ಉಕ್ಕಿ ಹರಿಯುತ್ತಿರುವ ಕಪಿಲಾ, ಕಾವೇರಿ


Team Udayavani, Aug 18, 2018, 12:22 PM IST

m1-ukki.jpg

ಮೈಸೂರು: ಕೇರಳ ಹಾಗೂ ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾವೇರಿ ಕಣಿವೆಯ ಜಲಾಶಯಗಳೆಲ್ಲವೂ ತುಂಬಿ ಹರಿಯುತ್ತಿವೆ. ಹಾರಂಗಿ, ಹೇಮಾವತಿ, ಕಬಿನಿ, ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಹರಿಯ ಬಿಡಲಾಗುತ್ತಿದೆ.

ಇದರ ಪರಿಣಾಮ ಕಾವೇರಿ ಮತ್ತು ಕಪಿಲಾ ನದಿಗಳು ಉಕ್ಕಿ ಹರಿಯುತ್ತಿವೆ ನದಿ ಪಾತ್ರದ ಎಚ್‌.ಡಿ.ಕೋಟೆ, ನಂಜನಗೂಡು, ತಿ.ನರಸೀಪುರ ತಾಲೂಕುಗಳಲ್ಲಿ ವಾರದಲ್ಲಿ ಎರಡನೇ ಬಾರಿಗೆ ಪ್ರವಾಹ ಎದುರಾಗಿದೆ. ಕೇರಳ ಗಡಿಯ ಎಚ್‌.ಡಿ.ಕೋಟೆ ತಾಲೂಕಿನ ಮಚ್ಚಾರು, ಡಿ.ಬಿ.ಕುಪ್ಪೆ, ಆನೆಮಾಳ, ವಡಕನಮಾಳ ಸೇರಿದಂತೆ ಗಿರಿ ಹಾಡಿಗಳಿಗೆ ನೀರು ನುಗ್ಗಿ, ನಿರಾಶ್ರಿತರಿಗೆ ತಾಲೂಕು ಆಡಳಿತ ಡಿ.ಬಿ.ಕುಪ್ಪೆಯ ಸರ್ಕಾರಿ ಶಾಲೆಯಲ್ಲಿ ಆಶ್ರಯ ಕಲ್ಪಿಸಿದೆ. 

ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ 79,577 ಕ್ಯೂಸೆಕ್‌ ಒಳ ಹರಿವು ಬರುತ್ತಿದೆ. 77,500 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ತಾರಕ ಜಲಾಶಯಕ್ಕೆ 3,066 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, 600 ಕ್ಯೂಸೆಕ್‌ ಹೊರ ಬಿಡಲಾಗುತ್ತಿದೆ. ನುಗು ಜಲಾಶಯಕ್ಕೆ 5,586 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು,

5,529 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಈ ಮೂರು ಜಲಾಶಯಗಳಿಂದ ಒಟ್ಟಾರೆ 83,629 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಕಪಿಲಾ ನದಿ ದಡದಲ್ಲಿರುವ ಹಳ್ಳಿ, ಜಮೀನುಗಳನ್ನೆಲ್ಲಾ ಆಪೋಶನ ತೆಗೆದುಕೊಳ್ಳುತ್ತಾ ಮೈದುಂಬಿ ಹರಿಯುತ್ತಿದೆ.

ಶ್ರೀಕಂಠೇಶ್ವರನ ಸುತ್ತ ಜಲಾವೃತ: ನಂಜನಗೂಡಿನ ಇತಿಹಾಸ ಪ್ರಸಿದ್ಧ ಹದಿನಾರು ಕಾಲು ಮಂಟಪ ಮುಳುಗಡೆಗೆ ಕೆಲವೇ ಅಡಿಗಳಷ್ಟೇ ಬಾಕಿ ಉಳಿದಿದೆ. ಶ್ರೀಕಂಠೇಶ್ವರ ದೇವಸ್ಥಾನದ ವಾಹನ ನಿಲುಗಡೆ ತಾಣ ಜಲಾವೃತವಾಗಿದ್ದು, ಕಪಿಲೆಯ ಸ್ನಾನಘಟ್ಟ, ಪರಶುರಾಮ ದೇವಸ್ಥಾನ, ಮುಡಿಕಟ್ಟೆಗಳೂ ಜಲಾವೃತವಾಗಿವೆ.

ನಂಜನಗೂಡು ಪಟ್ಟಣದ ಒಕ್ಕಲಗೇರಿ, ಹಳ್ಳದಕೇರಿ, ತೋಪಿನ ಬೀದಿಯ ಕೆಲ ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಹೆಮ್ಮಿಗೆ, ಸುತ್ತೂರು ಸೇತುವೆ ಮೇಲೆ ಕಪಿಲೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರವಾಹ ಪೀಡಿತರಿಗೆ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಹೆದ್ದಾರಿ ಬಂದ್‌: ಕಬಿನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಟ್ಟ ಪರಿಣಾಮ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾರದಲ್ಲಿ ಎರಡನೇ ಬಾರಿಗೆ ಸಂಪರ್ಕ ಕಡಿತಗೊಂಡಿದೆ. ಪ್ರವಾಹ ತಗ್ಗಿದ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು.

