ವಸತಿ ಶಾಲೆ ಮಕ್ಕಳಿಗೆ ಸಿಗದ ಸೌಲಭ್ಯ


Team Udayavani, Mar 5, 2023, 11:52 AM IST

tdy-6

ಎಚ್‌.ಡಿ.ಕೋಟೆ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಿ ಅನುದಾನ ಕಲ್ಪಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ, ಏನೆಲ್ಲಾ ಅನಾಹುತ ಆಗುತ್ತದೆ ಎಂಬುದಕ್ಕೆ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಸಾಕ್ಷಿಯಂತಿದೆ.

ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಬಿಆರ್‌ಸಿ ಕೇಂದ್ರದ ಬಳಿ ಇರುವ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಈವರೆಗೆ ಸಮವಸ್ತ್ರ, ಶಾಲಾ ಬ್ಯಾಗ್‌, ನೋಟ್‌ ಪುಸ್ತಕ ವಿತರಿಸಿಲ್ಲ, ಸಮರ್ಪಕ ನೀರಿನ ಸೌಲಭ್ಯವಿಲ್ಲ, ಕೊಠಡಿಯ ಕಿಟಕಿಯ ಗಾಜುಗಳು ಒಡೆದು ವರ್ಷಗಳೇ ಉರುಳಿದರೂ ಸರಿಪಡಿಸಿಲ್ಲ. ಸೌಲಭ್ಯ ಕೇಳಿದರೆ ವಸತಿ ನಿಲಯದ ಸಿಬ್ಬಂದಿಯ ಕೋಪಕ್ಕೆ ವಿದ್ಯಾರ್ಥಿನಿಯರು ತುತ್ತಾಗುವ ಭೀತಿಯಲ್ಲಿದ್ದಾರೆ!.

ಸೌಲಭ್ಯವಿಲ್ಲ: 6ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗಾಗಿ ಕಾರ್ಯನಿರ್ವ ಹಿಸುತ್ತಿರುವ ವಸತಿ ಶಾಲೆಯಲ್ಲಿ ಸುಮಾರು 90 ಮಕ್ಕಳ ದಾಖಲಾತಿ ಇದೆಯಾದರೂ ಸರಾಸರಿ 70 ಮಕ್ಕಳ ನಿರಂತರ ಹಾಜರಾತಿ ಇದೆ. ಕಳೆದ 2ವರ್ಷಗಳ ಹಿಂದೆ ಕೊರೊನಾ ವೇಳೆ ತಡೆ ಹಿಡಿದ ಸವಲತ್ತುಗಳನ್ನು ಈವರೆಗೂ ನೀಡಿಲ್ಲ.

ವಿದ್ಯಾರ್ಥಿನಿ ನಿಲಯದಲ್ಲಿ ಹೊಂದಾಣಿಕೆ ಇಲ್ಲದ ಸಿಬ್ಬಂದಿ: ನಿಲಯದಲ್ಲಿ ಮೇಲ್ವಿಚಾರಕಿ, ಅಡುಗೆ ಸಿಬ್ಬಂದಿ ನಡುವೆ ಪರಸ್ಪರ ಹೊಂದಾಣಿಕೆ ಇಲ್ಲ. ಭದ್ರತಾ ಸಿಬ್ಬಂದಿಯೂ ಇಲ್ಲ. ಆಗಾಗ ಗೊಂದಲ ವಾತಾವರಣ ನಿರ್ಮಾಣ ಗೊಳ್ಳುತ್ತಿದೆ. ಹಿರಿಯ ಅಧಿಕಾರಿಗಳು ಪರಿಹಾರಕ್ಕೆ ಕ್ರಮವಹಿಸದಿದ್ದರೆ ಹೆಚ್ಚಿನ ಅನಾಹುತಗಳಾಗುವ ಸಂಭವ ಇದೆ.

ವೇತನದಲ್ಲಿ ತಾರತಮ್ಯ: ನಿಲಯದ ಮೇಲ್ವಿಚಾರಕಿಗೆ ಮಾಸಿಕ 11ಸಾವಿರ ಅಡುಗೆ ತಯಾರಕ ಮಹಿಳೆಯರಿಗೆ ಮಾಸಿಕ 7 ಸಾವಿರ ವೇತನ ನೀಡ ಬೇಕೆಂಬ ನಿಯಮವಿದೆ. ಆದರೆ, ಗುತ್ತಿಗೆದಾರರು ಮೇಲ್ವಿಚಾರಕಿಗೆ 7ಸಾವಿರ, ಅಡುಗೆ ತಯಾರಿ ಮಹಿಳೆಯರಿಗೆ 5,100 ಮಾತ್ರ ನೀಡುತ್ತಿದ್ದಾರೆಂದು ತಿಳಿದು ಬಂದಿದೆ. ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಿದ್ಯಾರ್ಥಿನಿ ನಿಲಯದಲ್ಲಿ ಊಟ, ವಸತಿ ಹೊರತು ಪಡಿಸಿ ಇನ್ಯಾವುದೇ ಸವಲತ್ತು ದೊರೆಯುತ್ತಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಮಧ್ಯ ಪ್ರವೇಶಿಸಬೇಕಿದೆ.

