ಗ್ರಾಮಗಳಿಗೆ ಸೇತುವೆಗಳು ದಾರಿ ದೀಪ


Team Udayavani, Mar 8, 2017, 12:48 PM IST

mys3.jpg

ಮೈಸೂರು: ನದಿ ಮತ್ತು ತೊರೆಗಳಿಂದ ನಗರ ಹಾಗೂ ಪಟ್ಟಣಗಳ ನಡುವಿನ ಸಂಪರ್ಕ ಕಳೆದುಕೊಂಡಿರುವ ಬಹುತೇಕ ಗ್ರಾಮಗಳಿಗೆ ಸೇತುವೆಗಳು ದಾರಿ ದೀಪವಾಗುತ್ತವೆ ಎಂದು ಬ್ರಿಡ್ಜ್ ಮ್ಯಾನ್‌ ಎಂದೇ ಖ್ಯಾತರಾಗಿರುವ ಸುಳ್ಯದ ಆರ್ಯಶಿಲ್ಪ ಕಾರ್ಖಾನೆ ಮಾಲೀಕರಾದ ಪದ್ಮಶ್ರೀ ಬಿ.ಗಿರೀಶ್‌ ಭಾರದ್ವಾಜ್‌ ಹೇಳಿದರು.

ನಗರದ ವಿದ್ಯಾವಿಕಾಸ್‌ ಎಂಜಿ ನಿಯರಿಂಗ್‌ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಉಪನ್ಯಾಸ ನೀಡಿದ ಅವರು, ಯಾವುದೇ ಒಂದು ಗ್ರಾಮ ಅಭಿವೃದ್ಧಿ ಹೊಂದ ಬೇಕಾದರೆ ಆ ಗ್ರಾಮಕ್ಕೆ ಅಕ್ಕಪಕ್ಕದ ನಗರಗಳೊಂದಿಗೆ ಸಂಪರ್ಕ ಕಲ್ಪಿಸ ಬೇಕಾದ ಅಗತ್ಯವಿದೆ. 

ಹೀಗಾಗಿ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನ ಉತ್ತಮ ಗೊಳ್ಳಲಿದೆ. ಅಲ್ಲದೆ ಗ್ರಾಮದ ಜನರಿಗೆ ಶಿಕ್ಷಣ ಹಾಗೂ ಆರೋಗ್ಯ ಸೇವೆ ಒದಗಿಸಲು ಗ್ರಾಮ ಹಾಗೂ ನಗರ ಪ್ರದೇಶಗಳ ನಡುವೆ ಸಂಪರ್ಕ ಕಲ್ಪಿಸುವ ಅಗತ್ಯವಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದ್ದರೂ ಇಂದಿಗೂ ಅನೇಕ ಗ್ರಾಮಗಳು ನಗರ ಮತ್ತು ಪಟ್ಟಣಗಳ ಸಂಪರ್ಕವಿಲ್ಲದೆ ದೂರ ಉಳಿದಿವೆ.

ಇನ್ನು ನದಿ ಮತ್ತು ತೊರೆಗಳಿಂದಾಗಿ ನಗರ ಪ್ರದೇಶದ ಸಂಪರ್ಕವಿಲ್ಲದ ಗ್ರಾಮಗಳಿಗೆ ಹಳ್ಳಿಗಳಿಗೆ ತೂಗು ಸೇತುವೆ ಉತ್ತಮ ಮಾರ್ಗವಾಗಿದ್ದು, ಈ ಗ್ರಾಮಗಳಿಗೆ ಸೇತುವೆಗಳು ದಾರಿದೀಪವಾಗಲಿದೆ. ಆ ಮೂಲಕ ನದಿ ಮತ್ತು ತೊರೆಗಳಿಂದ ನಗರದಿಂದ ಸಂಪರ್ಕ ಕಳೆದುಕೊಂಡ ಗ್ರಾಮೀಣ ಪ್ರದೇಶದ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಸಮರ್ಪಕವಾಗಿ ಕಲ್ಪಿಸುವಲ್ಲಿ ಸೇತುವೆಗಳು ಪ್ರಧಾನ ಪಾತ್ರ ವಹಿಸಲಿವೆ ಎಂದು ಹೇಳಿದರು.

ಕರ್ನಾಟಕದಲ್ಲಿ 91, ಕೇರಳದಲ್ಲಿ 30, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ತಲಾ 3 ಸೇರಿದಂತೆ ಒಟ್ಟು 127 ಪಾದಚಾರಿ ತೂಗು ಸೇತುವೆಗಳನ್ನು ನಿರ್ಮಾಣ ಮಾಡಿದ್ದು, ಪಾದಚಾರಿ ತೂಗು ಸೇತುವೆಗಳನ್ನು ಮಿತವ್ಯಯ ಮತ್ತು ಕಡಿಮೆ ಅವಧಿಯಲ್ಲಿ ಈ ನಿರ್ಮಿಸಬಹುದು ಎಂದು, ತಾವು ನಿರ್ಮಿಸಿರುವ ಪಾದಚಾರಿ ತೂಗು ಸೇತುವೆಗಳು ಹಾಗೂ ಅದಕ್ಕಾಗಿ ಬಳಿಸಿರುವ ಸಾಮಗ್ರಿಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಪದ್ಮಶ್ರೀ ಗಿರೀಶ್‌ ಭಾರದ್ವಾಜ್‌ ಅವರನ್ನು ವಿದ್ಯಾವಿಕಾಸ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ವಾಸು, ಸಂಸ್ಥೆ ಕಾರ್ಯದರ್ಶಿ ವಿ.ಕವೀಶ್‌ಗೌಡ, ಕಾಲೇಜಿನ ಪ್ರಾಂಶುಪಾಲ ಡಾ. ಎಂ. ರವಿಶಂಕರ್‌, ನಿರ್ದೇಶಕ ಡಾ. ಬಿ. ಚಂದ್ರಶೇಖರ್‌ ಹಾಜರಿದ್ದರು.

ಟಾಪ್ ನ್ಯೂಸ್

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

5

Karkala: ಬಸ್‌ ನಿಲ್ದಾಣದಲ್ಲಿ ಲಘು ವಾಹನ!ಬಸ್‌ ನಿಲ್ದಾಣದ ಬಗ್ಗೆ ಪುರಸಭೆ ದಿವ್ಯ ನಿರ್ಲಕ್ಷ್ಯ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.