ಪೂರ್ವ ಮುಂಗಾರು ಕೈಕೊಟ್ಟರೆ ಜಲ ಸಂಕಷ್ಟ


Team Udayavani, Apr 7, 2021, 1:16 PM IST

ಪೂರ್ವ ಮುಂಗಾರು ಕೈಕೊಟ್ಟರೆ ಜಲ ಸಂಕಷ್ಟ

ಮೈಸೂರು: ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾದ ಹಿನ್ನೆಲೆ ಜಿಲ್ಲೆಯಲ್ಲಿ ಬೇಸಿಗೆ ಆರಂಭವಾದರೂ, ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ.

ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗಿದ್ದರಿಂದಎಲ್ಲ ಜಲಾಶಯ, ಕೆರೆ-ಕಟ್ಟೆಗಳು ತುಂಬಿದ್ದು,ಅಂತರ್ಜಲ ಮಟ್ಟ ಸುಧಾರಿಸಿರುವುದರಿಂದಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ನೀರಿನಹಾಹಾಕಾರ ಉದ್ಭವಿಸಿಲ್ಲ. ಒಂದು ವೇಳೆ ಯುಗಾದಿನಂತರ ಮಳೆ ಆರಂಭವಾಗದಿದ್ದರೆ, ಜಿಲ್ಲೆಯ 98ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೊರುವ ಸಾಧ್ಯತೆ ಇದ್ದು, ಅದಕ್ಕಾಗಿ ಜಿಲ್ಲಾ ಪಂಚಾಯಿತಿ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದೆ.

ಕೆಲವು ಪ್ರದೇಶಗಳಲ್ಲಷ್ಟೇ ಸಮಸ್ಯೆ: ಪ್ರತಿ ವರ್ಷದಂತೆಈ ಬಾರಿಯೂ ಮೈಸೂರು ನಗರಕ್ಕೆಹೊಂದಿಕೊಂಡಿರುವ ಗ್ರಾಮಗಳಲ್ಲಿ ನೀರಿನ ಸಮಸ್ಯೆಎದುರಾಗಿದ್ದು, ಸ್ಥಳೀಯ ಗ್ರಾಪಂಗಳ ಮೂಲಕ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಒಂದು ವೇಳೆ ಮುಂಗಾರು ತಡವಾಗಿ ಆರಂಭವಾಗಿ ಕುಡಿಯುವ ನೀರಿಗೆ ಸಮಸ್ಯೆಯಾದರೆ, ಪರ್ಯಾಯ ವ್ಯವಸ್ಥೆ ಮಾಡಲು ಜಿಲ್ಲಾ ಪಂಚಾಯಿತಿಯು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಜ್ಜಾಗಿದೆ.

ಬೇಸಿಗೆ ದಿನಗಳಲ್ಲಿ ಅಂತರ್ಜಲ ಕಡಿಮೆಯಾಗಿ ನೀರಿನ ಸಮಸ್ಯೆ ಎದುರಿಸುತ್ತಿದ್ದ ಮೈಸೂರು ತಾಲೂಕಿನಜಯಪುರ ಹೋಬಳಿ, ನಂಜನಗೂಡು ತಾಲೂಕಿನ ಕವಲಂದೆ ಹೋಬಳಿಗಳಲ್ಲಿ ಈಗ ಸಮಸ್ಯೆನಿವಾರಣೆಯಾಗಿದೆ. ಬಹುಗ್ರಾಮ ಕುಡಿಯುವನೀರಿನ ಯೋಜನೆಯಲ್ಲಿ ಹಲವು ಗ್ರಾಮಗಳಿಗೆ ನೀರುಒದಗಿಸಿರುವ ಹಿನ್ನೆಲೆಯಲ್ಲಿ ಟ್ಯಾಂಕರ್‌ಗಳ ಮೂಲಕನೀರು ಕೊಡುವುದು ತಪ್ಪಿದೆ. ಹೀಗಿದ್ದರೂ,ಮುನ್ನೆಚ್ಚರಿಕಾ ಕ್ರಮವಾಗಿ ಮೇ-ಜೂನ್‌ ತಿಂಗಳುಗಳಲ್ಲಿಕುಡಿಯುವ ನೀರು ಸಮಸ್ಯೆ ಉಂಟಾಗಬಹುದಾದಗ್ರಾಮಗಳನ್ನು ಗುರುತಿಸಿ, ಕ್ರಿಯಾಯೋಜನೆ ರೂಪಿಸಿಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

