ನಾಲೆಗಳಿಗೆ ನೀರು ಬಿಡುವ ಕಾರ್ಯಕ್ಕೆ ಚಾಲನೆ


Team Udayavani, Jul 7, 2018, 2:16 PM IST

m1-naale.jpg

ಮೈಸೂರು: ಕೆ.ಆರ್‌.ನಗರ ತಾಲೂಕು ವ್ಯಾಪ್ತಿಯ ಚಾಮರಾಜ ಎಡದಂಡೆ, ಬಲದಂತೆ ಹಾಗೂ ರಾಮಸಮುದ್ರ ಅಣೆಕಟ್ಟು ನಾಲೆಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಬೆಳೆಗಳಿಗೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಬಳ್ಳೂರು ಸಮೀಪದ ಚಾಮರಾಜ ಅಣೆಕಟ್ಟೆ(ಬಳ್ಳೂರು ಕಟ್ಟೆ)ಗೆ ಬಾಗಿನ ಅರ್ಪಿಸಿ ನಾಲೆಗಳಿಗೆ ನೀರು ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ನೀರಿನ ಹರಿವಿನ ಪ್ರಮಾಣ: ಚಾಮರಾಜ ಎಡದಂಡೆ ನಾಲೆಯಲ್ಲಿ 39 ಕಿ.ಮೀ.ವರೆಗೆ, ಚಾಮರಾಜ ಬಲದಂಡೆ ನಾಲೆಯಲ್ಲಿ 63 ಕಿ.ಮೀ.ವರೆಗೆ ಸುಮಾರು 22,906 ಎಕರೆ, ರಾಮಸಮುದ್ರ ಅಣೆಕಟ್ಟು ನಾಲೆಯ 57 ಕಿ.ಮೀ.ವರೆಗೆ ಸುಮಾರು 6,822 ಎಕರೆ ಹಾಗೂ ಮಿರ್ಲೆ ಶ್ರೇಣಿ ನಾಲೆಗಳಲ್ಲಿ ಸುಮಾರು 4,800 ಎಕರೆ ಅಚ್ಚುಕಟ್ಟು ಪ್ರದೇಶಗಳ ಮುಂಗಾರು ಬೆಳೆಗೆ ಈ ನಾಲೆಗಳಿಂದ ನೀರು ಬಿಡಲಾಗುತ್ತಿದೆ.

ಅಣೆಕಟ್ಟು ನಾಲೆಗಳು ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣದ ಮೇಲೆ ಅವಲಂಬಿತವಾಗಿವೆ. ಆದ್ದರಿಂದ ನೀರಿನ ಲಭ್ಯತೆಗೆ ಅನುಗುಣವಾಗಿ ಕೃಷಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳೆ ಬೆಳೆಯುವಂತೆ ಕಾವೇರಿ ನೀರಾವರಿ ನಿಗಮದ ಎಂಜಿನಿಯರ್‌ಗಳು ಮನವಿ ಮಾಡಿದ್ದಾರೆ. 

ನಾಲೆಗಳಿಗೆ ನೀರು ಹರಿಸಿ: ನಾಲೆಯ ಕೊನೆಯ ಹಂತದ ಪ್ರದೇಶಗಳಿಗೆ ನೀರನ್ನು ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಈ ನಾಲೆಗಳ ಅಡಿಯಲ್ಲಿ ಬರುವ ನೀರನ್ನು ಉಪ ನಾಲೆಗಳಲ್ಲಿ ಕಟ್ಟು ಪದ್ಧತಿಯಲ್ಲಿ ಹರಿಸಲಾಗುವುದು. ಮುಂದೆ ಪ್ರಕೃತಿ ವೈಪರಿತ್ಯದಿಂದ ನದಿಯಲ್ಲಿ ನೀರಿನ ಹರಿವಿನ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾದಲ್ಲಿ ಅಣೆಕಟ್ಟೆಯಲ್ಲಿ ಲಭ್ಯವಿದ್ದ ನೀರನ್ನು ನಾಲೆಗಳಿಗೆ ಹರಿಸಲಾಗುವುದು. 

ಕಾನೂನು ಕ್ರಮ: ಬೆಳೆ ನಷ್ಟವಾದ ಪಕ್ಷದಲ್ಲಿ ಇಲಾಖೆ ಯಾವುದೇ ರೀತಿಯ ಪರಿಹಾರ ನೀಡುವುದಿಲ್ಲ. ಅಲ್ಲದೆ ಬೆಳೆನಷ್ಟಕ್ಕೆ ಕಾವೇರಿ ನೀರಾವರಿ ನಿಗಮ ಜವಾಬ್ದಾರಿಯಲ್ಲ. ನಾಲೆಗಳಲ್ಲಿ ನೀರು ಬಿಟ್ಟಾಗ ಅಡ್ಡಕಟ್ಟುವುದು, ನಾಲಾ ಏರಿ ಒಡೆಯುವುದು, ಕಟ್ಟಡಗಳಿಗೆ ಹಾನಿ ಮಾಡುವುದು, ನಾಲೆಗಳಿಗೆ ಪಂಪ್‌ಸೆಟ್‌, ಏರ್‌ಪೈಪ್‌ ಅಳವಡಿಸುವುದು ಹಾಗೂ ಟ್ಯೂಬಿನ ಗೇಟ್‌ಗಳನ್ನು ಮುರಿಯುವ ಕೆಲಸಕ್ಕೆ ಕೈಹಾಕಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ. 

ಹಾರಂಗಿ ಯೋಜನೆಯ ಅಧೀಕ್ಷಕ ಎಂಜಿನಿಯರ್‌ ಜಿ.ಪ್ರಸಾದ್‌, ಹಾರಂಗಿ ನಾಲಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಸತ್ಯಮೂರ್ತಿ, ಹಾರಂಗಿ ವಿತರಣಾ ಉಪ ವಿಭಾಗ ಕೆ.ಆರ್‌.ನಗರದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಚಂದ್ರಶೇಖರ್‌ ಮೊದಲಾದವರು ಹಾಜರಿದ್ದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.