ಕೆಲವೊಮ್ಮೆ ಶೌಚಕ್ಕೂ ನೀರು ಇರುವುದಿಲ್ಲ : ಪುರಸಭೆಯಿಂದ ಸಾರ್ವಜನಿಕ ನಲ್ಲಿ ನೀರಿನ ಒಂದೇ ಒಂದು ಸಂಪರ್ಕ ಪಡೆದುಕೊಳ್ಳಲಾಗಿದೆ. ಪ್ರತಿದಿನ ಅರ್ಧತಾಸು ಮಾತ್ರ ನಲ್ಲಿಯಲ್ಲಿ ನೀರು ಬರುತ್ತದೆ. ನೀರಿನ ಸಮಸ್ಯೆ ಪರಿಹಾರಕ್ಕೆಂದು ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಿಂದ ತಾತ್ಕಾಲಿಕ ನೀರಿನ ಸಂಪರ್ಕ ಪಡೆದುಕೊಳ್ಳಲಾಗಿದೆ. ಕೆಲವು ಸಂದರ್ಭದಲ್ಲಿ ವಸತಿ ನಿಲಯಕ್ಕೆ ನೀರಿಲ್ಲದೆ ಸ್ನಾನಕ್ಕೆ ಇರಲಿ, ಶೌಚಾಲಯದ ನೀರಿಗೂ ಪರದಾಡುವ ಸ್ಥಿತಿ ಮೂಮೂಲಿ.

ಕಿಟಕಿಯ ಗಾಜು ಒಡೆದಿದ್ದು ಭಯ ಕಾಡುತ್ತಿದೆ: ನಿಲಯದ ಕೊಠಡಿಗಳ ಕಿಟಕಿಗಳಿಗೆ ಗಾಜುಗಳಿಲ್ಲ, ತೆರೆದ ಕಿಟಕಿ ಬಾಗಿಲುಗಳಿಂದ ನಿಲಯದಲ್ಲಿ ರಾತ್ರಿ ವೇಳೆ ವಿದ್ಯಾರ್ಥಿನಿಯರು ಭಯಭೀತರಾಗುತ್ತಿದ್ದಾರೆ. ಸರಿಪಡಿಸುವಂತೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಬಿಆರ್‌ಸಿ, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಮಾಡಿದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ದೂರಿದ್ದಾರೆ.

ಸಮವಸ್ತ್ರ ವಿತರಣೆಗೆ ಅವಕಾಶ ಇಲ್ಲ: ಬಿಇಒ : ನಿಲಯದ ವಿದ್ಯಾರ್ಥಿನಿಯರಿಗೆ ಬ್ಯಾಗ್‌, ನೋಟ್‌ಬುಕ್‌, ಸಮವಸ್ತ್ರ ವಿತರಣೆಗೆ ಅವಕಾಶ ಇಲ್ಲ. ನೀರಿನ ಸಮಸ್ಯೆ ಪರಿಹಾರ ಮತ್ತು ಕೊಠಡಿಗಳ ಕಿಟಕಿ ಗಾಜು ರಿಪೇರಿ ಸೇರಿ ಇನ್ನಿತರ ಸಮಸ್ಯೆ ಪರಿಹಾರಕ್ಕೆ ಡಿಡಿಪಿಐ ಅವರಿಂದ ಅನುಮೋದನೆ ಪಡೆಯಲಾಗುತ್ತದೆ. ಜತೆಗೆ ನಿಲಯದ ಸಿಬ್ಬಂದಿ ಹೊಂದಾಣಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ಉದಯಕುಮಾರ್‌ ತಿಳಿಸಿದ್ದಾರೆ.

ನಿಲಯದಲ್ಲಿ ಊಟ ವಸತಿ ಹೊರತು ಪಡಿಸಿ ಇನ್ಯಾವುದೇ ಸವಲತ್ತು ಇಲ್ಲ. ಕೊರೊನಾ ಬಳಿಕ, ಬ್ಯಾಗ್‌, ಬಟ್ಟೆ, ನೋಟ್‌ ಪುಸ್ತಕಕ್ಕೆ ತಡೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. -ಕಾವ್ಯಾ, ನಿಲಯದ ವಿದ್ಯಾರ್ಥಿನಿ(ಹೆಸರು ಬದಲಿಸಿದೆ)

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.