ಜಲಾಶಯಗಳಲ್ಲಿ ನೀರಿನ ಪ್ರಮಾಣ ಇಳಿಕೆ: ಕಳೆದ ವರ್ಷ ಕೇರಳದ ವಯನಾಡು, ಕೊಡಗು ಜಿಲ್ಲೆಯಲ್ಲಿಹಿಂಗಾರು ಮತ್ತು ಮುಂಗಾರಿನ ಸಮಯದಲ್ಲಿ ಭಾರೀಮಳೆಯಾಗಿದ್ದರಿಂದ ಪ್ರವಾಹ ಉಂಟಾಗುವ ಜತೆಗೆಕಬಿನಿ ಮತ್ತು ಕೃಷ್ಣರಾಜಸಾಗರ ಜಲಾಶಯಗಳುಭರ್ತಿಯಾಗಿದ್ದವು. ಆದರೆ, ಇದೀಗ ಜಲಾಶಯಗಳಲ್ಲಿನೀರಿನ ಪ್ರಮಾಣ ಸ್ವಲ್ಪ ಇಳಿಕೆಯಾಗಿದೆ. ಕೆಆರ್‌ಎಸ್‌ಜಲಾಶಯದಲ್ಲಿ 30.53 ಟಿಎಂಸಿ ನೀರು ಇದ್ದರೆ, ಕಳೆದವರ್ಷ 32.74 ಟಿಎಂಸಿ ನೀರು ಸಂಗ್ರಹವಿತ್ತು. ಕಬಿನಿಜಲಾಶಯದಲ್ಲಿ 11.28 ಟಿಎಂಸಿ ನೀರು ಇದ್ದರೆ, ಕಳೆದವರ್ಷ 15.05 ಟಿಎಂಸಿ ನೀರು ಸಂಗ್ರಹವಾಗಿತ್ತು. ಹವಾಮಾನ ಇಲಾಖೆ ಪ್ರಕಾರ ಮಾರ್ಚ್‌ 15ರ ನಂತರ ಮಳೆ ಬಿದ್ದರೆ, ನೀರಿನ ಸಮಸ್ಯೆ ಅಷ್ಟಾಗಿ ಕಾಡುವುದಿಲ್ಲ ಎಂದು ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

ನಿಯಂತ್ರಣ ಕೊಠಡಿ ಆರಂಭ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಜನರು ತಕ್ಷಣವೇ ದೂರು ಹೇಳಲು ಹಾಗೂ ಸಮಸ್ಯೆ ಇರುವ ಗ್ರಾಮಗಳಲ್ಲಿನ ನೀರಿನ ಸಮಸ್ಯೆ ಶೀಘ್ರವೇ ಬಗೆಹರಿಸುವ ಸಲುವಾಗಿ ಎಲ್ಲಾ ತಾಲೂಕುಗಳ ತಾಪಂ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಆರಂಭಿಸಲಾಗಿದೆ. ಇದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

ಜಿಲ್ಲೆಯಲ್ಲಿ 98 ಗ್ರಾಮಗಳ ಗುರುತು :

ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಿದ್ದರೂ, ಮುಂಗಾರು ತಡವಾಗಿ ಆರಂಭವಾದರೆ, ಜಿಲ್ಲೆಯ 98 ಗ್ರಾಮಗಳಲ್ಲಿ ಸಮಸ್ಯೆ ತಲೆದೊರುವ ಸಾಧ್ಯತೆ ಇದೆ. ಇದಕ್ಕಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಇಲಾಖೆ ಹುಣಸೂರಿನಲ್ಲಿ 32, ಎಚ್‌.ಡಿ.ಕೋಟೆಯಲ್ಲಿ 6, ಮೈಸೂರು ತಾಲೂಕಿನಲ್ಲಿ11, ನಂಜನಗೂಡಿನಲ್ಲಿ 17, ಪಿರಿಯಾಪಟ್ಟಣದಲ್ಲಿ 9, ಕೆ.ಆರ್‌. ನಗರದಲ್ಲಿ 13, ಸರಗೂರು ತಾಲೂಕಿನಲ್ಲಿ 2, ತಿ.ನರಸೀಪುರದ 8 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಎಂದು ಗುರುತಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆಕುಡಿಯುವ ನೀರಿನ ಸಮಸ್ಯೆ ಇಲ್ಲ.ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವನೀರಿನ ಸಮಸ್ಯೆ ಸಂಬಂಧ ಗ್ರಾಪಂಗಳಿಂದದೂರು ಬಂದಿಲ್ಲ, ಮನವಿಯೂ ಬಂದಿಲ್ಲ.ಮುಂದಿನ ದಿನಗಳಲ್ಲಿ ಸಮಸ್ಯೆ ಬರುವಂತಹ98 ಗ್ರಾಮಗಳನ್ನು ಗುರುತಿಸಿದ್ದು, ಜೂನ್‌ನಂತರ ಸಮಸ್ಯೆಯಾದರೆ ಪರ್ಯಾಯವ್ಯವಸ್ಥೆ ಮಾಡುವ ಬಗ್ಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು.-ಡಾ| ಕೃಷ್ಣರಾಜು, ಉಪ ಕಾರ್ಯದರ್ಶಿ ಜಿಪಂ

 

– ಸತೀಶ್‌ ದೇಪುರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.