ರಸಗೊಬ್ಬರಕ್ಕಿಂತ ಶಿಕ್ಷಣಕ್ಕೆ ಕಡಿಮೆ ಅನುದಾನ: ಸಂಸದ ವಿಷಾದ


Team Udayavani, Sep 6, 2017, 12:36 PM IST

mys4.jpg

ನಂಜನಗೂಡು: ಅಕ್ಷರ ಜ್ಞಾನದಿಂದ ವಂಚಿತರಾದವರ ಸಂಖ್ಯೆಯೇ ಹೆಚ್ಚಿರುವ ನಮ್ಮಲ್ಲಿ ನಮ್ಮ ಸರ್ಕಾರಗಳು ರಸಗೊಬ್ಬರಕ್ಕೆ ನೀಡಿದಷ್ಟು ಪ್ರಾತಿನಿದ್ಯವನ್ನೂ ಶಿಕ್ಷಣಕ್ಕೆ ನೀಡಿಲ್ಲ ಎಂದು ಸಂಸದ ಆರ್‌ ಧ್ರುವನಾರಾಯಣ ವಿಷಾಧಿಸಿದರು.

ನಂಜನಗೂಡು ತಾಲೂಕು ಶಿಕ್ಷಕರ ಸಂಘ ಪಟ್ಟಣದ ಶಿವರಾತ್ರೀಶ್ವರ ಮಂಗಳ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಸಾಲಿನ ಮುಂಗಡ ಪತ್ರದಲ್ಲಿಯೂ ಶಿಕ್ಷಣಕ್ಕಾಗಿ ಶೇ 3 ರಷ್ಟು ಅನುದಾನ ನೀಡಿದೆ.

ಈ ಅನುದಾನ ಕನಿಷ್ಠ ಶೇ. 6ರಷ್ಟಾದರೂ ಹೆಚ್ಚಳವಾಗಬೇಕಿದೆ. ಇದರಿಂದಾಗಿ ರಾಷ್ಟ್ರದ ಶಿಕ್ಷಣ ಕ್ಷೇತ್ರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗುವಂತಾಗಿದೆ ಎಂದ ಸಂಸದರು ಶಿಕ್ಷಣದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರವೇ ಹಿರಿದಾಗಿದ್ದು, ರಾಜ್ಯದ 224 ಶಿಕ್ಷಣ ವಲಯದಲ್ಲಿ ನಂಜನಗೂಡು 80ನೇ ಸ್ಥಾನದಲ್ಲಿದೆ. ಈ ಸ್ಥಾನ ಸುಧಾರಿಸಲು ಶಿಕ್ಷಕರು ಶ್ರಮಿಸಬೇಕು ಎಂದರು.

ಸಮಾರಂಭದ ಪ್ರಮುಖ ಬಾಷಣಕಾರರಾಗಿ ಆಗಮಿಸಿದ್ದ ಶಾರದಾ ವಿಲಾಸ ಶಿಕ್ಷಣ ಸಂಸ್ಥೆಯ ನಿವ್ರತ್ತ ಪ್ರಾಂಶುಪಾಲ ಹೆಚ್‌ ಎಸ್‌ ಉಮೇಶ ಮಾತನಾಡಿ, “ಶಿಕ್ಷಕರಾದವರೆಲ್ಲರೂ ಗುರುವಾಗಲೂ ಸಾಧ್ಯವಿಲ್ಲ  ಗುರುವಿಗೆ ಸಮಾಜದ ಅತ್ಯುನ್ನತ ಸ್ಥಾನ ನೀಡಿದ ಸಂಸ್ಕೃತಿ ಭಾರತದ್ದು. ಈ ಸಂಸ್ಕೃತಿಯನ್ನು ಕಡೆಗಳಿಸಿದರೆ ಭಾರತಕ್ಕೇ ಭವೀಷ್ಯವೇ ಇಲ್ಲ ಎಂದು ಪ್ರತಿಪಾದಿಸಿದರು.

ವರುಣ ವಿಧಾನ ಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿಯ ಅಧ್ಯಕ್ಷ ಡಾ ಯತೀಂದ್ರ ಮಾತನಾಡಿ, ಭಾರತೀಯ ತತ್ವಸಿದ್ದಾಂತಕ್ಕೆ ವಿಶ್ವದ ಮೆರಗೂ ನೀಡಿದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣರು ನಿಮಗೆಲ್ಲ ನಿತ್ಯ ಆದರಣಿಯರಾಗಲಿ. ನಂಜನಗೂಡಿಗಿಂದು ಸುಸಜ್ಜಿತವಾದ ಗುರು ಭವನದ ಅವಶ್ಯಕತೆ ಇದ್ದು ತಾವು ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುವುದಾಗಿ ಘೋಷಿಸಿದರು.

