ನುಗು ಏತ ನೀರಾವರಿಗೆ ಆದ್ಯತೆ: ಬಿಎಸ್‌ವೈ


Team Udayavani, Mar 14, 2017, 1:05 PM IST

mys2.jpg

ನಂಜನಗೂಡು: ನಂಜನಗೂಡು ತಾಲೂಕಿನ ನಾಲ್ಕು ದಶಕಗಳ ಬೇಡಿಕೆ ಹಾಗೂ ಮಾಜಿ ಸಚಿವ ದಿ| ಎಂ.ಮಹದೇವು ಅವರ ಕನಸಾದ ನುಗು ಏತ ನೀರಾವರಿ ಯೋಜನೆಗೆ ತಾವು ಪ್ರಥಮ ಪ್ರಾಶಸ್ತ್ಯ ನೀಡಿ ಯೋಜನೆಯನ್ನು ಪೂರ್ಣಗೊಳಿಸಿ ಕೊಡುವುದಾಗಿ ಮಾಜಿ ಸಿಎಂ, ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪಭರವಸೆ ನೀಡಿದರು.

ಸೋಮವಾರ ತಾಲೂಕಿನ ಹರದನಹಳ್ಳಿ, ಹುಲ್ಲಹಳ್ಳಿ, ಹಲ್ಲರೆ, ದುಗ್ಗಳ್ಳಿ, ಹುರಾ, ಹೇಡಿಯಾಲ ಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್‌ ಪ್ರಸಾದರ ಪರವಾಗಿ ಮತಯಾಚಿಸಿ ಮಾತನಾಡಿದ ಯಡಿಯೂರಪ್ಪ, ಈ ಭಾಗದ ಬಹುದಿನಗಳ ಬೇಡಿಕೆ,

ದಿ|ಎಂ.ಮಹದೇವುರವರ ಕನಸಾದ ನುಗು ಏತ ನೀರಾವರಿ ಯೋಜನೆಯನ್ನು 2018 ರಲ್ಲಿ ಮುಖ್ಯಮಂತ್ರಿಯಾಗಿ ನಡೆಸುವ ಮೊದಲ ಸಚಿವಸಂಪುಟದಲ್ಲಿಯೇ ಮಂಜೂರು ಮಾಡಲಾಗುವುದು. ಕ್ಷೇತ್ರದ ಮತದಾರರು ಈ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸಪ್ರಸಾದರನ್ನು ಗೆಲ್ಲಿಸಿ ಬಿಜೆಪಿಯ ಅಧಿಕಾರದ ಅಡಿಪಾಯ ನಿರ್ಮಿಸಿಕೊಟ್ಟರೆ ನುಗು ನೀರನ್ನು ನಿಮ್ಮ ಜಮೀನಿಗೆ ಪೂರೈಸುವ ಜವಾಬ್ದಾರಿ ತಮ್ಮದು ಎಂದು ಅವರು ಘೋಷಿಸಿದರು

ಸಿದ್ದರಾಮಯ್ಯಗೆ ಭ್ರಮೆ: ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ನೀಡಿದ್ದೆಷ್ಟು, ತಮ್ಮ ಅವಧಿಯಲ್ಲಿ ತಾವು ನೀಡಿದ್ದೆಷ್ಟು ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಸ್ಥಾಪನೆ ಹಾಗೂ ವಾಲ್ಮೀಕಿ ಸಮುದಾಯಕ್ಕೆ ಭಗೀರಥ ಭವನ ಆರಂಭಿಸಿದ್ದು ಯಾರು ಎಂದು ಪ್ರಶ್ನಿಸಿದರು.

ತಮ್ಮ ವಿರುದ್ಧ ದ್ವೇಷ ರಾಜಕಾರಣ ಮಾಡಲು ನೀವು ಸೃಷ್ಟಿಸಿ ದಾಖಲಿಸಿದ ಎಲ್ಲಾ ದೂರುಗಳೂ ಆರೋಪರಹಿತವೆಂದು ನ್ಯಾಯಾಲಯವೇ ತೀರ್ಪಿತ್ತಿದೆ. ಆದರೂ ನೀವು ತಮ್ಮನ್ನು ಭ್ರಷ್ಟಾಚಾರಿ ಎಂದರೆ ಅದು ಅಕ್ಷಮ್ಯ ಅಪರಾಧವಾಗುತ್ತದೆ. ನಂಜನಗೂಡು ಹಾಗೂ ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲೂ ಜನತೆ ನಿಮ್ಮ ಉಡಾಫೆ ಆಡಳಿತಕ್ಕೆ ಪಾಠ ಕಲಿಸಲು ಸಿದ್ದರಾಗಿದ್ದಾರೆ ಎಂದರು.

ನೀವು ಮತ್ತು ನಿಮ್ಮ ಸಚಿವ ಸಂಪುಟ ಸದಸ್ಯರು ರಾಜ್ಯವನ್ನು ಲೂಟಿ ಮಾಡಿ ನೀಡಿದ ಕಪ್ಪಕ್ಕೆ ಉತ್ತರ ಪ್ರದೇಶದಲ್ಲಿ ಬಂದಿದ್ದು ಕೇವಲ 7 ಸ್ಥಾನ. ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಪ್ರಧಾನಿಯವರನ್ನು ಶ್ಲಾ ಸಿದ್ದಾರೆ. ನೀವು ಮಾತ್ರ ದ್ವೇಷದಿಂದ ಮೋದಿಯವರನ್ನು ಬೇಕಾ ಬಿಟ್ಟಿಯಾಗಿ ಟೀಕಿಸುತ್ತಿದ್ದೀರಿ.

ಆದಾಯ ತೆರಿಗೆ ಇಲಾಖೆ ವಶಕ್ಕೆ ಪಡೆದ ಡೈರಿಯಲ್ಲಿ ತಮ್ಮ ಹೆಸರಿದ್ದರೆ ಹೇಳಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಡೈರಿಯಲ್ಲಿ ಅವರ ಹೆಸರಿಲ್ಲದೆ ನನ್ನ ಹೆಸರಿದೆಯೇ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಡೈರಿ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಸಂಪುಟದ ಸದಸ್ಯರ ಪಾತ್ರವಿಲ್ಲವೆಂದಾದರೆ ನೀವೇ ಸಿಬಿಐ ತನಿಖೆಗೆ ಶಿಫಾರಸು ಮಾಡಿ ಎಂದು ಅವರು ಸಿದ್ದರಾಮಯ್ಯನವರಿಗೆ ಸವಾಲೆಸೆದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.