ಸತ್ಯಹೇಳಿದ “ಕೊಡಗಿನೊಡೆಯರು ಕೊಡವರು’ ಕೃತಿ


Team Udayavani, Sep 12, 2017, 12:13 PM IST

mys6.jpg

ಮೈಸೂರು: ಇತ್ತೀಚಿನ ದಿನಗಳಲ್ಲಿ ಬಹುತೇಕ ಸಾಹಿತಿಗಳು ರಾಜಮಾರ್ಗದ ಬದಲಿಗೆ ಅಡ್ಡಮಾರ್ಗದಲ್ಲಿ ಸಾಗುತ್ತಿರುವುದರ ಪರಿಣಾಮ ಸಾಹಿತ್ಯದಲ್ಲಿ ಸಂಶೋಧನಾ ಕೃತಿಗಳ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಸಾಹಿತಿ ಪ್ರೊ.ಸಿ.ಪಿ.ಕೃಷ್ಣಕುಮಾರ್‌ ವಿಷಾದಿಸಿದರು. 

ನಗರದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಂಗಭೂಮಿ ಕೊಡಗು ಪ್ರಕಾಶನ ಹೊರತಂದಿರುವ ಲೇಖಕ ಅಡ್ಡಂಡ ಕಾರ್ಯಪ್ಪನವರ “ಕೊಡಗಿನೊಡೆಯರು ಕೊಡವರು’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದರು. ಇಂದು ಕನ್ನಡ ಸಾಹಿತ್ಯ ಬೆಳೆಯುತ್ತಿದ್ದರೂ ಅಸಮತೋಲನವಿದೆ.

ಸೃಜನಶೀಲ ಸಾಹಿತ್ಯಗಳು ಮಾತ್ರ ಹೊರಬರುತ್ತಿದೆ. ಸಂಶೋಧನಾ ಸಾಹಿತ್ಯಕ್ಕೆ ಶ್ರಮ ಪ್ರವೃತ್ತಿ ಅಗತ್ಯವಿದ್ದರೂ, ಅಡ್ಡದಾರಿಗಳಲ್ಲಿ ಹೆಚ್ಚಾಗಿ ಸಾಗುತ್ತಿದ್ದಾರೆ. ಪರಿಣಾಮ ವೈಚಾರಿಕ, ಸಂಶೋಧನಾ ಕೃತಿಗಳ ಸಂಖ್ಯೆ ಕಡಿಮೆಯಾಗಿ, ಭಾವಸಾಹಿತ್ಯ ಹೆಚ್ಚಾಗಿ ಬುದ್ಧಿ ಸಾಹಿತ್ಯ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸಂಶೋಧನಾ ಸಾಹಿತ್ಯಗಳು ಮೂಡಿಬರಬೇಕು ಎಂದರು.

ಸತ್ಯವನ್ನು ತಿರುಚಿದ್ದಾರೆ: ಅನೇಕ ಡೋಂಗಿ ಸಂಶೋಧಕರು, ಇತಿಹಾಸಕಾರರು ಸತ್ಯವನ್ನು ತಿರುಚಿ, ವಿಕೃತಗೊಳಿಸಿದ್ದು, ಕೊಡವರನ್ನು ಅಪಮಾನಿಸಿದ್ದಾರೆ. ಇಂತಹ ವಿಷಯಗಳಲ್ಲಿ ಸತ್ಯವನ್ನು ಬಯಲು ಮಾಡುವುದೇ ಸಂಶೋಧನೆ. ಈ ನಿಟ್ಟಿನಲ್ಲಿ ಕೊಡಗಿನೊಡೆಯರು ಕೊಡವರು ಕೃತಿಯ ಲೇಖಕರು ಸುಳ್ಳುಗಳನ್ನು ಬೇಧಿಸಿ, ಈ ಹಿಂದಿನ ಇತಿಹಾಸದ ವಿಪರೀತ ಮತ್ತು ವಿಪರ್ಯಾಸವನ್ನು ಸರಿಪಡಿಸಿದ್ದಾರೆ.

