ಹುಲಿ ಉಪಟಳಕ್ಕೆ  ಕಡಿವಾಣ ಹಾಕಿ


Team Udayavani, Feb 5, 2023, 4:20 PM IST

ಹುಲಿ ಉಪಟಳಕ್ಕೆ  ಕಡಿವಾಣ ಹಾಕಿ

ಎಚ್‌.ಡಿ.ಕೋಟೆ: ಸುಮಾರು 15 ದಿನಗಳ ಹಿಂದೆ ಆದಿವಾಸಿ ಯುವಕನೊಬ್ಬನನ್ನು ಕೊಂದಿರುವುದೇ ಅಲ್ಲದೆ ಹಾಡಿಯಲ್ಲಿ ರಾಸುಗಳನ್ನು ಬಲಿ ಪಡೆಯುತ್ತಿರುವ ನರಭಕ್ಷಕ ಹುಲಿಯನ್ನುಸೆರೆ ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿ ಆದಿವಾಸಿಗರು ಬಳ್ಳೆ ಅರಣ್ಯ ಇಲಾಖೆ ಕಚೇರಿ ಎದುರಿನಲ್ಲಿ 2 ದಿನಗಳ ಹಿಂದಿನಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳುಹಾಗೂ ತಾಲೂಕು ಗಿರಿಜನ ಅಭಿವೃದ್ಧಿ ಇಲಾಖೆಅಧಿಕಾರಿಗಳು ಆಗಮಿಸಿ ಹುಲಿ ಸೆರೆಗೆ ಕ್ರಮಕೈಗೊಳ್ಳುವ ಭರವಸೆ ನೀಡಿ ಪ್ರತಿಭಟನೆಹಿಂಪಡೆಯುವಂತೆ ಮನವಿ ಮಾಡಿಕೊಂಡರೂಆದಿವಾಸಿ ಗರು ಹುಲಿ ಸ್ಥಳಾಂತರಿಸುವ ತನಕಪ್ರತಿಭಟನೆ ಕೈಬಿಡುವ ಮಾತೇ ಇಲ್ಲ ಎಂದುಪಟ್ಟು ಹಿಡಿದು ಕುಳಿತು ಪ್ರತಿಭಟನೆ ಮುಂದುವರೆಸುತ್ತಿದ್ದಾರೆ.

ಏನದು ಘಟನೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿಯ ಬಳ್ಳೆ ಅರಣ್ಯದಲ್ಲಿ 15 ದಿನಗಳ ಹಿಂದೆ ಅರಣ್ಯಇಲಾಖೆ ಸಮೀಪದಲ್ಲಿಯೇ ಹುಲಿಯೊಂದು ಆದಿವಾಸಿ ಯುವಕ ಮಂಜು (17) ಎಂಬುವವನ್ನು ಬಲಿ ತೆಗೆದುಕೊಂಡಿತ್ತು. ಆಸಂದರ್ಭದಲ್ಲಿ ರೊಚ್ಚಿಗೆದ್ದ ಬಳ್ಳೆ ಹಾಡಿಯ ಆದಿವಾಸಿಗರು ಮತ್ತು ಆದಿವಾಸಿ ಮುಖಂಡರುಅರಣ್ಯ ಇಲಾಖೆ ಎದುರಿನಲ್ಲೇ ಮೈಸೂರುಮಾನಂದವಾಡಿ ರಸ್ತೆ ತಡೆ ನಡೆಸಿ ಹುಲಿಮನುಷ್ಯನನ್ನು ಕೊಂದು ತಿಂದಿರುವುದರಿಂದಅದನ್ನು ಸ್ಥಳಾಂತರಿಸುವಂತೆ ಪ್ರತಿಭಟನೆ ನಡೆಸಿದ್ದರು.

