![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 12, 2019, 7:33 PM IST
ಮೈಸೂರು: “ನಾನು ಜೆಡಿಎಸ್ ಶಾಸಕನಾಗಿಯೇ ಮುಂದುವರಿಯುತ್ತೇನೆ. ಕಾಂಗ್ರೆಸ್ ಅಥವಾ ಬಿಜೆಪಿ ಸೇರುವ ವಿಚಾರವಿಲ್ಲ’ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಾನು ಜೆಡಿಎಸ್ ಬಿಟ್ಟು ಹೋಗುವುದಿಲ್ಲ. ಈ ಪಕ್ಷದಲ್ಲೇ ಮುಂದುವರಿಯುತ್ತೇನೆ. ಕಾಂಗ್ರೆಸ್ನತ್ತಲೂ ಮುಖ ಮಾಡಿಲ್ಲ, ಬಿಜೆಪಿಯತ್ತಲೂ ಮುಖ ಮಾಡಿಲ್ಲ’ ಎನ್ನುವ ಮೂಲಕ ಜಿಟಿಡಿ ಜೆಡಿಎಸ್ ಬಿಡುತ್ತಾರೆಂಬ ವದಂತಿಗೆ ತೆರೆ ಎಳೆದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಹಲವು ದಶಕಗಳಿಂದ ಸ್ನೇಹಿತರು. ವಿಶ್ರಾಂತಿ ಪಡೆಯದೆ ಸದಾ ಕಾಲ ಓಡಾಡುವ ಸಿದ್ದರಾಮಯ್ಯ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದು, ಶೀಘ್ರ ಗುಣಮುಖರಾಗಿ ಬರಲಿ ಎಂದು ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸುತ್ತೇನೆ ಎಂದರು.
You seem to have an Ad Blocker on.
To continue reading, please turn it off or whitelist Udayavani.