಗಿಗಳಿಗೆ, ಬಡವರಿಗೆ ಪಂಚತಾರಾ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯ ದೊರೆಯುತ್ತಿದೆ. ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿದ ಅಮೆರಿಕದ ಹೃದ್ರೋಗ ತಜ್ಞರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

3 ವರ್ಷದಲ್ಲಿ ಪೂರ್ಣ: ಕಲಬುರ್ಗಿಯಲ್ಲಿ ಜಯದೇವ ನೂತನ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಆಯವ್ಯಯದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 150 ಕೋಟಿ ರೂ. ನೀಡಿದ್ದಾರೆ. ಅಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ 7 ಎಕರೆ ಜಾಗ ಗುರುತಿಸಿದ್ದು, 350 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಈ ಆಸ್ಪತ್ರೆಯಿಂದ ಹೈದರಾಬಾದ್‌ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ದಾನಿಗಳ ದೇಣಿಗೆ: ಬೆಂಗಳೂರಿನಲ್ಲಿ ಪುನರ್ವಸತಿ ಕೇಂದ್ರ, ರೋಗಿಗಳ ತಂಗುದಾಣ ಹಾಗೂ 40 ಹಾಸಿಗೆ ಸಾಮರ್ಥ್ಯವುಳ್ಳ ಕಾರ್ಡಿಯಾಕ್‌ ವಾರ್ಡ್‌ಗಳನ್ನು ದಾನಿಗಳ ಸಹಾಯದಿಂದ ಪ್ರಾರಂಭಿಸಲಾಗುತ್ತಿದೆ. ಹನುಮಾನ್‌ ಮತ್ತು ಶಾರದಮ್ಮ ದಂಪತಿ ಡಾ. ಸಂದೀಪ್‌ ಸ್ಮರಣಾರ್ಥವಾಗಿ 62 ಲಕ್ಷ ದೇಣಿಗೆ ನೀಡಿದ್ದಾರೆ. ಚೆನ್ನೈನ ಬಾದಲ್‌ ಚಂದ್‌ ಟ್ರಸ್ಟ್‌ ನವರು 50 ಲಕ್ಷ ದೇಣಿಗೆ ನೀಡಿದ್ದಾರೆ. ಕೆನರಾಬ್ಯಾಂಕ್‌ ಅಂಗ ಸಂಸ್ಥೆಯಾದ ಕ್ಯಾನ್‌ಫಿನ್‌ ಸಂಸ್ಥೆಯಿಂದ ಹಾರ್ಟ್‌ಲಂಗ್‌ ಉಪಕರಣಕ್ಕೆ 86 ಲಕ್ಷ ರೂ. ದೇಣಿಗೆಯನ್ನು ದಾನಿಗಳುನೀಡಿದ್ದಾರೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಆರ್‌ಎಂಒ ಡಾ. ಪಾಂಡುರಂಗ, ಡಾ. ಹರ್ಷಬಸಪ್ಪ, ಡಾ. ಹೇಮಾ ರವೀಶ್‌, ಡಾ. ಭಾರತಿ, ಡಾ. ಸಂತೋಷ್‌, ಡಾ. ರಾಜೀತ್‌, ಡಾ. ದೇವರಾಜ್‌, ನರ್ಸಿಂಗ್‌ ಅಧೀಕ್ಷಕ ಕೆ. ಹರೀಶ್‌, ಪಿಆರ್‌ಒ ಗಳಾದ ವಾಣಿ ಹಾಗೂ ಚಂಪಕಮಾಲ ಮತ್ತಿತರರು ಹಾಜರಿದ್ದರು.

ನಿತ್ಯ 1500 ಮಂದಿಗೆ ಚಿಕಿತ್ಸೆ: ಬೆಂಗಳೂರಿನ ಜಯದೇವ ಆಸ್ಪತ್ರೆ ಈಗಾಗಲೇ 700 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ನಿತ್ಯ 1500 ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 300 ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡವನ್ನು ಇನ್ಫೋಸಿಸ್‌ ಪ್ರತಿಷ್ಠಾನದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಕೊಡುಗೆಯಾಗಿ ಕಟ್ಟಿಸಿಕೊಡಲಿದ್ದಾರೆ ಎಂದು ಡಾ. ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.