ಮಧ್ಯ ಪ್ರವೇಶಿಸಿದ ವಿವಿಧ ಇಲಾಖೆಗಳಅಧಿಕಾರಿಗಳು ಹುಲಿಯನ್ನು ಸ್ಥಳಾಂತರಿಸುವಭರವಸೆ ನೀಡಿದ ಬಳಿಕಷ್ಟೇ ಪ್ರತಿಭಟನೆಕೈಬಿಡಲಾಗಿತ್ತು. ಮುಂದುವರಿದು ಅದೇ ಹುಲಿಹಾಡಿಯಲ್ಲಿ ಇಲ್ಲಿಯ ತನಕ 4 ಹಸುಗಳನ್ನುಕೊಂದು ತಿಂದಿದೆ. ಇದರಿಂದ ಭಯಬೀತರಾದಹಾಡಿಯ ಮಂದಿ ನಮ್ಮ ಜೀವಕ್ಕೂ ರಕ್ಷಣೆ ಇಲ್ಲ, ಕೂಡಲೆ ನರಭಕ್ಷ ಹುಲಿಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕೆಂದು ಪಟ್ಟು ಹಿಡಿದುಶುಕ್ರವಾರದಿಂದ ಅರಣ್ಯ ಇಲಾಖೆ ಎದುರಿನಲ್ಲಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ.

ಶುಕ್ರವಾರ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಹಿರಿಯ ಅಧಿಕಾರಿಗಳು ಮತ್ತು ತಾಲೂಕುಸಮಾಜ ಗಿರಿಜನ ಅಭಿವೃದ್ಧಿ ಇಲಾಖೆ ಅಧಿಕಾರಿನಾರಾಯಣ ಸ್ವಾಮಿ ಹುಲಿ ಸೆರೆಗೆ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡರೂಮನವಿಗೆ ಕ್ಯಾರೆ ಅನ್ನದ ಆದಿವಾಸಿಗರು ಇಡೀ ರಾತ್ರಿ ಪ್ರತಿಭಟನಾ ಸ್ಥಳದಲ್ಲಿ ಕಳೆದು ಶನಿವಾರಕೂಡ ಪ್ರತಿಭಟನೆ ಮುಂದುವರಿಸಿದ್ದಾರೆ. ಹುಲಿಸೆರೆ ಹಿಡಿದು ಸ್ಥಳಾಂತರಿಸುವ ತನಕ ಪ್ರತಿಭಟನೆಕೈಬಿಡುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಆದಿವಾಸಿ ಮುಖಂಡರಾದ ರಮೇಶ,ಮಾಸ್ತಿ, ರಾಮು, ಆನೆಮಾಳ ಅಯ್ಯಪ್ಪ, ಹರೀಶ,ಅಂಬಿಕಾ, ಜಯ, ಗಂಗೆ, ಮಂಜುಳಾ, ರವಿ,ಕುಮಾರಿ, ದೇವಿ, ಶಾಂತ, ಬಿಂದು ಸುಶ್ಮಿತ,ಸುಶೀಲ, ಅಪ್ಪು, ಸಣ್ಣಪ್ಪ, ಅನಿಲ್‌ ಕುಮಾರ್‌, ಮಾರ, ಚಿಕ್ಕಣ್ಣ ಪ್ರತಿಭಟನೆ ನಡೆಯಿತು.

ನರಭಕ್ಷಕ ಹುಲಿಯಾದರೆ ಖಂಡಿತ ಕ್ರಮ :

ಮಂಜು ಮೇಲೆ ದಾಳಿ ನಡೆಸಿ ಸಾಯಿಸಿದ ಹುಲಿ ಚಲನವಲನ ಗಮನಿಸಲು ಸ್ಥಳದಲ್ಲಿ ಸಿ.ಸಿಕ್ಯಾಮೆರಾಗಳನ್ನು ಅಳವಡಿಸಿದ್ದರೂ ಹುಲಿಯ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಿಲ್ಲ.ಹುಲಿ ಇರುವುದು ಖಾತರಿ ಪಟ್ಟರೆ ಸೆರೆ ಹಿಡಿದು ಅದನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.ಹುಲಿ ಮನುಷ್ಯನನ್ನು ಭಕ್ಷಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟರೆ ಹುಲಿ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ನೀಡಿದರೂ ಇದಕ್ಕೆ ಒಪ್ಪದ ಆದಿವಾಸಿಗರು 2ನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.