ಕನ್ನಡ ಭಾಷೆ ಕಡೆಗಣಿಸಬಾರದು


Team Udayavani, Nov 2, 2018, 12:07 PM IST

m4-ka-bhashe.jpg

ಮೈಸೂರು: ಆಂಗ್ಲ ಭಾಷಾ ವ್ಯಾಮೋಹದಿಂದ ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಕಡೆಗಣಿಸಬಾರದು ಎಂದು ಶಾಸಕ ಎಸ್‌.ಎ.ರಾಮದಾಸ್‌ ಹೇಳಿದರು. 

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ನಗರದ ಕೆ.ಆರ್‌.ಕ್ಷೇತ್ರದ ಸರ್ಕಾರಿ ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ-ಬೆಳೆಸುವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡದಲ್ಲಿರುವ 49 ಅಕ್ಷರಗಳಿಗೂ ಒಂದೊಂದು ದೇವತೆಗಳಿದ್ದು, ಈ ರೀತಿ ಪ್ರತಿ ಅಕ್ಷರಕ್ಕೂ ಒಂದೊಂದು ದೇವತೆಗಳಿರುವ ಏಕೈಕ ಭಾಷೆ ಎಂದರೆ ಕನ್ನಡ ಮಾತ್ರ ಎಂದು ಹೇಳಿದರು. 

ಆಂಗ್ಲ ಮಾಧ್ಯಮದ ವ್ಯಾಮೋಹ, ವೃತ್ತಿ ಬದುಕಿಗೆ ಅಗತ್ಯವಿರುವ ಕಾರಣದಿಂದ ಆಂಗ್ಲ ಮಾಧ್ಯಮದತ್ತ ಒಲುವು ತೋರುತ್ತಿದ್ದಾರೆ. ಇದರಿಂದ ಕನ್ನಡ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕೊರತೆಯಾಗಿ ಕೆ.ಆರ್‌. ಕ್ಷೇತ್ರದ ಕೆಲವು ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಇದನ್ನು ತಡೆಯುವ ಜತೆಗೆ ಕ್ಷೇತ್ರದ ಸರ್ಕಾರಿ ಶಾಲೆಯ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫ‌ಲಿತಾಂಶ ಬರುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ. ಆ ಮೂಲಕ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸವಾಗಬೇಕಿದೆ ಎಂದು ತಿಳಿಸಿದರು. 

ಶಾಲಾ ದಾಖಲಾತಿ ವೇಳೆ ಶಿಕ್ಷಕರು ಮನೆಮನೆಗೆ ತೆರಳಿ ಪೋಷಕರಲ್ಲಿ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸಬೇಕು. ಭಾಷೆ ಕುರಿತು ಮನವರಿಕೆ ಮಾಡಿಕೊಡಬೇಕು. ಶಾಲೆಗಳಲ್ಲಿ ಭಾಷೆಯ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸುವಂತೆ ಆಕರ್ಷಕ ಬೋಧನೆ ಮಾಡಬೇಕು ಎಂದು ಸಲಹೆ ನೀಡಿದರು. 

ಇದೇ ಸಂದರ್ಭದಲ್ಲಿ “ತಮ್ಮ ಸುತ್ತಮುತ್ತಲಿನ ಕನ್ನಡ ಶಾಲೆಗಳನ್ನು ಬೆಳೆಸಲು ಸಹಕಾರಿಯಾಗುತ್ತೇವೆ’ ಎಂದು ಪಾಲಿಕೆ ಸದಸ್ಯರು, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.  ಕಾರ್ಯಕ್ರಮದಲ್ಲಿ ಕೆ.ಆರ್‌. ಕ್ಷೇತ್ರದ ಬಿಜೆಪಿ ನಗರಪಾಲಿಕೆ ಸದಸ್ಯರು, ಸರ್ಕಾರಿ ಶಾಲೆ ಮಕ್ಕಳು, ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಇನ್ನಿತರರು ಹಾಜರಿದ್ದರು.

ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಲು ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಪೋಷಕರು, ಸಂಘಟನೆಗಳೆಲ್ಲರ ಸಹಕಾರ ಮುಖ್ಯ. ರಾಜ್ಯದ ಅನೇಕ ಮಹನೀಯರು ಕನ್ನಡ ಮಾಧ್ಯಮದಲ್ಲಿ ಓದಿಯೇ ಉನ್ನತ ಸ್ಥಾನಕ್ಕೇರಿದವರು. ಹಾಗೆಯೇ ಇಂದಿನ ಮಕ್ಕಳು ಕನ್ನಡ ಭಾಷೆಯ ಜತೆಗೆ ಇತರೆ ಭಾಷೆಗಳನ್ನು ಕಲಿಯಬೇಕು.
-ರಾಮದಾಸ್‌, ಶಾಸಕ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.