ಸಮಾರಂಭದ ಅದ್ಯಕ್ಷತೆ ವಹಿಸಿದ್ದ ಶಾಸಕ ಕಳಲೆ ಕೇಶವಮೂರ್ತಿ ಅದ್ಯಕ್ಷತೆ ವಹಿಸಿಮಾತನಾಡಿ, ದೇಶದ ಅಭಿವೃದ್ಧಿಗೆ ಶಿಕ್ಷಣದ ಪ್ರಗತಿ ಅತೀ ಅವಶ್ಯಕವಾಗಿದೆ. ಆಂಗ್ಲ ಭಾಷೆಯ ವ್ಯಾಮೋಹವೇ ಗ್ರಾಮೀಣ ಜನತೆಯ ವಲಸೆಗೆ ಕಾರಣವಾಗಿದೆ ಸರ್ಕಾರ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೇ ಒತ್ತು ನೀಡಬೇಕಿದೆ ಎಂದರು.

ಸಮಾರಂಭದಲ್ಲಿ ಶಾಸಕ ಕಳಲೆ ಹಾಗೂ ಸಂಸದರೊಡಗೂಡಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ ಜಿಪಂ ಸ್ಥಾಯಿ ಸಮಿತಿ ಅದ್ಯಕ್ಷ ದಯಾನಂದಮೂರ್ತಿ ,ತಾಪಂ ಉಪಾದ್ಯಕ್ಷ ಗೋವಿಂದರಾಜು, ಸ್ಥಾಯಿ ಸಮಿತಿಯ ಅದ್ಯಕ್ಷ ಶಿವಣ್ಣ, ನಗರಸಭಾ ಅದ್ಯಕ್ಷೆ ಪುಷ್ಪಲತಾ ಕಮಲೇಶ, ಎಪಿಎಂಸಿ ಅದ್ಯಕ್ಷ ಕಾಗಲವಾಡಿ ಮಾದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ, ತಹಶೀಲ್ದಾರ್‌ ದಯಾನಂದ,

-ಅಕ್ಷರ ದಾಸೋಹದ ಮಹೇಶ ದೈ.ಶಿ/ ಪರಿವೀಕ್ಷಕ ಮಧುರದಾಸ್‌ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅದ್ಯಕ್ಷ ಮುದ್ದು ಮಾದೇಗೌಡ ಜಿಲ್ಲಾ ಉಪಾದ್ಯಕ್ಷ ಹೆಚ್‌.ಎಸ್‌ ಮಹೇಶ್‌ ತಾಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅದ್ಯಕ್ಷ ರವೀಶ ಮೂರ್ತಿ ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಸಮಾರಂಭಕ್ಕೆ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸರ್ವಪಲ್ಲಿ ರಾಧಾಕೃಷ್ಣರ ಭಾವಚಿತ್ರದ ಮೆರವಣಿಗೆ ನಡೆಯಿತು.

ಇತ್ತ ಶಿಸ್ತಿನ ಪಾಠ – ಅತ್ತ ಊಟಕ್ಕಾಗಿ ನೂಕಾಟ
ಶಿಕ್ಷಕ ದಿನಾಚರಣೆಯ ಸಮಾರಂಭದ ಮುಖ್ಯ ಭಾಷಣಕಾರರಾದ ಉಮೇಶ ಶಿಕ್ಷಕರಿಗೆ ಸಂಸ್ಕೃತಿ ಶಿಸ್ತಿನ ಪಾಠ ಹೇಳುತ್ತಿದ್ದಾಗಲೇ (ಸಮಾರಂಭದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನಕ್ಕಿಂತ ಮೊದಲೇ) ಸಭಿಕರು, ಹಾಲಿ ಶಿಕ್ಷಕರು ಸಭೆಯಿಂದ ಎದ್ದು ಊಟದ ಹಾಲಿನತ್ತ ತೆರಳುತ್ತಿದ್ದರು. ಅಲ್ಲಿ ಭೋಜನಕ್ಕೆ ಕೆಲಸಮಯ ನೂಕು ನೂಗಲು ಉಂಟಾಯಿತು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.