ಮಹಿಳಾ ಪದವಿ ಮತ್ತು ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಂದ ಕನ್ನಡಕ್ಕಾಗಿ ನಾವು ಕಾರ್ಯಕ್ರಮ


Team Udayavani, Oct 31, 2021, 12:59 PM IST

Untitled-1

ಹುಣಸೂರು: ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹುಣಸೂರಿನ ಜಗಜೀವನ್ ರಾಂ ಭವನದಲ್ಲಿ ಆಯೋಜಿಸಿದ್ದ ಕನ್ನಡಕ್ಕಾಗಿ  ನಾವು ಕಾರ್ಯಕ್ರಮದಲ್ಲಿ ಅರ್ಚನಾ ಮತ್ತು ತಂಡದವರು ಅನೇಕ ಕನ್ನಡದ ಗೀತೆಗಳನ್ನು ಹಾಡಿ ರಂಜಿಸಿದರು.

ಜೋಗದ ಸಿರಿ ಬೆಳಕಿನಲ್ಲಿ…ಬಾರಿಸು ಕನ್ನಡ ಡಿಂಡಿಮವ…ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು..ಹಾಗೂ ಕರುನಾಡ ತಾಯಿ ಸದಾ ಚಿನ್ಮಯಿ.. ಹಾಡುಗಳಿಗೆ ಫಿದಾ ಆದ ಕಾಲೇಜು ವಿದ್ಯಾರ್ಥಿನಿಯರು, ಅತಿಥಿಗಳು ಕನ್ನಡಮ್ಮನ ಗಾಯನದಲ್ಲಿ ಮಿಂದೆದ್ದರು..

ಕನ್ನಡದ ಹಾಡುಗಳಿಗೆ  ಸರಕಾರಿ ಮಹಿಳಾ ಕಾಲೇಜು, ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ನಿಂತು ಹಾಡುಗಳಿಗೆ ಚಪ್ಪಾಳೆ ತಟ್ಟುತ್ತಾ, ಕೆಲವರು ಕುಣಿಯುತ್ತಾ ಸಂಭ್ರಮಿಸಿದರು.

ಕನ್ನಡಮ್ಮನ ಹಾಡುಗಳೇ ರೋಮಾಂಚನ;

ಕಾರ್ಯಕ್ರಮ ಉಧ್ಘಾಟಿಸಿದ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ ಕನ್ನಡಮ್ಮನಿಗೆ ಸಂಬಂಧಿಸಿದ ಹಾಡುಗಳೇ ಒಂದು ರೋಮಾಂಚನ, ಆದರೆ ಕೋವಿಡ್, ಮಳೆ ಸಂಕಷ್ಟ,  ಬೆಲೆ ಏರಿಕೆಯ ನಡುವೆ ಇಂತಹ ಕಾರ್ಯಕ್ರಮ ಅವಶ್ಯವಿತ್ತೆ ಎಂದು ಪ್ರಶ್ನಿಸಿದರೇ ನನ್ನನ್ನು ಕನ್ನಡ ವಿರೋದಿ ಎಂದು ಬಿಂಬಿಸುತ್ತಾರೆ. ಕನ್ನಡ ಮೇಳೈಸುವ ಅನೇಕ ಹಾಡುಗಳು ಸಾಕಷ್ಟಿದ್ದರೂ ಕೇವಲ ಮೂರು ಹಾಡುಗಳನ್ನು ಮಾತ್ರ ಆಯ್ಕೆ ಮಾಡಿರುವುದು ಸರಿಯಲ್ಲವೆಂದು ಹೇಳಿ ರವಿಚಂದ್ರನ್ ಚಿತ್ರದ ಕರುನಾಡ ತಾಯಿ ಸದಾ ಚಿನ್ಮಯಿ ಹಾಡನ್ನು ಹಾಡಿಸಿದರು. ಕೋವಿಡ್‌ನ  ಮೂರನೇ ಅಲೆ ಇರುತ್ತದೆ.  ಮೈಮರೆಯದೇ ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ, ಆರೋಗ್ಯ, ಶಿಕ್ಷಣದ ಕಡೆ ಗಮನನೀಡಿರೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅನೇಕ ಕನ್ನಡ ಹಾಡುಗಳನ್ನು ಹಾಡಿದರು. ನೃತ್ಯ ಮಾಡಿದರು.   ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಸೌರಭ ಸಿದ್ದರಾಜು, ಉಪಾಧ್ಯಕ್ಷ ದೇವನಾಯ್ಕ, ಪ್ರಾಚಾರ್ಯರಾದ ಜ್ಞಾನಪ್ರಕಾಶ್, ರಾಮೇಗೌಡ, ವೆಂಕಟೇಶಯ್ಯ, ಸಹಾಯಕ ಪ್ರಾದ್ಯಾಪಕರಾದ ಪುಟ್ಟಶೆಟ್ಟಿ, ಬಿಎಂ.ನಾಗರಾಜ್, ಪುರಸಭೆ ಮಾಜಿ ಸದಸ್ಯ ಜಯರಾಮ್ ಮತ್ತಿತರಿದ್ದರು.

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.