“ಮಳೆ ಜಾಗರಣೆ’ ಮಾಡಿದ ಮೈಸೂರಿಗರು…


Team Udayavani, Sep 28, 2017, 1:01 PM IST

mys11.jpg

ಮೈಸೂರು: ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಾಂಸ್ಕೃತಿಕ ನಗರಿ ಮೈಸೂರು ಅಕ್ಷರಶಃ ನಲುಗಿಹೋಗಿದೆ. ಭಾರೀ ಮಳೆಯ ಪರಿಣಾಮ ನಗರದ ರಾಜಕಾಲುವೆಗಳೆಲ್ಲ ಉಕ್ಕಿ ಹರಿದು, ರಸ್ತೆಗಳೆಲ್ಲ ಕಾಲುವೆಗಳಾಗಿ ಮಾರ್ಪಟ್ಟರೆ, ನೂರಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಆಯುಧಪೂಜೆ-ದಸರಾ ಹಬ್ಬದ ಸಿದ್ಧತೆಯಲ್ಲಿದ್ದ ಮೈಸೂರಿನ ಜನತೆ ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕುವುದರಲ್ಲೇ ಹೈರಾಣಾಗಿ ಇಡೀ ರಾತ್ರಿ ಜಾಗರಣೆ ಮಾಡುವಂತಾಯಿತು. 

ಮೈಸೂರಿನ ಹೊರವಲಯದಲ್ಲಿರುವ ಲಲಿತಾದ್ರಿಪುರ ಗ್ರಾಮದ ಬಳಿ ಇರುವ ತಿಪ್ಪಯ್ಯನ ಕೆರೆಯನ್ನು ಜಿಲ್ಲಾಡಳಿತ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗಷ್ಟೆ ಅಭಿವೃದ್ಧಿ ಪಡಿಸಿತ್ತು. ಮುಚ್ಚಿಹೋಗಿದ್ದ ರಾಜಕಾಲುವೆ ತೆರವಾದ ನಂತರ ಸುರಿದ ಭಾರಿ ಮಳೆಯಿಂದ ತುಂಬಿ ಜೆ.ಸಿ.ನಗರದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿತು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಜೆ.ಸಿ.ನಗರ ಬಹುತೇಕ ಜಲಾವೃತವಾಗಿ ಜೆ.ಸಿ.ನಗರದ ರಸ್ತೆಗಳಲ್ಲಿ ಕಾಲುವೆಯಂತೆ ನೀರು ಉಕ್ಕಿ ಹರಿಯಿತು.

ಚಾಮುಂಡಿ ಬೆಟ್ಟದ ಮೇಲ್ಭಾಗದಿಂದ ಹರಿದುಬಂದ ಭಾರೀ ಪ್ರಮಾಣದ ನೀರು ಬೆಟ್ಟದ ತಪ್ಪಲಿನಲ್ಲಿರುವ ತಾವರೆಕೆರೆ ತಲುಪಿ ಭರ್ತಿಯಾದ ಪರಿಣಾಮ ಕೆರೆ ಕೋಡಿ ಬಿದ್ದು, ನೀರು ಜೆ.ಸಿ.ನಗರ ಬಡಾವಣೆಗೆ ಹರಿದು ಬರುತ್ತಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಭಾರೀ ಮಳೆಗೆ ಶ್ರೀರಾಂಪುರ ಬಡಾವಣೆಯ ಹಲವು ಮನೆಗಳು ನೀರಿನಿಂದ ಜಲಾವೃತವಾಗಿದ್ದವು. 

ವಿಜಯನಗರದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿ ಎದುರಿನ ರಸ್ತೆ ಕಾಲುವೆಯಾಗಿ ಮಾರ್ಪಟ್ಟಿತ್ತು. ಇತ್ತ ಹುಣಸೂರು ರಸ್ತೆ ಮೇಲೂ ಮರ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಜೆಸಿಬಿ ಬಳಸಿ ಮರಗಳನ್ನು ರಸ್ತೆಗಳಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಮನೆಗಳಿಗೆ ನುಗ್ಗಿದ ನೀರು: ನಗರದ ತಗ್ಗು ಪ್ರದೇಶಗಳಾದ ಕನಕಗಿರಿ, ಗುಂಡೂರಾವ್‌ ನಗರ, ವಿದ್ಯಾರಣ್ಯಪುರಂ, ದಟ್ಟಗಳ್ಳಿ, ರಾಜೀವ್‌ ನಗರ, ಗಾಂಧಿನಗರ, ಚಾಮುಂಡಿ ಪುರಂ ಸೇರಿದಂತೆ ಹಲವು ಬಡಾವಣೆಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿತ್ತು. ವಿದ್ಯುತ್‌ ಕಡಿತದಿಂದ ಕತ್ತಲೆಯಲ್ಲಿಯೇ ನೀರು ಹೊರ ಹಾಕುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ಜನತೆ ಸಂಕಷ್ಟಕ್ಕೆ ಸಿಲುಕಿದ್ದರೂ ನಗರಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.  

ಅಧಿಕಾರಿಗಳ ಪರಿಶೀಲನೆ: ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ರಂದೀಪ್‌ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ಮಳೆಯಿಂದ ಜಲಾವೃತಗೊಂಡಿದ್ದ ಪಡುವಾರಹಳ್ಳಿ, ಬೋಗಾದಿ, ಆನಂದನಗರ, ಅರವಿಂದ ನಗರ, ಶ್ರೀರಾಂಪುರ, ಕನಕಗಿರಿ, ಎಲೆತೋಟ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲಾಧಿಕಾರಿ ರಂದೀಪ್‌ ಮಾತನಾಡಿ, ನಗರದಲ್ಲಿ 13 ಸೆಂಟಿಮೀಟರ್‌ನಷ್ಟು ದಾಖಲೆ ಮಳೆಯಾಗಿದೆ. ಅವೈಜಾnನಿಕ ಮೋರಿ ನಿರ್ಮಾಣ, ಹಾಗೂ ರಾಜಕಾಲುವೆಗಳನ್ನು ಮುಚ್ಚಿರುವುದೇ ಇದಕ್ಕೆ ಕಾರಣವಾಗಿದೆ. ದಸರಾ ಮುಗಿದ ಮರುದಿನವೇ ಈ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.  ಮೇಯರ್‌ ಎಂ.ಜೆ.ರವಿಕುಮಾರ್‌, ಪಾಲಿಕೆ ಆಯುಕ್ತ ಜೆ.ಜಗದೀಶ್‌, ಮೈಸೂರು ತಾಲೂಕು ತಹಶೀಲ್ದಾರ್‌ ರಮೇಶ್‌ ಬಾಬು, ಪಾಲಿಕೆ ಅಧೀಕ್ಷಕ ಎಂಜಿನಿಯರ್‌ ಸುರೇಶ್‌ಬಾಬು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಜನತೆ ಸ್ಥಳಾಂತರಕ್ಕೆ ಬೋಟ್‌ಗಳ ಬಳಕೆ: ಶ್ರೀರಾಂಪುರ 2ನೇ ಹಂತ, ಕನಕಗಿರಿ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಮನೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಸ್ತೆ ಮೇಲೆ ನಿಂತಿದ್ದ ನೀರಿನಲ್ಲಿ ಬೋಟ್‌ಗಳ ಸಹಾಯದಿಂದ ಸುಮಾರು 25ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದರು.

ವರುಣನ ಆರ್ಭಟಕ್ಕೆ ನಗರದ ಶ್ರೀರಾಂಪುರ, ಬೋಗಾದಿ, ಗುಂಡೂರಾವ್‌ ನಗರ, ಕನಕಗಿರಿ, ಹೈವೇ ವೃತ್ತ ಸೇರಿದಂತೆ ಹಲವು ಬಡಾವಣೆಗಳಲ್ಲಿ ನೂರಾರು ಮರಗಳು ಧರೆಗುರುಳಿವೆ. ಆದರೆ ಮಳೆ ಬಂದ ಕೂಡಲೇ ವಿದ್ಯುತ್‌ ಸಂಪರ್ಕ ಕಡಿತ‌ಗೊಂಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.