ಮಲ್ಲನಮೂಲೆ ಮಠದ ಬಳಿ ಹೆದ್ದಾರಿಯ ಮೇಲೆ ಮೂರ್‍ನಾಲ್ಕು ಅಡಿಗಳಷ್ಟು ಕಪಿಲಾ ನದಿ ನೀರು ಹರಿಯುತ್ತಿರುವ ಕಾರಣ ಶುಕ್ರವಾರ ಬೆಳಗ್ಗೆಯಿಂದ ಪೊಲೀಸರು ಹೆದ್ದಾರಿಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನಿರಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದೆ. ಈ ಮಾರ್ಗದಲ್ಲಿ ತೆರಳುವವರು ಕಡಕೊಳ ಬಳಿ ಎಡ ತಿರುವು ಪಡೆದು ಅಡಕನಹಳ್ಳಿ ಕೈಗಾರಿಕಾ ಪ್ರದೇಶ, ಹಿಮ್ಮಾವು, ಕೆಂಪಿಸಿದ್ಧನಹುಂಡಿ, ಬಸವನಪುರ ಮೂಲಕ ನಂಜನಗೂಡು ತಲುಪಬೇಕಿದೆ. 

ದೇಗುಲ ಜಲಾವೃತ: ತಿ.ನರಸೀಪುರ ತಾಲೂಕಿನಲ್ಲಿ ಕಾವೇರಿ-ಕಪಿಲಾ ನದಿ ಸಂಗಮವಾಗಿ ಹರಿಯುವುದರಿಂದ ತಾಲೂಕಿನ ಐತಿಹಾಸಿಕ ಸ್ಥಳ ತಲಕಾಡು ಸಮೀಪದ ತಡಿಮಾಲಂಗಿ ಗ್ರಾಮದ ಆಂಜನೇಯ ಮತ್ತು ಅಲಮೇಲಮ್ಮ ದೇವಸ್ಥಾನಗಳು ಜಲಾವೃತವಾಗಿವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಜೊತೆಗೆ ಗ್ರಾಮದಲ್ಲಿನ ನದಿ ಪಾತ್ರದ ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳಿಗೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಶ್ರಯ ಕಲ್ಪಿಸಲಾಗಿದೆ. 

ಕೊಡಗು ಸಂಪರ್ಕ ಕಡಿತ: ಭಾರೀ ಮಳೆಯಿಂದ ತತ್ತರಿಸುತ್ತಿರುವ ಕೊಡಗು ಜಿಲ್ಲೆಗೆ ಇದೇ ಮೊದಲ ಬಾರಿಗೆ ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕುಶಾಲನಗರ ಪಟ್ಟಣದ ಹಲವು ಬಡಾವಣೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದ್ದರೆ,

ಮೈಸೂರು ಜಿಲ್ಲೆಯ ಗಡಿಯಲ್ಲಿ ಬರುವ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಮಟ್ಟಕ್ಕೆ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆಯ ಮೇಲೆ ಭಾರೀ ವಾಹನಗಳ ಸಂಚಾರ ಸ್ಥಗಿತಗೊಳಿಸಿದೆ. ಭಾರೀ ವಾಹನಗಳನ್ನು ಪಿರಿಯಾಪಟ್ಟಣದಲ್ಲೇ ತಡೆದು ಗೋಣಿಕೊಪ್ಪ-ಸಿದ್ದಾಪುರ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.  

ಕಂದಾಯ ಸಚಿವರ ಭೇಟಿ: ಮೈಸೂರು ಜಿಲ್ಲೆಯ ಕೊಡಗಿನ ಗಡಿ ಗ್ರಾಮ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮಕ್ಕೆ ಶುಕ್ರವಾರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಅವರೊಂದಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ, ಮಳೆಯಿಂದ ಮುಳುಗಡೆಯಾಗಿರುವ ಗ್ರಾಮಗಳು, ನದಿ ಪಾತ್ರದ ಜಮೀನು ಜಲಾವೃತದಿಂದ ಆಗಿರುವ ಹಾನಿ, ಕೊಪ್ಪ ಗ್ರಾಮದಲ್ಲಿ ತೆರೆದಿರುವ ಗಂಜಿ ಕೇಂದ್ರ ಪರಿಶೀಲಿಸಿದರು. ಜಿಲ್ಲಾಡಳಿತದಿಂದ ಪ್ರವಾಹ ಹಾನಿ ಕುರಿತು ಮಾಹಿತಿ ಪಡೆದರು. 

ಪ್ರವಾಹ ಪೀಡಿತರು ಆತಂಕಕ್ಕೆ ಒಳಗಾಗಬೇಡಿ. ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸುತ್ತದೆ. ಕಂದಾಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿ ಸ್ಥಳಗಳಲ್ಲಿಯೇ ಮೊಕ್ಕಾಂ ಹೂಡಿ ಅಗತ್ಯ ಕ್ರಮ ಕೈಗೊಳ್ಳುವರು. ಧೈರ್ಯವಾಗಿರಿ.
-ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.