ವಿಮಾನ ನಿಲ್ದಾಣ ಉನ್ನತೀಕರಣಕ್ಕೆ ಶೀಘ್ರ ಗುದ್ದಲಿ ಪೂಜೆ  


Team Udayavani, Feb 25, 2023, 2:41 PM IST

tdy-13

ಮೈಸೂರು: ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ರನ್‌ ವೇ ವಿಸ್ತರಣೆ ಸಂಬಂಧ ಈಗಾಗಲೇ 160 ಎಕರೆ ಭೂ ಸ್ವಾದೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಗುದ್ದಲಿಪೂಜೆ ನೆರವೇರಿಸಲಾಗುವುದು ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮೈಸೂರು ವಿಮಾನ ನಿಲ್ದಾಣ ಉನ್ನತೀಕರಣ ಮತ್ತು ರನ್‌ ವೇ ವಿಸ್ತರಣೆ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರನ್‌ ವೇ ವಿಸ್ತರಣೆಗೆ ಒಟ್ಟು 209 ಎಕರೆ ಭೂ ಸ್ವಾಧೀನ ಆಗಬೇಕಿದ್ದು, ಸದ್ಯಕ್ಕೆ 160 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಉಳಿದ 47 ಎಕರೆ ನೋಟಿಫಿಕೇಷನ್‌ ಆಗಿದೆ. ವಾರದೊಳಗೆ ಏರ್‌ಪೋರ್ಟ್‌ ಅಥಾರಿಟಿಗೆ 160 ಎಕರೆ ಭೂಮಿ ಹಸ್ತಾಂತರವಾಗಲಿದೆ ಎಂದರು.

3.5 ಕಿ.ಮೀ. ರನ್‌ ವೇ: ಮೈಸೂರು ವಿಮಾನ ನಿಲ್ದಾಣದಲ್ಲಿ ಸದ್ಯಕ್ಕೆ 1.7 ಕಿ.ಮೀ. ರನ್‌ ವೇ ಇದ್ದು, ಇದನ್ನು 2.7 ಕಿ.ಮೀಗೆ ಹೆಚ್ಚಿಸುವ ಕೆಲಸ ನಡೆಯುತ್ತಿದೆ. ಆದರೆ, ಭವಿಷ್ಯ ದೃಷ್ಟಿಯಿಂದ ಮೈಸೂರಿನ ವಿಮಾನ ನಿಲ್ದಾಣಕ್ಕೆ 3.5 ಕಿ.ಮೀ. ರನ್‌ ವೇ ಅಗತ್ಯವಿದೆ. ಈ ಹಿನ್ನೆಲೆ 3.5 ಕಿ.ಮೀ, ವಿಸ್ತರಣೆ ಆದರೆ ಅನುಕೂಲವಾಗಲಿದೆ. ಈಗಾಗಲೇ ಶಿವಮೊಗ್ಗ ಏರ್‌ಪೋರ್ಟ್‌ ಕೂಡ 3.5 ಕಿ.ಮೀ. ರನ್‌ವೇ ಹೊಂದಿದೆ. ಹಾಗಾಗಿ ನಮಗೆ ಹೆಚ್ಚುವರಿ 53 ಕೋಟಿ ರೂ. ಬೇಕಾಗಲಿದ್ದು, ಅಧಿಕಾರಿಗಳು ಮತ್ತೂಂದು ಸುತ್ತಿನ ಸರ್ವೆ ನಡೆಸಿ ಮಾಹಿತಿ ನೀಡುವಂತೆ ಸೂಚಿಸಿದರು.

