![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 22, 2022, 7:03 PM IST
ಹುಣಸೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಸುಮಾರು 3-4 ವಯಸ್ಸಿನ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ತಾಲೂಕಿನ ನಾಗಮಂಗಲದ ಬಳಿಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಸುಮಾರು 8-8.30 ರ ವೇಳೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಹಿಂದಿನ ಎಡಗಾಲು ಮುರಿದಿದ್ದು, ಇಂಟರ್ನಲ್ ಬ್ಲೀಡಿಂಗ್ ಆಗಿ ತೀವ್ರ ಅಸ್ಪಸ್ಥಗೊಂಡಿದ್ದ ಚಿರತೆಯು ಸಾವನ್ನಪ್ಪಿದೆ. ದಾರಿ ಹೋಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಆರ್.ಎಫ್.ಓ. ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ವಾಹನ ಪತ್ತೆಗೆ ಮುಂದಾಗಿ, ಪೊಲೀಸರು ಹಾಗೂ ವರ್ಕ್ ಶಾಪ್ಗಳಿಗೆ ಮಾಹಿತಿ ನೀಡಿದ್ದಾರೆ.
ಶನಿವಾರ ಕಲ್ಬೆಟ್ಟದ ಮರ ಸಂಗ್ರಹಾಲಯದಲ್ಲಿ ಚಿರತೆಯ ಶವ ಪರೀಕ್ಷೆ ಯನ್ನು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎಫ್ ಡಾ.ಪ್ರಶಾಂತ್ಕುಮಾರ್, ವೈಲ್ಡ್ಲೈಫ್ ಟ್ರಸ್ಟ್ ಆಫ್ ಇಂಡಿಯಾದ ಕರ್ನಾಟಕ ಮುಖ್ಯಸ್ಥ ವೆಂಕಟನಾಯ್ಡು ಸಮ್ಮುಖದಲ್ಲಿ ಪಶು ವೈದ್ಯ ಡಾ.ರಮೇಶ್ ನಡೆಸಿದರು.
ಎಸಿಎಫ್ ಅನುಷಾ, ಆರ್.ಎಫ್.ಓ.ನಂದಕುಮಾರ್ ಹಾಗೂ ಸಿಬ್ಬಂದಿಗಳಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.