ಇದಕ್ಕಾಗಿ ದಾಖಲೆ ಸಹಿತವಾದ ವಿವರಣೆಗಳನ್ನು ನೀಡುವ ಮೂಲಕ ಸತ್ಯವನ್ನು ಹೊರತರುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ ಎಂದರು. ಕೃತಿಯಲ್ಲಿ ಋಣಾತ್ಮಕ ಮಾತ್ರವಲ್ಲದೆ ಧನಾತ್ಮಕ ಅಂಶಗಳನ್ನು ಬಿಂಬಿಸಲಾಗಿದೆ. ಸ್ವಾತಂತ್ರ ಹೋರಾಟಗಾರರೆಂದು ಬಿಂಬಿತರಾಗಿದ್ದ ಅನೇಕ ಪುಂಡರು, ಅನಾಮಧೇಯರು ಮಾಡಿರುವ ಕೆಟ್ಟಕೆಲಸಗಳನ್ನು ಆಧಾರದೊಂದಿಗೆ ತಿಳಿಸಿದ್ದಾರೆ.

ಕೆಲವು ಬ್ರಿಟಿಷ್‌ ಅಧಿಕಾರಿಗಳನ್ನು ನ್ಯಾಯವಾಗಿ ಹೊಗಳಿದ್ದಾರೆ. ಆ ಮೂಲಕ ಕೊಡವ ಜನಾಂಗ ಮತ್ತು ಚರಿತ್ರೆಯನ್ನು ತಾತ್ಸಾರ ಮತ್ತು ಅಜಾnನವೆಂಬ ಅನಿಷ್ಠಗಳಿಂದ ಪಾರು ಮಾಡುವ ಕೆಲಸವನ್ನು ಕೃತಿಯಲ್ಲಿ ಮಾಡಲಾಗಿದೆ. ಈ ಕೃತಿಯನ್ನು ಆಂಗ್ಲ ಭಾಷೆಗೂ ಅನುವಾದ ಮಾಡಬೇಕಿದೆ ಎಂದರು.

ಲೇಖಕ ಅಡ್ಡಂಡ ಕಾರ್ಯಪ್ಪ ಮಾತನಾಡಿ, ಈ ಹಿಂದೆ ಪ್ರಕಟಗೊಂಡ ಬಹುತೇಕ ಪುಸ್ತಕಗಳಲ್ಲಿ ಕೊಡವ ಜನಾಂಗದ ಒಳ್ಳೆಯ ಕೆಲಸಗಳನ್ನು ಮರೆಮಾಚಿ, ದೋಷಗಳನ್ನೇ ಮುಖ್ಯವಾಗಿಸಿಕೊಂಡು ಅಪಮಾನಿಸಲಾಗಿದೆ. ಆ ಮೂಲಕ ಕೊಡವ ಜನಾಂಗವನ್ನು ದೇಶದ್ರೋಹಿಗಳಂತೆ ಬಿಂಬಿಸಲಾಗಿದೆ. ಸತ್ಯಸಂಗತಿಯನ್ನು ದಾಖಲು ಮಾಡಬೇಕೆಂಬ ಉದ್ದೇಶದಿಂದ ಈ ಕೃತಿಯನ್ನು ಬರೆದಿದ್ದೇನೆ ಎಂದು ಹೇಳಿದರು.

ಕೃತಿ ಕುರಿತು ಸಂಸ್ಕೃತಿ ಚಿಂತಕ ಡಾ.ಗುಬ್ಬಿಗೂಡು ರಮೇಶ್‌ ಮಾತನಾಡಿದರು. ಪತ್ರಿಕೋದ್ಯಮಿ ಕೆ.ಬಿ.ಗಣಪತಿ, ಪರಿಸರ ಚಿಂತಕ ಪಿ.ಡಿ.ಮೇದಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷ ಮೂವೇರ ಕುಟ್ಟಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.