150 ಕೋಟಿ ಬಿಡುಗಡೆ: ರನ್‌ ವೇ ವಿಸ್ತರಣೆ ಸಂಬಂಧ ರಾಜ್ಯ ಸರಕಾರ 319 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದೆ. ಪ್ರಸ್ತುತ 150 ಕೋಟಿ ಹಣವನ್ನೂ ಬಿಡುಗಡೆ ಮಾಡಿದೆ. ರನ್‌ ವೇ ವಿಸ್ತರಣೆ ಸಮಯದಲ್ಲಿ ಮೈಸೂರು- ನಂಜನಗೂಡು ಹೆದ್ದಾರಿಯನ್ನು ಡೈವರ್ಟ್‌ ಮಾಡಲಾಗುವುದು. ಶಿವಮೊಗ್ಗ ಏರ್‌ಪೋರ್ಟ್‌ ರನ್‌ ವೇ ಶೈಲಿ ಹಳೆಯ ದಾಯಿತು. ಹಾಗಾಗಿ ಹೊಸ ಮಾದರಿಯಲ್ಲಿ ರನ್‌ ವೇ ವಿಸ್ತರಣೆ ಮಾಡಲಾಗುವುದು. ಭೂಮಿ ಹಸ್ತಾಂತರ ಆಗುತ್ತಿದ್ದಂತೆ ಡಿಪಿಆರ್‌ ಸಿದ್ಧಮಾಡಲಾಗುವುದು. ರನ್‌ ವೇಗೆ ಮೂಕ್ಕಾಲು ಕಿ.ಮೀ. ಹೆಚ್ಚುವರಿ ಬೇಕಿರುವುದರಿಂದ ಸರ್ಕಾರಕ್ಕೆ ಶೀಘ್ರವೇ ಏರ್‌ ಪೋರ್ಟ್‌ ಪ್ರಾಧಿಕಾರ ಪತ್ರ ಬರೆಯಲಿದೆ ಎಂದು ತಿಳಿಸಿದರು.

ಅಂದುಕೊಂಡು ಕೆಲಸವನ್ನು ನಿಗದಿತ ಸಮಯದೊಳಗೆ ಮುಗಿಸಬೇಕು. ಭೂ ಮಾಲೀಕರಿಗೆ ಹಣ ವರ್ಗಾವಣೆ ಮಾಡಿ. ಸುಮ್ಮನೆ ಕಾಲಹರಣ ಮಾಡಲು ಸಭೆಗೆ ಬರಬೇಡಿ. ಜನರು ಕೆಲಸ ಮಾಡಲು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಹಾಗಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ. ವಿಮಾನ ನಿಲ್ದಾಣ ಉನ್ನತೀಕರಣ ಸಂಬಂಧ ಸಾಕಷ್ಟು ಸಭೆ ನಡೆಸಿದರೂ ಕೆಲಸ ಮಾತ್ರ ನಡೆಯುತ್ತಿಲ್ಲ. ಕೆಲಸ ಮಾಡಲು ಆಸಕ್ತಿ ಇಲ್ಲದಿದ್ದರೆ ಮೈಸೂರಿನಲ್ಲಿ ಇರ ಬೇಡಿ ಎಂದು ಅಧಿಕಾರಿಗಳ ವಿರುದ್ಧ ಅಸಮಾ ಧಾನ ವ್ಯಕ್ತಪಡಿಸಿದರು.

ಮೈಸೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ಆರ್‌.ಮಂಜುನಾಥ್‌, ವಿಶೇಷ ಭೂಸ್ವಾಧೀನಾಧಿಕಾರಿ ಪ್ರಿಯದರ್ಶಿನಿ, ಅಭಿವೃದ್ಧಿ ಅಧಿಕಾರಿ ಮೂರ್ತಿ, ಸೆಸ್ಕ್ ಎಸಿ ನಾಗೇಶ್‌ ಸೇರಿದಂತೆ ಇತರರು ಇದ್ದರು.

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾ.11ರಂದು ಲೋಕಾರ್ಪಣೆ ಮಾಡಲಿದ್ದಾರೆ. ಮಂಡ್ಯದಲ್ಲಿಯೇ ದಶಪಥ ರಸ್ತೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಇದೆ. ಇಂಡುವಾಳು ಸೇರಿದಂತೆ ಕೆಲ ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಶೀಘ್ರದಲ್ಲೇ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದೆ. ಹಾಗೆಯೇ ಮೈಸೂರು-ಕುಶಾಲನಗರ ಹೈವೇಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. – ಪ್ರತಾಪ್‌ ಸಿಂಹ, ಸಂಸದ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.